ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ | ಕಾಂಗ್ರೆಸ್ ನೇತೃತ್ವದ UDFಗೆ ಭರ್ಜರಿ ಜಯ; LDFಗೆ ಹಿನ್ನಡೆ; ರಾಜಧಾನಿ ತಿರುವನಂತಪುರ ಬಿಜೆಪಿ ವಶಕ್ಕೆ!

Date:

ಕೇರಳದ 1,199 ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಫಲಿತಾಂಶವು ಶನಿವಾರ ಪ್ರಕಟವಾಗಿದ್ದು, ವಿಪಕ್ಷ ಯುಡಿಎಫ್‌ ಕ್ಲೀನ್ ಸ್ವೀಪ್ ಸಾಧಿಸಿದ್ದು, ಆಡಳಿತಾರೂಢ ಎಲ್‌ಡಿಎಫ್‌ಗೆ ಹಿನ್ನಡೆಯಾಗಿದೆ. ಈ ನಡುವೆ ಎನ್‌ಡಿಎ ಕೂಟವು ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಅಧಿಕಾರಕ್ಕೇರುವ ಮೂಲಕ ಇತಿಹಾಸ ಸೃಷ್ಟಿಸಿದೆ.

- Advertisement -

2026ರ ವಿಧಾನಸಭಾ ಚುನಾವಣೆಗೂ ಮುನ್ನ ನಡೆದಿದ್ದ ಈ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಸೆಮಿಫೈನಲ್ ಎಂದೇ ಪರಿಗಣಿಸಲಾಗಿತ್ತು. ಈ ‘ಸೆಮಿಫೈನಲ್’ನಲ್ಲಿ ಆಡಳಿತಾರೂಢ ಎಲ್‌ಡಿಎಫ್‌ಗೆ ಹಿನ್ನಡೆ ಆಗಿರುವುದು ಆತಂಕಕ್ಕೆ ದೂಡಿದರೆ, ಭರ್ಜರಿ ಜಯ ಗಳಿಸಿರುವ ಯುಡಿಎಫ್‌ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೇರುವ ಕನಸು ಕಾಣುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಕೇರಳದಲ್ಲಿ ಆರು ಪಾಲಿಕೆಗಳು, 14 ಜಿಲ್ಲಾ ಪಂಚಾಯತ್‌ಗಳು, 86 ಪುರಸಭೆಗಳು, 152 ಬ್ಲಾಕ್ ಪಂಚಾಯತ್‌ಗಳು ಮತ್ತು 941 ಗ್ರಾಮ ಪಂಚಾಯತ್‌ಗಳಿಗೆ ಡಿಸೆಂಬರ್ 9 ಮತ್ತು 11 ರಂದು ಎರಡು ಹಂತಗಳಲ್ಲಿ ಮತದಾನ ಪ್ರಕ್ರಿಯೆ ನಡೆದಿದ್ದವು. ಡಿಸೆಂಬರ್ 9 ರಂದು ಮೊದಲ ಹಂತದ ಚುನಾವಣೆಯಲ್ಲಿ ಶೇ. 70.9 ರಷ್ಟು ಮತದಾನವಾಗಿದ್ದರೆ, ಡಿಸೆಂಬರ್ 11 ರಂದು ನಡೆದ ಎರಡನೇ ಹಂತದ ಚುನಾವಣೆಯಲ್ಲಿ ಶೇ. 76.08 ರಷ್ಟು ಮತದಾನ ದಾಖಲಾಗಿದ್ದವು.

ಯುಡಿಎಫ್ (United Democratic Front – UDF) ಕೇರಳದಲ್ಲಿ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ನೇತೃತ್ವದ ಪ್ರಮುಖ ರಾಜಕೀಯ ಮೈತ್ರಿಕೂಟವಾಗಿದೆ. ಈ ಮೈತ್ರಿಕೂಟದಲ್ಲಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML), ಕೇರಳ ಕಾಂಗ್ರೆಸ್ (ಜೋಸೆಫ್), ಕೇರಳ ಕಾಂಗ್ರೆಸ್ (ಜೇಕಬ್) ಹಾಗೂ ರೆವಲ್ಯೂಷನರಿ ಸೋಷಲಿಸ್ಟ್ ಪಾರ್ಟಿ, ಡೆಮಾಕ್ರಟಿಕ್ ಪಕ್ಷ, ವೆಲ್ಫೇರ್ ಪಾರ್ಟಿ ಜೊತೆಗೆ ಕೆಲವು ಸಣ್ಣಪುಟ್ಟ ಪಕ್ಷಗಳು ಮತ್ತು ಸ್ವತಂತ್ರ ಅಭ್ಯರ್ಥಿಗಳು ಕೈಜೋಡಿಸಿಕೊಂಡಿದ್ದಾರೆ.

kerala elections 1

ಇನ್ನು ಎಲ್‌ಡಿಎಫ್‌(Left Democratic Front – LDF)ನಲ್ಲಿ ಆಡಳಿತಾರೂಢ ಪಕ್ಷವಾಗಿರುವ ಸಿಪಿಐ(ಎಂ) ಪ್ರಮುಖ ಪಕ್ಷವಾಗಿದ್ದು, ಸಿಪಿಐ, ಕೇರಳ ಕಾಂಗ್ರೆಸ್ (ಎಂ), ಇಂಡಿಯನ್ ನ್ಯಾಷನಲ್ ಲೀಗ್, ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ ಜೊತೆಗೆ ಕೆಲವು ಸಣ್ಣ ಪಕ್ಷಗಳು ಮತ್ತು ಸ್ವತಂತ್ರರು ಕೈಜೋಡಿಸಿಕೊಂಡಿರುವ ಮೈತ್ರಿಕೂಟವಾಗಿದೆ.

ತಿರುವನಂತಪುರಂ ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ

ತಿರುವನಂತಪುರಂ ಪಾಲಿಕೆಯಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ನೇತೃತ್ವದ ಎನ್‌ಡಿಎ)ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಸದ್ಯ ಕಾಂಗ್ರೆಸ್‌ ನಾಯಕರ ವಿರೋಧಕ್ಕೆ ಕಾರಣವಾಗಿರುವ ಸಂಸದ ಶಶಿ ತರೂರ್‌ ತಿರುವನಂತಪುರಂ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.

101 ವಾರ್ಡ್‌ಗಳಲ್ಲಿ 50 ರಲ್ಲಿ ಬಿಜೆಪಿ ಜಯಗಳಿಸಿದೆ. ಈ ಮೂಲಕ ಎಲ್‌ಡಿಎಫ್‌ನ 45 ವರ್ಷಗಳ ಆಡಳಿತವನ್ನು ಕೊನೆಗೊಳಿಸಿದೆ. ಆಡಳಿತದಲ್ಲಿರುವ ಎಲ್‌ಡಿಎಫ್‌ 29 ವಾರ್ಡ್‌ಗಳಲ್ಲಿ ಜಯಗಳಿಸಿದರೆ ಯುಡಿಎಫ್‌ ಮೈತ್ರಿಕೂಟ 19 ವಾರ್ಡ್‌ಗಳಲ್ಲಿ ಮಾತ್ರ ಜಯ ಸಾಧಿಸಿದೆ. ಎರಡು ಕ್ಷೇತ್ರವನ್ನು ಇತರರು ಗೆದ್ದಿದ್ದಾರೆ.

ಆರು ಮಹಾನಗರ ಪಾಲಿಕೆಗಳ ಪೈಕಿ ನಾಲ್ಕರಲ್ಲಿ ಯುಡಿಎಫ್‌ಗೆ ಜಯ

ಆರು ಮಹಾನಗರ ಪಾಲಿಕೆಗಳ ಪೈಕಿ ನಾಲ್ಕರಲ್ಲಿ ಯುಡಿಎಫ್ ವಿಜೇತರಾಗಿ ಹೊರಹೊಮ್ಮಿದರೆ, ಒಂದು ಎಲ್‌ಡಿಎಫ್ ಹಾಗೂ ಒಂದು ಎನ್‌ಡಿಎ ಕೂಟ ಅಧಿಕಾರಕ್ಕೆ ಬಂದಿದೆ. ಕೊಲ್ಲಂ, ಕೊಚ್ಚಿ, ತ್ರಿಶೂರ್ ಮತ್ತು ಕಣ್ಣೂರಿನಲ್ಲಿ ಯುಡಿಎಫ್ ನಿರ್ಣಾಯಕ ಗೆಲುವು ಪಡೆದಿದೆ. ಕೋಝಿಕ್ಕೋಡ್‌ನಲ್ಲಿ ಮಾತ್ರ ಎಲ್‌ಡಿಎಫ್‌ ಜಯಗಳಿಸಿದರೆ, ತಿರುವನಂತಪುರಂ ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ ಬಿದ್ದಿದೆ.

14 ಜಿಲ್ಲಾ ಪಂಚಾಯತ್‌ಗಳ ಪೈಕಿ 7 ಯುಡಿಎಫ್‌ಗೆ; 7 ಎಲ್‌ಡಿಎಫ್‌ ತೆಕ್ಕೆಗೆ
ಇನ್ನು 14 ಜಿಲ್ಲಾ ಪಂಚಾಯತ್‌ಗಳಿಗೆ ನಡೆದ ಚುನಾವಣೆಗಳಲ್ಲಿ 7 ಜಿಲ್ಲಾ ಪಂಚಾಯತ್‌ಗಳಲ್ಲಿ ಯುಡಿಎಫ್‌ ಅಧಿಕಾರಕ್ಕೇರಿದರೆ, ಆಡಳಿತಾರೂಢ ಎಲ್‌ಡಿಎಫ್ ತೆಕ್ಕೆಗೆ ಬಿದ್ದಿದೆ.

ಇನ್ನು ರಾಜ್ಯದ 86 ಪುರಸಭೆಗಳ ಪೈಕಿ 54ರಲ್ಲಿ ಯುಡಿಎಫ್ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸಿದರೆ, 28ರಲ್ಲಿ ಎಲ್‌ಡಿಎಫ್ ಹಾಗೂ 2 ರಲ್ಲಿ ಎನ್‌ಡಿಎ ಜಯಗಳಿಸಿದೆ.

152 ಬ್ಲಾಕ್ ಪಂಚಾಯತ್‌ಗಳ ಪೈಕಿ 78ರಲ್ಲಿ ಯುಡಿಎಫ್, 64ರಲ್ಲಿ ಎಲ್‌ಡಿಎಫ್‌ ಜಯಗಳಿಸಿದೆ. ಇನ್ನೂ 10 ಬ್ಲಾಕ್ ಪಂಚಾಯತ್‌ಗಳ ಅಧಿಕೃತ ಫಲಿತಾಂಶ ಪ್ರಕಟವಾಗಬೇಕಿದೆ. ಇನ್ನುಳಿದಂತೆ 941 ಗ್ರಾಮ ಪಂಚಾಯತ್‌ಗಳ ಪೈಕಿ ಯುಡಿಎಫ್‌ 505ರಲ್ಲಿ ಜಯಗಳಿಸಿದರೆ, 341 ಸ್ಥಾನಗಳಲ್ಲಿ ಎಲ್‌ಡಿಎಫ್‌ ಜಯಗಳಿಸಿದೆ. 26ರಲ್ಲಿ ಎನ್‌ಡಿಎ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಉಳಿದಿರುವ ಸ್ಥಾನಗಳ ಅಧಿಕೃತ ಫಲಿತಾಂಶ ಶನಿವಾರ ಸಂಜೆಯೊಳಗೆ ಪ್ರಕಟವಾಗಲಿದೆ.

ತಿರುವನಂತಪುರಂನಲ್ಲಿ ಎನ್‌ಡಿಎಗೆ ಗೆಲುವು: ಪ್ರಧಾನಿ ಮೋದಿ ಟ್ವೀಟ್

ಎನ್‌ಡಿಎ ಕೂಟವು ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಅಧಿಕಾರಕ್ಕೇರುವ ಮೂಲಕ ಇತಿಹಾಸ ಸೃಷ್ಟಿಸಿದ ಬೆನ್ನಲ್ಲೇ ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಎನ್‌ಡಿಎ ಕೂಟಕ್ಕೆ ಮತ ಹಾಕಿದ ಮತದಾರರಿಗೆ ಮಲಯಾಳಂನಲ್ಲೇ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ತಮ್ಮ ಟ್ವೀಟ್‌ನಲ್ಲಿ, “ತಿರುವನಂತಪುರಂಗೆ ಧನ್ಯವಾದಗಳು. ತಿರುವನಂತಪುರಂ ಕಾರ್ಪೊರೇಷನ್‌ನಲ್ಲಿ ಬಿಜೆಪಿ-ಎನ್‌ಡಿಎ ಪಡೆದ ಬಹುಮತವು ಕೇರಳ ರಾಜಕೀಯದಲ್ಲಿ ಒಂದು ಮಹತ್ವದ ಕ್ಷಣವಾಗಿದೆ. ರಾಜ್ಯದ ಅಭಿವೃದ್ಧಿಯ ಆಕಾಂಕ್ಷೆಗಳನ್ನು ನಮ್ಮ ಪಕ್ಷದಿಂದ ಮಾತ್ರ ಪೂರೈಸಲು ಸಾಧ್ಯ ಎಂದು ಜನರಿಗೆ ಖಚಿತವಾಗಿದೆ. ನಮ್ಮ ಪಕ್ಷವು ಈ ನಗರದ ಬೆಳವಣಿಗೆಗೆ ಕೆಲಸ ಮಾಡುತ್ತದೆ” ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸರ್ಕಾರದ UPI ವಿನಾಯಿತಿ ಮೋಸ; ₹2,000 ಮೇಲ್ಪಟ್ಟ ಪಾವತಿಗಳಿಗೆ MDR ವಿಧಿಸಲು ಅನುಮತಿ

₹2,000 ಮೇಲ್ಪಟ್ಟ UPI ಪಾವತಿಗಳಿಗೆ ಮರ್ಚೆಂಟ್‌ ಡಿಸ್ಕೌಂಟ್‌ ರೇಟ್‌ (MDR) ವಿಧಿಸಲು...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್...

ಸರ್ಕಾರ ಆಧಾರ್‌ನ್ನು ನಂಬುವುದಾದರೆ, ಮತದಾರರ ಪಟ್ಟಿ ಪರಿಷ್ಕರಣೆಗೂ ಬಳಸಲಿ: ಆರ್‌ ಎಸ್‌ ಶರ್ಮಾ

ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಗುರುತು ದೃಢೀಕರಣಕ್ಕೂ, ಪಿಂಚಣಿದಾರರ ಜೀವಂತಿಕೆ ಪರಿಶೀಲನೆಗೂ ಆಧಾರ್‌...

ಹೌತಿಗಳ ವಿರುದ್ಧ ಮಿಲಿಟರಿ ದಾಳಿಗೆ ಸೌದಿ ಅರೇಬಿಯಾ ಮನವಿ: ಬೆಂಬಲಿಸಿಲ್ಲ ಎಂದ ಟ್ರಂಪ್

ಕೆಂಪು ಸಮುದ್ರದ ಆಯಕಟ್ಟಿನ ಪ್ರದೇಶಗಳಲ್ಲಿ ಇರಾನ್ ಬೆಂಬಲಿತ ಹೌತಿ ಬಂಡುಕೋರರ ದಾಳಿ...