ಕೇರಳದಲ್ಲಿ ಆರ್ಥಿಕ ಬಿಕ್ಕಟ್ಟನ್ನು ಕೇಂದ್ರ ಕೃತಕವಾಗಿ ಸೃಷ್ಟಿಸಿದೆ: ವಿತ್ತ ಸಚಿವ ಆರೋಪ

Date:

Advertisements

ಕೇಂದ್ರವು ದೇಶದ ಒಕ್ಕೂಟ ರಚನೆಗೆ ವಿರುದ್ಧವಾದ ನಿಲುವನ್ನು ಅನುಸರಿಸುತ್ತಿದೆ ಮತ್ತು ಕೇರಳ ರಾಜ್ಯವು ಕೆಲವು ದಿನಗಳಿಂದ ಅನುಭವಿಸುತ್ತಿರುವ ತೀವ್ರ ಆರ್ಥಿಕ ಬಿಕ್ಕಟ್ಟಿಗೆ ಕೇಂದ್ರ ಸರ್ಕಾರವೇ ಕಾರಣ, ಆರ್ಥಿಕ ಬಿಕ್ಕಟ್ಟನ್ನು ಕೃತವಾಗಿ ಸೃಷ್ಟಿಸಲಾಗಿದೆ ಎಂದು ಕೇರಳ ವಿತ್ತ ಸಚಿವ ಕೆ ಎನ್ ಬಾಲಗೋಪಾಲ್ ಆರೋಪಿಸಿದ್ದಾರೆ.

ವಿಧಾನಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಬಾಲಗೋಪಾಲ್, “ಕೆಐಐಎಫ್‌ಬಿ ಸಂಗ್ರಹಿಸಿದ ಮತ್ತು ಖರ್ಚು ಮಾಡಿದ ಹಣವನ್ನು ಕೇರಳದ ಒಟ್ಟಾರೆ ಸಾಲದ ಭಾಗವಾಗಿ ಕೇಂದ್ರವು ಪರಿಗಣಿಸುತ್ತದೆ. ಆದ್ದರಿಂದ ರಾಜ್ಯ ಸರ್ಕಾರದ ಸಂಪನ್ಮೂಲ ಕ್ರೋಢೀಕರಣ ಉಪಕ್ರಮಗಳು ತೀವ್ರವಾಗಿ ಪರಿಣಾಮ ಬೀರಿವೆ” ಎಂದು ತಿಳಿಸಿದರು.

“ಆದರೆ ಕೇರಳ ಇನ್ಫ್ರಾಸ್ಟ್ರಕ್ಚರ್ ಇನ್ವೆಸ್ಟ್‌ಮೆಂಟ್ ಫಂಡ್ ಬೋರ್ಡ್ (ಕೆಐಐಎಫ್‌ಬಿ) ಮಂಜೂರು ಮಾಡಿರುವ ಯೋಜನೆಗಳಿಗೆ ಹಣ ಮಂಜೂರು ಮಾಡಲು ರಾಜ್ಯ ಸರ್ಕಾರ ಯಾವುದೇ ನಿರ್ಬಂಧಗಳನ್ನು ವಿಧಿಸಿಲ್ಲ” ಎಂದು ಸ್ಪಷ್ಟಪಡಿಸಿದ ಸಚಿವರು, “ಕೇಂದ್ರದ ಫೆಡರಲ್ ವಿರೋಧಿ ನಿಲುವಿನಿಂದಾಗಿ ಕೇರಳ ತೀವ್ರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ” ಎಂದು ದೂರಿದರು.

Advertisements

ಇದನ್ನು ಓದಿದ್ದೀರಾ?  ಮೋದಿ ಸರ್ಕಾರದ ಜೊತೆ ಕುಮಾರಸ್ವಾಮಿ: ಹೊಸ ಪಕ್ಷ ಸ್ಥಾಪನೆಗೆ ಕೇರಳ ಜೆಡಿಎಸ್ ಸಜ್ಜು

ಕೆಐಐಎಫ್‌ಬಿ ಕೇರಳದ ಸರ್ಕಾರಿ ಸಂಸ್ಥೆಯಾಗಿದ್ದು, ಮಾರುಕಟ್ಟೆಗಳಿಂದ ಹಣವನ್ನು ಸಂಗ್ರಹಿಸುವ ಮೂಲಕ ಮೂಲಸೌಕರ್ಯ ಯೋಜನೆಗಳಿಗೆ ಹಣಕಾಸು ಒದಗಿಸುತ್ತದೆ. ಈ ಎಲ್ಲಾ ಪ್ರತಿಕೂಲ ಪರಿಸ್ಥಿತಿಗಳ ಹೊರತಾಗಿಯೂ ಕೆಐಐಎಫ್‌ಬಿ ವಿವಿಧ ಯೋಜನೆಗಳಿಗೆ 29,100 ಕೋಟಿ ರೂಪಾಯಿ ವೆಚ್ಚ ಮಾಡಲಿದೆ ಎಂದು ಸಚಿವರು ಹೇಳಿದ್ದಾರೆ.

“ಪ್ರತಿಕೂಲ ಅಂಶಗಳಿಂದಾಗಿ ಈಗ ಕೆಐಐಎಫ್‌ಬಿಯ ಚಟುವಟಿಕೆಗಳು ನಿಧಾನಗತಿಯಲ್ಲಿ ಪ್ರಗತಿಯಲ್ಲಿವೆ” ಎಂದು ಒಪ್ಪಿಕೊಂಡ ಕೇರಳ ವಿತ್ತ ಸಚಿವ ಆದರೆ ಅದರ ಯೋಜನೆಗಳ ಕಾರ್ಯಗತಗೊಳಿಸುವಿಕೆಯು ನಿಂತಿದೆ ಎಂಬ ಆರೋಪವನ್ನು ತಿರಸ್ಕರಿಸಿದರು.

 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X