ಕೋಲಾರ – ವರುಣಾ: ಎರಡೂ ಕ್ಷೇತ್ರಗಳಿಂದ ಸ್ಪರ್ಧಿಸಲಿರುವ ಸಿದ್ದರಾಮಯ್ಯ; ರಾಹುಲ್ ಜೊತೆ ಚರ್ಚೆಯಷ್ಟೇ ಬಾಕಿ

Date:

  • ಅಭ್ಯರ್ಥಿಗಳ ಎರಡನೇ ಅಥವಾ ಮೂರನೇ ಪಟ್ಟಿಯಲ್ಲಿ ಕೋಲಾರ ಸಹ ಇರಲಿದೆ
  • ಸಿದ್ದರಾಮಯ್ಯ ಹೆಸರು ಮೊದಲ ಪಟ್ಟಿಯಲ್ಲಿ ಇರಬೇಕೆಂಬ ಕಾರಣ ಪಟ್ಟಿ ಬಿಡುಗಡೆ ವಿಳಂಬ

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರು ವರುಣಾ ಕ್ಷೇತ್ರದ ಜೊತೆಗಿದೆಯಾದರೂ, ಅವರು ಕೋಲಾರ ಕ್ಷೇತ್ರದಿಂದಲೂ ಸ್ಪರ್ಧಿಸುವುದು ಖಚಿತವಾಗಿದೆ. ಈದಿನ.ಕಾಮ್ ಜೊತೆಗೆ ಮಾತನಾಡಿದ ಉನ್ನತ ಮೂಲಗಳು ಇದನ್ನು ಖಚಿತಪಡಿಸಿದ್ದಾರೆ.

2018ರಲ್ಲಿ ತಮ್ಮ ಸ್ವಕ್ಷೇತ್ರ ವರುಣಾವನ್ನು ಪುತ್ರ ಯತೀಂದ್ರಗೆ ಬಿಟ್ಟುಕೊಟ್ಟು ಪಕ್ಕದ ಚಾಮುಂಡೇಶ್ವರಿಯಲ್ಲಿ ಸ್ಪರ್ಧಿಸಲು ಬಯಸಿದ್ದ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಲ್ಲಿ ಸೋಲು ಉಂಟಾಗುತ್ತದೆಂಬುದರ ವಾಸನೆ ಗೊತ್ತಾಗಿತ್ತು. ಹಾಗಾಗಿ ಬಾದಾಮಿಯಿಂದಲೂ ಸ್ಪರ್ಧಿಸಿ ಅಲ್ಲಿ ಗೆದ್ದಿದ್ದರು. ಎರಡೂ ಕಡೆ ಅವರನ್ನು ಸೋಲಿಸಲು ವಿರೋಧ ಪಕ್ಷಗಳು ಮತ್ತು ಸ್ವಪಕ್ಷದ ವಿರೋಧಿಗಳು ಕೈ ಜೋಡಿಸಿದ್ದರೆಂಬುದು ‘ಓಪೆನ್ ಸೀಕ್ರೆಟ್’.

ಹಾಗಾಗಿಯೇ ಈ ಸಾರಿ ಕ್ಷೇತ್ರ ಆಯ್ಕೆ ಮಾಡಿಕೊಳ್ಳುವಾಗಲೂ ಅವರ ವಿರೋಧಿಗಳೆಲ್ಲಾ ಒಟ್ಟು ಸೇರಿ ಸೋಲಿಸುವ ಸಾಧ್ಯತೆ ಇದ್ದೇ ಇದೆ ಎಂಬುದು ಅವರಿಗೂ ಗೊತ್ತಿತ್ತು. ಹಾಗಾಗಿಯೇ ಅವರ ಕೋಲಾರ ಜಿಲ್ಲೆಯ ಆಪ್ತ ಶಾಸಕರ ಒತ್ತಾಸೆಯ ಮೇರೆಗೆ ಕೋಲಾರ ವಿಧಾನಸಭಾ ಕ್ಷೇತ್ರದತ್ತ ಚಿತ್ತ ಹರಿದಿತ್ತು. ಆದರೆ, ಮೇಲಿನ ಕಾರಣದಿಂದಲೇ ಕೋಲಾರದಲ್ಲಿ ಸ್ಪರ್ಧಿಸುವುದು ಬೇಡ ಎಂಬ ಸಲಹೆಯನ್ನು ರಾಹುಲ್ ಗಾಂಧಿಯವರು ಸಿದ್ದರಾಮಯ್ಯನವರಿಗೆ ನೀಡಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಆ ಸಲಹೆಯನ್ನು ಪರಿಗಣಿಸಿರುವ ಮಾಜಿ ಮುಖ್ಯಮಂತ್ರಿ ತಮ್ಮ ಸ್ವಕ್ಷೇತ್ರ ವರುಣಾದಿಂದಲೇ ಸ್ಪರ್ಧಿಸಲು ತೀರ್ಮಾನಿಸಿದ್ದಾರಾದರೂ, ಅದರ ಜೊತೆಗೆ ಕೋಲಾರದಿಂದಲೂ ಸ್ಪರ್ಧಿಸಲೂ ನಿರ್ಧರಿಸಿದ್ದಾರೆ. ಸಿದ್ದರಾಮಯ್ಯನವರ ಹೆಸರು ಮೊದಲ ಪಟ್ಟಿಯಲ್ಲಿ ಇರಬೇಕೆಂಬ ಕಾರಣದಿಂದಲೇ ಪಟ್ಟಿ ಬಿಡುಗಡೆ ಮೂರು ದಿನಗಳ ಕಾಲ ತಡವಾಯಿತು ಎಂದು ಕಾಂಗ್ರೆಸ್ಸಿನ ಮೂಲಗಳು ಈದಿನ.ಕಾಮ್ ಗೆ ತಿಳಿಸಿದರು.

ಆದರೆ ಈ ಮಧ್ಯೆ ರಾಹುಲ್ ಗಾಂಧಿಯವರು ಸೂರತ್ ಕೋರ್ಟಿನ ತೀರ್ಪು ಹಾಗೂ ಸಂಸತ್ ಸ್ಥಾನದ ಅನರ್ಹತೆಯ ಕಾರಣದಿಂದ ಬೇರೆ ಕೆಲಸಗಳಲ್ಲಿ ವ್ಯಸ್ತರಾದ್ದರಿಂದ, ಈ ಬಗ್ಗೆ ಚರ್ಚೆ ಮಾಡಲಾಗಿಲ್ಲ. ಹಾಗಾಗಿ ಮೊದಲ ಪಟ್ಟಿಯಲ್ಲಿ ವರುಣಾ ಮಾತ್ರ ಇದ್ದು, ಎರಡನೇ ಅಥವಾ ಮೂರನೇ ಪಟ್ಟಿಯಲ್ಲಿ ಕೋಲಾರ ಸಹ ಇರಲಿದೆ ಎಂಬುದು ಖಚಿತಪಟ್ಟಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನೇಹಾ ಕೊಲೆಗೂ ರಾಜಕೀಯಕ್ಕೂ ಸಂಬಂಧವಿಲ್ಲ: ಸಚಿವ ಡಾ. ಜಿ ಪರಮೇಶ್ವರ್‌ ಸ್ಪಷ್ಟನೆ

ಹುಬ್ಬಳ್ಳಿಯ ಬಿವಿಬಿ ಇಂಜಿನಿಯರ್​​ ಕಾಲೇಜು ಆವರಣದಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಕೊಲೆ...

ಮತದಾರರಿಗೆ ಬೆದರಿಕೆ ಆರೋಪ; ಡಿಕೆಶಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಲೋಕಸಭಾ ಚುನಾವಣೆಯಲ್ಲಿ ತಮ್ಮ ಸಹೋದರ ಡಿಕೆ ಸುರೇಶ್​ಗೆ ಮತ ನೀಡುವಂತೆ ಬೆಂಗಳೂರು...

ಬೆಂಗಳೂರು | ಹತ್ತಕ್ಕೂ ಹೆಚ್ಚು ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ

ಒಂದೆಡೆ ಲೋಕಸಭಾ ಚುನಾವಣೆಯ ಕಾವು ಏರಿಕೆಯಾಗುತ್ತಿದ್ದರೆ, ಇನ್ನೊಂದೆಡೆ ಆದಾಯ ತೆರಿಗೆ ಇಲಾಖೆ...

ಹಾಸನ ಲೋಕಸಭಾ ಕ್ಷೇತ್ರ | ಪ್ರಜ್ವಲ್ ಆರ್ಭಟದೆದುರು ಶ್ರೇಯಸ್ ಅನುಕಂಪ ಗೆಲ್ಲಬಹುದೇ?

ಹಾಸನ ರಾಜಕಾರಣದ ಶಕ್ತಿಕೇಂದ್ರ. ದೇವೇಗೌಡ, ರೇವಣ್ಣ, ಭವಾನಿ, ಬಾಲಕೃಷ್ಣ, ಪ್ರಜ್ವಲ್ ಹಾಗೂ...