ರಾಜ್ಯಪಾಲರ ವಿರುದ್ಧ ಎರಡನೇ ಬಾರಿಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕೇರಳ

Date:

ಕಳೆದ ಎರಡು ವಾರಗಳಲ್ಲಿ ಎರಡನೇ ಬಾರಿಗೆ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ನಡೆಯ ವಿರುದ್ಧ ಕೇರಳ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

- Advertisement -

ವಿಧಾನಸಭೆಯಲ್ಲಿ ಅಂಗೀಕಾರಗೊಂಡ ನಿರ್ಣಾಯಕ ಮಸೂದೆಗಳಿಗೆ ರಾಜ್ಯಪಾಲರು ಅಂಕಿತ ಹಾಕದೆ ಸಾರ್ವಜನಿಕರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದ್ದಾರೆ ಎಂದು ಕೇರಳ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ರಾಜ್ಯವನ್ನು ಪ್ರತಿನಿಧಿಸುವ ವಕೀಲ ಸಿ ಕೆ ಸಸಿ, ರಾಜ್ಯಪಾಲರ ಈ ಕ್ರಮವು ಕೇರಳ ಜನರ ಬದುಕುವ ಮೂಲಭೂತ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

“ರಾಜ್ಯದ ಜನರ ಕಲ್ಯಾಣಕ್ಕಾಗಿ ಅಂಗೀಕಾರಗೊಂಡ ಮಸೂದೆಗಳನ್ನು ದೀರ್ಘಕಾಲದವರೆಗೂ ಹಾಗೂ ಅನಿರ್ದಿಷ್ಟ ಕಾಲದವರೆಗೂ ರಾಜ್ಯಪಾಲರು ಇರಿಸಿಕೊಂಡಿರುವ ಕ್ರಮ ಸ್ಪಷ್ಟವಾಗಿ ನಿರಂಕುಶವಾಗಿದೆ ಮತ್ತು ಇದು ಸಂವಿಧಾನದ 14ನೇ ವಿಧಿ(ಸಮಾನತೆಯ ಹಕ್ಕು)ಯನ್ನು ಉಲ್ಲಂಘಿಸುತ್ತದೆ. ಅಲ್ಲದೆ ಇದು ಸಂವಿಧಾನದ 21 ನೇ ವಿಧಿ (ಜೀವನದ ಹಕ್ಕು) ಅಡಿಯಲ್ಲಿ ಬರುವ ಕೇರಳ ರಾಜ್ಯದ ಜನರ ಹಕ್ಕುಗಳನ್ನು ಕಸಿಯುತ್ತದೆ” ಎಂದು ಸಿ ಕೆ ಸಸಿ ತಿಳಿಸಿದ್ದಾರೆ.

8 ಮಸೂದೆಗಳು ಬಾಕಿ

ಎಂಟು ಪ್ರಮುಖ ಮಸೂದೆಗಳು ಪ್ರಸ್ತುತ ರಾಜ್ಯಪಾಲರ ಬಳಿ ಬಾಕಿ ಉಳಿದಿವೆ ಎಂದು ಕೇರಳ ಹೇಳಿದೆ. ಈ ಕೆಲವು ಮಸೂದೆಗಳು ಎರಡು ವರ್ಷಗಳಿಂದ ತಡೆಹಿಡಿಯಲ್ಪಟ್ಟಿವೆ.

ರಾಜ್ಯದ ಪರ ವಾದ ಮಂಡಿಸಿದ ಹಿರಿಯ ವಕೀಲ ಕೆಕೆ ವೇಣುಗೋಪಾಲ್, ಕೇರಳ ರಾಜ್ಯಪಾಲರ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದರೂ ರಾಜ್ಯಪಾಲರು ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದರು.

ಹಲವು ಮಸೂದೆಗಳು ಅಪಾರ ಸಾರ್ವಜನಿಕ ಹಿತಾಸಕ್ತಿ, ಕಲ್ಯಾಣ ಕಾರ್ಯಕ್ರಮಗಳನ್ನು ಒದಗಿಸುವುದಾಗಿದ್ದು, ಇವುಗಳ ವಿಳಂಬದಿಂದ ರಾಜ್ಯದ ಜನರ ಹಲವು ಕಲ್ಯಾಣ ಕಾರ್ಯಕ್ರಮಗಳಿಗೆ ಅಡ್ಡಿಯಾಗುತ್ತದೆ. ಜೊತೆಗೆ ರಾಜ್ಯದ ಜನತೆಗೆ ಘೋರ ಅನ್ಯಾಯವಾಗುತ್ತಿದೆ ಎಂದು ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ತಮಿಳುನಾಡು | ಸಹಪಾಠಿಗಳಿಂದ ಹಲ್ಲೆ, ಜಾತಿ ನಿಂದನೆ; ದಲಿತ ವಿದ್ಯಾರ್ಥಿ ಆತ್ಮಹತ್ಯೆ

ಸಂವಿಧಾನದ 200ನೇ ವಿಧಿಯ ಅಡಿಯಲ್ಲಿ ರಾಜ್ಯಪಾಲರ ಅನುಮೋದನೆಗಾಗಿ ಬಾಕಿ ಇರುವ ಎಂಟು ಮಸೂದೆಗಳಲ್ಲಿ ಎರಡು 2021ರ ವಿಶ್ವವಿದ್ಯಾಲಯ ಕಾನೂನುಗಳ ತಿದ್ದುಪಡಿ ಮಸೂದೆಗಳು (1 ನೇ ತಿದ್ದುಪಡಿ) ಮತ್ತು ವಿಶ್ವವಿದ್ಯಾಲಯ ಕಾನೂನುಗಳ ತಿದ್ದುಪಡಿ ಮಸೂದೆ (2 ನೇ ತಿದ್ದುಪಡಿ) ಇದೆ. ಇದಲ್ಲದೆ ಸಹಕಾರ ಸಂಘಗಳ ತಿದ್ದುಪಡಿ ಮಸೂದೆ 2022, 2022ರ ವಿಶ್ವವಿದ್ಯಾನಿಲಯ ಕಾನೂನುಗಳ ತಿದ್ದುಪಡಿ ಮಸೂದೆ, 2022ರ ಕೇರಳ ಲೋಕಾಯುಕ್ತ ತಿದ್ದುಪಡಿ ಮಸೂದೆ, 2022ರ ವಿಶ್ವವಿದ್ಯಾನಿಲಯ ಕಾನೂನುಗಳ ತಿದ್ದುಪಡಿ ಮಸೂದೆ ಮತ್ತು 2021ರ ಸಾರ್ವಜನಿಕ ಆರೋಗ್ಯ ಮಸೂದೆ ಸೇರಿದೆ.

ರಾಜ್ಯಪಾಲರು 8 ಬಾಕಿ ಇರುವ ಮಸೂದೆಗಳನ್ನು ಪರಿಗಣಿಸುವಲ್ಲಿ ವಿನಾಕಾರಣ ವಿಳಂಬ ಮಾಡುವ ಮೂಲಕ ತಮ್ಮ ಸಾಂವಿಧಾನಿಕ ಕರ್ತವ್ಯಗಳಲ್ಲಿ ವಿಫಲರಾಗಿದ್ದಾರೆ ಎಂದು ರಾಜ್ಯ ಸರ್ಕಾರ ಪ್ರತಿಪಾದಿಸಿದೆ.

ಕೇರಳದ ಹೊರತಾಗಿ, ಇತರ ಬಿಜೆಪಿಯೇತರ ಆಡಳಿತದ ರಾಜ್ಯಗಳು ತಮ್ಮ ರಾಜ್ಯಪಾಲರ ವಿರುದ್ಧ ನಿರ್ಣಾಯಕ ಮಸೂದೆಗಳನ್ನು ಕಾನೂನಾತ್ಮಕವಾಗಿ ಅಂಗೀಕರಿಸಲು ವಿಳಂಬ ಮಾಡುತ್ತಿರುವುದಕ್ಕೆ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅರಣ್ಯ ಸಂರಕ್ಷಣೆ ಹೆಸರಲ್ಲಿ ಜನರ ಬದುಕು ಬಲಿ ಕೊಡಬೇಡಿ: ಕಸ್ತೂರಿರಂಗನ್ ವರದಿ ವಿರುದ್ಧ ಕರವೇ ಆಕ್ರೋಶ

ಪಶ್ಚಿಮ ಘಟ್ಟಗಳ ಪರಿಸರ ಸಂರಕ್ಷಣೆ ಅತ್ಯಂತ ಅಗತ್ಯ. ಆದರೆ ಪರಿಸರ ಸಂರಕ್ಷಣೆಯ...

ನಂದಿಗ್ರಾಮ ಉಪಚುನಾವಣೆ: ಟಿಎಂಸಿ ಅಭ್ಯರ್ಥಿ ನಾಮಪತ್ರ ವಾಪಸ್; ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಮತ್ತೊಂದು ಪ್ರಮುಖ ಬೆಳವಣಿಗೆಯಾಗಿದ್ದು, ನಂದಿಗ್ರಾಮ ವಿಧಾನಸಭಾ ಕ್ಷೇತ್ರದ...

ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆ ನಿರ್ಮಾಣಕ್ಕೆ ಸರ್ಕಾರ ಅಸ್ತು

"ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆಗಳ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ...

SIR ಪ್ರಕ್ರಿಯೆಯಲ್ಲಿ ಗಂಭೀರ ಲೋಪ; ಚುನಾವಣಾ ಆಯೋಗಕ್ಕೆ ಬಿ.ಕೆ. ಹರಿಪ್ರಸಾದ್ ಪತ್ರ

ASDDO ಅಂಕಿಅಂಶಗಳಲ್ಲಿ ಹೊಂದಾಣಿಕೆ ಇಲ್ಲ, 44 ಲಕ್ಷ ಮತದಾರರ ಮ್ಯಾಪಿಂಗ್ ಸಮಸ್ಯೆ,...