ಕೆರಗೋಡು ಧ್ವಜ ವಿವಾದ: ಜನರ ವಿರೋಧ ಅರಿತು ಬಿಜೆಪಿ-ಜೆಡಿಎಸ್‌ ಹಿಂದೆ ಸರಿದಿವೆ: ಸಚಿವ ಚಲುವರಾಯಸ್ವಾಮಿ

Date:

Advertisements

ಕೆರಗೋಡು ಧ್ವಜ ವಿವಾದದಲ್ಲಿ ಸಂಘಪರಿವಾರದ ನಡೆಗೆ ಮಂಡ್ಯದ ಜನರು ವಿರುದ್ಧವಿದ್ದಾರೆ. ಇದು ಅರ್ಥವಾದ ಮೇಲೆ ಮಂಡ್ಯ ಬಂದ್‌ನಿಂದ ಬಿಜೆಪಿ, ಜೆಡಿಎಸ್‌ ಹಿಂದೆ ಸರಿದಿವೆ. ಜೆಡಿಎಸ್‌ ಸಂಪೂರ್ಣವಾಗಿ ದೂರ ಉಳಿದರೆ, ಬಿಜೆಪಿ ನಾಮ್ ಕೆ ವಾಸ್ತೆಗೆ ಪ್ರತಿಭಟನೆ ನಡೆಸಿದೆ ಎಂದು ಬಿಜೆಪಿ-ಜೆಡಿಎಸ್‌ ವಿರುದ್ಧ ಕೃಷಿ ಸಚಿವ ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಅವರು, “ಕೇಸರಿ ಧ್ವಜ ವಿವಾದದಲ್ಲಿ ರಾಜಕೀಯ ಲಾಭ ಪಡೆಯಲು ಬಿಜೆಪಿ-ಜೆಡಿಎಸ್‌ ಯತ್ನಿಸಿದ್ದವು. ಅದರೆ, ಜಿಲ್ಲೆಯ ಜನರು ಅದಕ್ಕೆ ವಿರುದ್ಧವಿದ್ದಾರೆ. ಬಂದ್‌ಗೆ ಬೆಂಬಲ ವ್ಯಕ್ತವಾಗಿಲ್ಲ. ಬಿಜೆಪಿಗರು ಬೈಕ್ ರ್‍ಯಾಲಿ ಮಾಡಿದ್ದಾರೆ. ಎಷ್ಟು ಸಾವಿರ ಜನ ಬಂದಿದ್ದರೋ ನಮಗೆ ಲೆಕ್ಕವಿಲ್ಲ” ಎಂದು ವ್ಯಂಗ್ಯವಾಡಿದ್ದಾರೆ.

“ಸಂವಿಧಾನ, ಪ್ರಜಾಪ್ರಭುತ್ವ ಹಾಗೂ ರಾಷ್ಟ್ರಧ್ವಜದ ವಿರುದ್ಧ ಬಿಜೆಪಿಗರು ಘೋಷಣೆ ಕೂಗಿದ್ದಾರೆ. ಕೇಸರಿ ಧ್ವಜ ಹಾರಿಸಲು ಬೇರೆ ಜಾಗ ಇದೆ. ನಮ್ಮ ಮೊದಲನೇ ಆದ್ಯತೆ ರಾಷ್ಟ್ರ, ಸಂವಿಧಾನ, ಪ್ರಜಾಪ್ರಭುತ್ವ. ಆದರೆ, ಕೇಸರಿ ಧ್ವಜ ಹಾರಿಸಿ, ಬಿಜೆಪಿ-ಜೆಡಿಎಸ್‌ ತಪ್ಪು ಮಾಡಿವೆ. ಅವರಿಗೆ ಜನರು ಉತ್ತರ ಕೊಡಬೇಕು” ಎಂದಿದ್ದಾರೆ.

Advertisements

“ಮಂಡ್ಯದಲ್ಲಿ ಧರ್ಮಗಳ ನಡುವಿನ ಘರ್ಷಣೆಗೆ ಅವಕಾಶವಿಲ್ಲ. ಇದು ಕುವೆಂಪು ಅವರನ್ನು ಪ್ರೀತಿಸುವ ಜಿಲ್ಲೆ. ಪ್ರಚೋದನೆಗೆ ಇಲ್ಲಿನ ಜನರು ಬಲಿಯಾಗುವುದಿಲ್ಲ. ಮೊನ್ನೆ ದೇವೇಗೌಡರು ಕೇಸರಿ ಶಾಲು ಹಾಕಿದ್ದು ತಪ್ಪು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿ-ಜೆಡಿಎಸ್‌ ತಮ್ಮ ತಪ್ಪು ಒಪ್ಪಿಕೊಳ್ಳಲಾಗದೆ, ವ್ಯರ್ಥ ಬಂದ್‌ ಮಾಡಿದ್ದಾರೆ. ಅವರಿಗೆ ಜನರ ಉತ್ತರ ಕೊಡುತ್ತಾರೆ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X