79 ದಿನಗಳ ನಂತರ ಮಣಿಪುರದ ಬಗ್ಗೆ ಮಾತು: ಸದನದೊಳಗೆ ಮಾತನಾಡಲು ಪ್ರಧಾನಿಗೆ ಖರ್ಗೆ ಒತ್ತಾಯ

Date:

Advertisements

ಇಬ್ಬರು ಕುಕಿ ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಘಟನೆಗೆ ದೇಶಾದ್ಯಂತ ಆಕ್ರೋಶ ಉಂಟಾಗಿದೆ. ಈ ನಡುವೆ ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ ನಂತರ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಸಂಸತ್ತಿನಲ್ಲಿ ಪ್ರಧಾನಿ ಅವರು ವಿಸ್ತೃತ ಹೇಳಿಕೆ ನೀಡುವಂತೆ ಒತ್ತಾಯಿಸಿದರು.

ರಾಜ್ಯಸಭೆಯಲ್ಲಿ ಮಾತನಾಡಿದ ಅವರು, “ಮಣಿಪುರ ಹೊತ್ತಿ ಉರಿಯುತ್ತಿದೆ, ಮಹಿಳೆಯರ ಮೇಲೆ ಅತ್ಯಾಚಾರ, ಬೆತ್ತಲೆ ಮೆರವಣಿಗೆ, ಭೀಕರ ಹಿಂಸಾಚಾರ ನಡೆಯುತ್ತಿದೆ. ಆದರೆ ಪ್ರಧಾನಿಯವರು ಇಂದಿನವರೆಗೂ ಮೌನವಾಗಿದ್ದು, ಸಂಸತ್ತಿನ ಹೊರಗೆ ಮಾತ್ರ ಹೇಳಿಕೆ ನೀಡಿದ್ದಾರೆ” ಎಂದು ಪ್ರಧಾನಿ ನಡೆಯನ್ನು ಟೀಕಿಸಿದರು.

“ನಾವು ಮಣಿಪುರದ ಬಗ್ಗೆ ವಿಸ್ತೃತ ಚರ್ಚೆಯನ್ನು ಬಯಸುತ್ತೇವೆ. ಪ್ರಧಾನಿ ಮೋದಿ ಅವರು ಸದನದಲ್ಲಿ ಅದರ ಬಗ್ಗೆ ವಿವರವಾದ ಹೇಳಿಕೆಯನ್ನು ನೀಡಬೇಕು. ಮಣಿಪುರ ಮುಖ್ಯಮಂತ್ರಿ ಕೂಡಲೇ ರಾಜೀನಾಮೆ ನೀಡಬೇಕು ಮತ್ತು ಕೂಡಲೇ ಕಣಿವೆ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು ಎಂದು ನಾವು ಒತ್ತಾಯಿಸುತ್ತೇವೆ “ ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

Advertisements

ಸಂಸತ್ತಿನ ಮುಂಗಾರು ಅಧಿವೇಶನವು ಮಣಿಪುರ ಹಿಂಸಾಚಾರದ ಗದ್ದಲದೊಂದಿಗೆ ಪ್ರಾರಂಭವಾಯಿತು. ಉಭಯ ಸದನಗಳನ್ನು ಸೋಮವಾರದವರೆಗೆ ಮುಂದೂಡಲಾಯಿತು. ಲೋಕಸಭೆಯು ಮಧ್ಯಾಹ್ನ 2 ಗಂಟೆಗೆ ಸಮಾವೇಶಗೊಳ್ಳುತ್ತಿದ್ದಂತೆ ಹಲವು ವಿರೋಧ ಪಕ್ಷದ ನಾಯಕರು ‘ಮಣಿಪುರ ಮಣಿಪುರ’ ಮತ್ತು ‘ಮಣಿಪುರ ಉರಿಯುತ್ತಿದೆ’ ಎಂಬ ಘೋಷಣೆಗಳನ್ನು ಕೂಗುತ್ತಿದ್ದರು.

ಈ ಸುದ್ದಿ ಓದಿದ್ದೀರಾ? ‘ಪೊಲೀಸರೆ ಯುವಕರ ಗುಂಪಿನೊಳಗೆ ಬಿಟ್ಟರು’ ಎಂದು ಆಘಾತಕಾರಿ ಅನುಭವ ಬಿಚ್ಚಿಟ್ಟ ಬೆತ್ತಲೆಗೊಳಗಾದ ಮಹಿಳೆ

79 ದಿನಗಳ ನಂತರ ಮಣಿಪುರ ಕುರಿತು ಪ್ರಧಾನಿ ಮೋದಿ ಹೇಳಿಕೆ

ಸಂಸತ್ ಅಧಿವೇಶನದ ಮೊದಲು, ಮಣಿಪುರದ ಪರಿಸ್ಥಿತಿಯ ಕುರಿತು ಪ್ರಧಾನಿ ನರೇಂದ್ರ ಮೋದಿ 79 ದಿನಗಳ ನಂತರ ಮೊದಲ ಹೇಳಿಕೆ ನೀಡಿದರು. “ಇದು ಯಾವುದೇ ಸಮಾಜಕ್ಕೆ ನಾಚಿಕೆಗೇಡಿನ ಘಟನೆ. ಇದನ್ನು ಯಾರು ಮಾಡಿದರು ಮತ್ತು ಯಾರು ಹೊಣೆ ಎಂಬುದು ಮತ್ತೊಂದು ವಿಷಯ. ಆದರೆ ಇದು ನಮ್ಮ ದೇಶಕ್ಕೆ ನಾಚಿಕೆಗೇಡು ಉಂಟು ಮಾಡಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಬಿಗಿಗೊಳಿಸುವಂತೆ ನಾನು ಎಲ್ಲ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ. ಅದು ರಾಜಸ್ಥಾನ, ಛತ್ತೀಸ್‌ಗಢ ಅಥವಾ ಮಣಿಪುರವೇ ಆಗಿರಲಿ… ಮಹಿಳೆಯ ಗೌರವದ ವಿಷಯವು ಎಲ್ಲ ರಾಜಕೀಯಕ್ಕಿಂತ ಮಿಗಿಲಾಗಿದೆ” ಎಂದು ಹೇಳಿದ್ದರು.

ಮೇ 4 ರಂದು ಕುಕಿ ಸಮುದಾಯದ ಇಬ್ಬರು ಮಹಿಳೆಯರನ್ನು ಕೆಲವು ಪುರುಷರು ಬೆತ್ತಲೆಯಾಗಿ ಮೆರವಣಿಗೆ ಮಾಡುವುದನ್ನು ತೋರಿಸುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ದೇಶಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿದೆ. ಘಟನೆಗೆ ಕಾರಣವಾದ ಪ್ರಮುಖ ಆರೋಪಿಯನ್ನು ಗುರುವಾರ(ಜುಲೈ 20) ಬಂಧಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X