ಬಿಜೆಪಿ ಟಿಕೆಟ್‌ಗಾಗಿ ಹಣ | ಚೈತ್ರಾ ಗ್ಯಾಂಗ್‌ನ ವಂಚನೆ ಪ್ರಕರಣ ಬಳಿಕ ಮತ್ತೊಂದು ಪ್ರಕರಣ ತಡವಾಗಿ ಬೆಳಕಿಗೆ

Date:

  • ಕನಕಗಿರಿ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಗಾಯತ್ರಿ ತಿಮ್ಮಾರೆಡ್ಡಿ
  • ಕಳೆದ ಜು.19ರಂದು ಬೆಂಗಳೂರಿನ ಅಶೋಕ ನಗರ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್

ಉದ್ಯಮಿ ಗೋವಿಂದ ಪೂಜಾರಿ ಎಂಬುವವರಿಗೆ ಬೈಂದೂರು ಕ್ಷೇತ್ರದ ಬಿಜೆಪಿ ಶಾಸಕ ಟಿಕೆಟ್‌ ಕೊಡಿಸುವುದಾಗಿ ಕೋಟ್ಯಾಂತರ ರೂಪಾಯಿ ಹಣ ಕಳೆದುಕೊಂಡ ಘಟನೆ ಈಗಾಗಲೇ ರಾಜ್ಯಾದ್ಯಂತ ಸುದ್ದಿಯಾಗಿರುವ ಬೆನ್ನಲ್ಲೇ, ಕೊಪ್ಪಳ ಜಿಲ್ಲೆಯಲ್ಲೂ ಬಿಜೆಪಿ ಮುಖಂಡನಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

- Advertisement -

ಕೊಪ್ಪಳ ಜಿಲ್ಲೆಯ ಕನಕಗಿರಿ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಗಾಯತ್ರಿ ತಿಮ್ಮಾರೆಡ್ಡಿ ಅವರಿಗೆ ಟಿಕೆಟ್​ ಕೊಡಿಸುವಲ್ಲಿ ಅವರ ಪತಿ ಜಿ‌. ತಿಮ್ಮಾರೆಡ್ಡಿ ಗಿಲ್ಲೆಸೂಗುರ್ ಹಲವು ಪ್ರಯತ್ನ ಮಾಡಿದ್ದರು. ಈ ವೇಳೆ ಟಿಕೆಟ್​ ಕೊಡಿಸುತ್ತೇವೆಂದು ನಂಬಿಸಿ, ಮೂವರು ಚೈತ್ರಾ ಕುಂದಾಪುರ ಗ್ಯಾಂಗ್ ರೀತಿಯಲ್ಲೆ ವಂಚನೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಕನಕಗಿರಿ ಪರಿಶಿಷ್ಟ ಮೀಸಲು ಕ್ಷೇತ್ರದ ಆಕಾಂಕ್ಷಿಯಾಗಿದ್ದ ಗಾಯತ್ರಿ ತಿಮ್ಮಾರೆಡ್ಡಿ ಅವರು ಬಿಜೆಪಿ ಟಿಕೆಟ್​ಗಾಗಿ ಪ್ರಯತ್ನಿಸಿದ್ದರು. ಈ ವೇಳೆ ದೆಹಲಿ ಮೂಲದ ವಿಶಾಲ್ ನಾಗ್ ಮತ್ತು ಬೆಂಗಳೂರಿನ ಜೀತು, ಗೌರವ್ ಟಿಕೆಟ್ ಕೊಡಿಸುತ್ತೇವೆಂದು ಸುಮಾರು 21 ಲಕ್ಷ ಹಣ ವಂಚನೆ ಮಾಡಿರುವುದಾಗಿ ವರದಿಯಾಗಿದೆ.

ಘಟನೆ ನಡೆದು ಸುಮಾರು 3-4 ತಿಂಗಳುಗಳಾಗಿದ್ದು, ಚೈತ್ರಾ ಪ್ರಕರಣದ ಹಿನ್ನೆಲೆಯಲ್ಲಿ ಈ ಪ್ರಕರಣ ಈಗ ಮುನ್ನೆಲೆಗೆ ಬಂದಿದೆ. ಈ ಸಂಬಂಧ ಮೂವರ ವಿರುದ್ಧ ಬೆಂಗಳೂರಿನ ಅಶೋಕ ನಗರ ಠಾಣೆಯಲ್ಲಿ ತಿಮ್ಮಾರೆಡ್ಡಿ ಅವರು ಕಳೆದ ಜುಲೈ 19ರಂದು ದೂರು ದಾಖಲಿಸಿದ್ದು, ಎಫ್‌ಐಆರ್ ಕೂಡ ದಾಖಲಾಗಿದೆ.

ashok nagar

ಈ ಬಗ್ಗೆ ಈ ದಿನ.ಕಾಮ್ ಜೊತೆಗೆ ಮಾತನಾಡಿರುವ ಬಿಜೆಪಿ ಮುಖಂಡ ಜಿ‌. ತಿಮ್ಮಾರೆಡ್ಡಿ ಗಿಲ್ಲೆಸೂಗುರ್, “ಈ ಬೆಳವಣಿಗೆ ನಡೆದು ಸುಮಾರು ಮೂರು-ನಾಲ್ಕು ತಿಂಗಳು ಆಗಿದೆ. ಬೆಂಗಳೂರಿನ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದೇನೆ. ಅಲ್ಲದೇ, ಈ ಬಗ್ಗೆ ಸಂಬಂಧಪಟ್ಟವರ ಜೊತೆಗೆ ಮಾತುಕತೆಯೂ ಆಗಿದೆ. ಚೈತ್ರಾ ಕುಂದಾಪುರ ಅವರ ವಂಚನೆ ಪ್ರಕರಣದ ಹಿನ್ನೆಲೆಯಲ್ಲಿ ನಮ್ಮ ಘಟನೆ ಕೂಡ ಚರ್ಚೆಯಾಗುತ್ತಿರಬಹುದು. ಯಾವುದಕ್ಕೂ ನಾಳೆ(ಸೆ.16) ಸಂಜೆಯೊಳಗೆ ಹಣ ವಾಪಸ್ ನೀಡುವ ಮಾತುಕತೆ ಮುಗಿಯಬಹುದು” ಎಂದು ಮಾಹಿತಿ ನೀಡಿದ್ದಾರೆ.

ಇದೀಗ ಬಿಜೆಪಿ ಹೆಸರಿನಲ್ಲಿ ಟಿಕೆಟ್ ಕೊಡುವ ಭರವಸೆ ನೀಡಿ, ವಂಚಿಸಿರುವ ಇಂತಹ ಪ್ರಕರಣಗಳು ಒಂದೊಂದಾಗಿ ಬೆಳಕಿಗೆ ಬರುತ್ತಿದ್ದು, ಚುನಾವಣೆಯ ವೇಳೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಟಿಕೆಟ್​ಗಾಗಿ ಬಹುದೊಡ್ಡ ‘ಡೀಲ್’ಗಳು ನಡೆದಿದೆಯಾ ಎಂಬ ಪ್ರಶ್ನೆಗಳು ರಾಜಕೀಯ ವಲಯದಲ್ಲಿ ಹೊಸ ಚರ್ಚೆ ಹಾಗೂ ಅನುಮಾನಕ್ಕೆ ವೇದಿಕೆಯೊಗಿಸಿದೆ.

ಈ ಪ್ರಕರಣದಲ್ಲಿ ಆಗಿದ್ದೇನು?
ಈ ಪ್ರಕರಣದಲ್ಲೂ ಚೈತ್ರಾ ಕುಂದಾಪುರ ಗ್ಯಾಂಗ್ ರೀತಿಯಲ್ಲೇ ವಂಚನೆ ಮಾಡಿರುವ ಆರೋಪ ಕೇಳಿ ಬಂದಿದೆ.

ದೆಹಲಿ ಮೂಲದ ವಿಶಾಲ್ ನಾಗ್ ಮತ್ತು ಬೆಂಗಳೂರಿನ ಜೀತು, ಗೌರವ್ ಎಂಬುವರಿಂದ ವಂಚನೆ ನಡೆದಿದೆ. ಸುಮಾರು 21 ಲಕ್ಷ ರೂಪಾಯಿ ಹಣ ಪಂಗನಾಮ ಹಾಕಿರುವುದಾಗಿ ವರದಿಯಾಗಿದೆ.

‘ತಮಗೆ ಅಮಿತ್ ಶಾ ಪರಿಚಯವಿದೆ. ರಾಜ್ಯದಲ್ಲಿ ಸಮೀಕ್ಷೆ ಮಾಡುತ್ತಿದ್ದೇವೆ. ಅದರಲ್ಲಿ ನಿಮ್ಮ ಪತ್ನಿಯ ಹೆಸರು ಮುಂಚೂಣಿಗೆ ತರುತ್ತೇವೆ’ ಎಂದು ವಂಚಕರು ಯಾಮಾರಿಸಿದ್ದಾರೆ.

ತಾನು ಕೇಂದ್ರ ಬಿಜೆಪಿ ಚುನಾವಣೆ ಸಮೀಕ್ಷೆ ಮುಖ್ಯಸ್ಥನೆಂದು ಪರಿಚಯಿಸಿಕೊಂಡಿದ್ದ ವಿಶಾಲ್ ನಾಗ್‌ನನ್ನು ನಂಬಿ ಆಕಾಂಕ್ಷಿಯ ಪತಿ ತಿಮ್ಮಾರೆಡ್ಡಿ, ಬ್ಯಾಂಕ್ ಖಾತೆಗೆ 19 ಲಕ್ಷ ಹಾಗೂ ನಗದು ರೂಪದಲ್ಲಿ ಎರಡು ಲಕ್ಷ ರೂಪಾಯಿ ನೀಡಿದ್ದಾರೆ. ಕೊನೆಗೆ ಟಿಕೆಟ್ ಸಿಗದೇ ಹಣವೂ ವಾಪಸ್ ಬಾರದ ಹಿನ್ನೆಲೆಯಲ್ಲಿ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...