ಸರ್ಕಾರಕ್ಕೆ ₹19.84 ಕೋಟಿ ಲಾಭಾಂಶ ಹಸ್ತಾಂತರಿಸಿದ ಕೆಎಸ್ಐಐಡಿಸಿ

Date:

Advertisements

ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ (ಕೆಎಸ್ಐಐಡಿಸಿ) ನಿಯಮಿತವು 2022-23ನೇ ಆರ್ಥಿಕ ವರ್ಷದಲ್ಲಿ ತಾನು ಗಳಿಸಿರುವ ನಿವ್ವಳ ಲಾಭಾಂಶದಲ್ಲಿ ಶೇಕಡ 30ರಷ್ಟನ್ನು ಡಿವಿಡೆಂಡ್ ಎಂದು ಘೋಷಿಸಿದ್ದು, ಈ ಬಾಬ್ತಿನ ₹19.84 ಕೋಟಿ ರೂ.ಗಳನ್ನು ಕೈಗಾರಿಕಾ ಸಚಿವ ಎಂ ಬಿ ಪಾಟೀಲ್‌ ಅವರು ಗುರುವಾರ ಚೆಕ್ ರೂಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹಸ್ತಾಂತರಿಸಿದರು.

“ನಿಗಮದಲ್ಲಿ ಸರಕಾರವು 10 ರೂ. ಮುಖಬೆಲೆಯ 69.47 ಕೋಟಿಗೂ ಹೆಚ್ಚು ಷೇರುಗಳನ್ನು ಹೊಂದಿದ್ದು, 2022-23ರಲ್ಲಿ ಇವುಗಳ ಮೌಲ್ಯ 694.70 ಕೋಟಿ ರೂ.ಗಳಿಗೂ ಹೆಚ್ಚಾಗಿತ್ತು. ಫೆ.20ರಂದು ನಡೆದ ನಿಗಮದ ಆಡಳಿತ ಮಂಡಲಿಯ ಸಭೆಯಲ್ಲಿ ಇದರಲ್ಲಿ ಶೇಕಡ 30ರಷ್ಟನ್ನು ಡಿವಿಡೆಂಡ್ ಎಂದು ಘೋಷಿಸುವ ನಿರ್ಣಯವನ್ನು ಮಾಡಲಾಗಿತ್ತು. ಅದರಂತೆ, ಈ ಲಾಭಾಂಶವನ್ನು ಸರಕಾರಕ್ಕೆ ಹಸ್ತಾಂತರಿಸಲಾಗುತ್ತಿದೆ” ಎಂದು ಸಚಿವ ಪಾಟೀಲ್ ತಿಳಿಸಿದ್ದಾರೆ.

ಮೂಲಸೌಕರ್ಯ ಇಲಾಖೆ ಕಾರ್ಯದರ್ಶಿ ಎನ್ ಮಂಜುಳಾ, ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಬಿ ಸಿ ಸತೀಶ್, ಕಾರ್ಯನಿರ್ವಾಹಕ ನಿರ್ದೇಶಕ ಡಿ ಪಿ ಪ್ರಕಾಶ ಮುಂತಾದವರಿದ್ದರು.

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X