ಕೊಪ್ಪಳ | ವಿಜಯೇಂದ್ರನ ಚಮಚಾಗಳಿದ್ದರೆ ಗೆಟ್‌ಔಟ್‌: ಪತ್ರಕರ್ತರ ವಿರುದ್ಧ ಯತ್ನಾಳ್ ಗರಂ

Date:

Advertisements

ಪ್ರೆಸ್‌ಮೀಟ್‌ನಲ್ಲಿ ವಿಜಯೇಂದ್ರನ ಚಮಚಾಗಳಿದ್ದರೆ ಗೆಟ್‌ಔಟ್‌, ನೀವು ಪಾರದರ್ಶಕವಾಗಿದ್ದರೆ ನನ್ನ ಪ್ರೆಸ್‌ ಮೀಟ್‌ಗೆ ಬನ್ನಿ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿಕಾರಿದರು.

ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಬಸನಗೌಡ ಪಾಟೀಲ್‌ ಯತ್ನಾಳ್‌ ಕೊಪ್ಪಳದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, “ನೀವು ವಿಜಯೇಂದ್ರ ಕಡೆಯವರಾ? ವಿಜಯೇಂದ್ರ ಕೇಳು ಅಂತ ಹೇಳುತ್ತಾನೆ ಹಾಗೆ ಕೇಳುತ್ತೀರಾ?” ಎಂದು ಗರಂ ಆದರು. ಬಳಿಕ ಕೆಲ ಹೊತ್ತು ಮಾಧ್ಯಮದವರು ಹಾಗೂ ಯತ್ನಾಳ್‌ ನಡುವೆ ಮಾತಿನ ಚಕಮಕಿ ನಡೆಯಿತು.

“ಯಡಿಯೂರಪ್ಪ, ವಿಜಯೇಂದ್ರನಿಂದ ಎಂಜಲು ಕಾಸು ತಿನ್ನುವವರು ನನ್ನ ಪ್ರೆಸ್‌ ಮೀಟ್‌ಗೆ ಬರಬೇಡಿ. ಪಾರದರ್ಶಕವಾಗಿದ್ದರೆ ಬನ್ನಿ, ಕೆಲವೊಂದು ಮಾಧ್ಯಮಗಳು ತಮ್ಮಿಂದಲೇ ರಾಜ್ಯದ ಜನರ ಭಾವನೆಯಾಗುತ್ತದೆಂದು ತಿಳಿದುಕೊಂಡಿದ್ದಾರೆ. ಅದು ನಿಮ್ಮ ಮೂರ್ಖತನ. ನನಗೆ ಗೊತ್ತಿದೆ, ಯಾವಯಾವ ಮಾಧ್ಯಮಗಳು ಹೇಗಿವೆ ಎಂಬುದು ನನಗೆ ಗೊತ್ತು. ಸರಿಯಾದ ಮಾಧ್ಯಮದವರು ಹೀಗೆ ಪ್ರಶ್ನೆ ಕೇಳುತ್ತಾರಾ? ಹೇಗೆ ಕೇಳಬೇಕೆಂಬುದು ಗೊತ್ತಿರಬೇಕಲ್ಲವೇ?” ಎಂದು ಸುದ್ದಿಗಾರರ ವಿರುದ್ಧ ಕಿಡಿಕಾರಿದರು.

Advertisements

ಈ ಸುದ್ದಿ ಓದಿದ್ದೀರಾ? ಬೇಲೂರು | ಪವಿತ್ರ ರಂಝಾನ್ ಆಚರಣೆ; ಲೋಕ ಕಲ್ಯಾಣಕ್ಕಾಗಿ ವಿಶೇಷ ಪ್ರಾರ್ಥನೆ

“ಚನ್ನಮ್ಮ, ರಾಯಣ್ಣ ಹಾಗೂ ಅಂಬೇಡ್ಕರ್ ಸೇರಿ ಪಕ್ಷ ಆರಂಭವಾಗುತ್ತದೆ. ವಿಜಯದಶಮಿತನಕ ರಾಜ್ಯಾದ್ಯಂತ ಪ್ರವಾಸ ಮಾಡಿ ಹಾಗೂ ಸಾಮಾಜಿಕ ಮಾಧ್ಯಮಗಳ ಮೂಲಕ ಜನರ ಅಭಿಪ್ರಾಯ ಸಂಗ್ರಹಿಸುತ್ತೇನೆ. ಆ ನಂತರ ಮುಂದಿನ ನಡೆಯ ಬಗ್ಗೆ ತೀರ್ಮಾನ ಮಾಡುತ್ತೇನೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X