ಸಭೆ ಸಮಾರಂಭಗಳಲ್ಲಿ ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕಿ; ಕಂದಾಯ ಸಚಿವ ಕೃಷ್ಣ ಭೈರೇಗೌಡ ಸೂಚನೆ

Date:

Advertisements

ಕಂದಾಯ ಇಲಾಖೆ ಆಯೋಜಿಸುವ ಸಭೆ ಸಮಾರಂಭಗಳಲ್ಲಿ ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕಬೇಕು. ವೆಚ್ಚ ಕಡಿತದ ಸೂಚನೆಗಳನ್ನು ಕಡ್ಡಾಯವಾಗಿ ಅನುಸರಿಸಬೇಕು ಎಂದು ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಈ ಕುರಿತು ಟಿಪ್ಪಣೆ ಹೊರಡಿಸಿರುವ ಸಚಿವ ಕೃಷ್ಣಭೈರೇಗೌಡ ಅವರು, “ಕಂದಾಯ ಇಲಾಖೆಯು ಮಾತೃ ಇಲಾಖೆಯಾಗಿದ್ದು, ಇಲಾಖಾ ವತಿಯಿಂದ ನಾನಾ ಹಂತಗಳಲ್ಲಿ ಸಭೆ ಸಮಾರಂಭಗಳನ್ನು ನಿಯಮಿತವಾಗಿ ಏರ್ಪಡಿಸಲಾಗುತ್ತದೆ. ಕಂದಾಯ ಇಲಾಖೆಯಡಿ ಆಯೋಜಿಸುವ ಸಭೆ ಸಮಾರಂಭಗಳಲ್ಲಿ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಈ ಸೂಚನೆಗಳನ್ನು ಕಡ್ಡಾಯವಾಗಿ ಅನುಸರಿಸಬೇಕು” ಎಂದು ಸೂಚಿಸಿದ್ದಾರೆ.

ಕೃಷ್ಣ ಭೈರೇಗೌಡ 1
  • ಆಡಂಬರ ಮತ್ತು ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕಿ, ಸಭೆ ಸಮಾರಂಭಗಳನ್ನು ಸರಳವಾಗಿ ನಡೆಸುವುದು. ಅನಗತ್ಯವಾಗಿ ಹಾರ, ನೆನಪಿನ ಕಾಣಿಕೆ ನೀಡದೇ, ಅವಶ್ಯವಿದ್ದಲ್ಲಿ ತ್ರಿವರ್ಣ ಖಾದಿ ಹತ್ತಿಯ ಹಾರವನ್ನು ಮಾತ್ರ ಬಳಸುವುದು.
  • ಸಭೆ ಸಮಾರಂಭಗಳಲ್ಲಿ ಆತಿಥ್ಯಕ್ಕೆ, ಔಪಚಾರಿಕತೆಗೆ ಸಮಯ ವ್ಯರ್ಥ ಮಾಡದೇ, ಔಪಚಾರಿಕತೆಗೆ ಸಮಯವನ್ನು ಮಿತವಾಗಿರಿಸಿ, ಸಭೆ ಸಮಾರಂಭದ ಮೂಲ ವಿಷಯಕ್ಕೆ ಹೆಚ್ಚಿನ ಸಮಯ ಒದಗಿಸುವುದು.
  • ಕುಡಿಯುವ ನೀರಿಗೆ ಬಳಸಿ ಬಿಸಾಡುವಂತ ಪ್ಲಾಸ್ಟಿಕ್ ಬಾಟಲ್, ಕಪ್‌ಗಳನ್ನು ಕಡ್ಡಾಯವಾಗಿ ನಿಷೇಧಿಸಿ, ಮರುಬಳಕೆ ಮಾಡುವ ಬಾಟಲ್‌, ಕಪ್‌ಗಳನ್ನು ಉಪಯೋಗಿಸುವುದು. ನೀರನ್ನು 20 ಲೀ, ಕ್ಯಾನ್ ಮುಖಾಂತರ ಖರೀದಿಸಿ, ಮರುಬಳಕೆ ಮಾಡಲಾಗುವ ಬಾಟಲ್‌ಗಳಲ್ಲಿ ನೀಡುವುದು.

ಈ ಸುದ್ದಿ ಓದಿದ್ದೀರಾ? ಮೈಷುಗರ್‌ ಸಕ್ಕರೆ ಕಾರ್ಖಾನೆಗೆ ವಿದ್ಯುತ್‌ ಪೂರೈಸಲು ಒತ್ತಾಯ: ಇಂಧನ ಸಚಿವರಿಗೆ ದಿನೇಶ್‌ ಗೂಳಿಗೌಡ ಪತ್ರ

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

Download Eedina App Android / iOS

X