ಕೆಎಸ್‌ಆರ್‌ಟಿಸಿ ಮುಚ್ಚುವ ಸ್ಥಿತಿ ನಿರ್ಮಾಣ: ಮಾಜಿ ಸಿಎಂ ಬೊಮ್ಮಾಯಿ

Date:

Advertisements
  • ‘ಕೆಲವೇ ದಿನಗಳಲ್ಲಿ ಕಾಂಗ್ರೆಸ್ ನಾಯಕರ ಬಣ್ಣ ಬಯಲು ಆಗಲಿದೆ’
  • ‘ಒಂದೇ ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಜನಪ್ರಿಯತೆ ಕಳೆದುಕೊಂಡಿದೆ’

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳಿಂದಾಗಿ ಕೆಎಸ್‌ಆರ್‌ಟಿಸಿ ಮುಚ್ಚುವ ಸ್ಥಿತಿ ನಿರ್ಮಾಣ ಆಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಬೆಳಗಾವಿಯಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿ, ” ಡೀಸೆಲ್ ಇಲ್ಲದೇ ಬಸ್‌ಗಳು ನಿಲ್ಲುವ ಸ್ಥಿತಿ ನಿರ್ಮಾಣ ಆಗಲಿದೆ. ಕರ್ನಾಟಕ ಕತ್ತಲಲ್ಲಿ ಮುಳುಗುವ ಸ್ಥಿತಿ ನಿರ್ಮಾಣ ಆಗಲಿದೆ” ಎಂದರು.

“ಗ್ಯಾರಂಟಿಗೆ ಕಂಡಿಷನ್ ಹಾಕಿದ್ದು ಯಾಕೆ? ಒಂದೇ ತಿಂಗಳಲ್ಲಿ ಸರ್ಕಾರ ಜನಪ್ರಿಯತೆ ಕಳೆದುಕೊಂಡಿದ್ದು ಇದೇ ಮೊದಲು. ಮಳೆ ಇಲ್ಲ, ಜಲಾಶಯಗಳಲ್ಲಿ ನೀರು ಇಲ್ಲ. ಈ ಬಗ್ಗೆ ಇವರಿಗೆ ಚಿಂತನೆ ಇಲ್ಲ. ಅಕ್ಕಿ ಕೊಟ್ಟಿಲ್ಲ ಎಂದು ಪ್ರತಿಭಟನೆ ಮಾಡಲು ಯಾವ ನೈತಿಕತೆ ಇದೆ” ಎಂದು ಹರಿಹಾಯ್ದರು.

Advertisements

“ಸರ್ಕಾರದಲ್ಲಿದ್ದುಕೊಂಡು ಇವರು ಪ್ರತಿಭಟನೆ ಮಾಡುತ್ತಿದ್ದಾರೆ. ಅಕ್ಕಿ ಖರೀದಿಯಲ್ಲಿ ಏನಾಗಿದೆ ಎಂಬುದು ನನಗೆ ಗೊತ್ತು. ಕೆಲವೇ ದಿನಗಳಲ್ಲಿ ಕಾಂಗ್ರೆಸ್ ನಾಯಕರ ಬಣ್ಣ ಬಯಲು ಆಗಲಿದೆ. ನಮ್ಮ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಿದ್ದರು. ಈಗ ಪರ್ಸೆಂಟೇಜ್ ಫಿಕ್ಸ್ ಆಗುತ್ತಿದೆ. ಯಾವ ಯಾವ ಮಂತ್ರಿ ಗುತ್ತಿಗೆದಾರನಿಗೆ ಕರೆದು ಏನ್ ಹೇಳಿದ್ದಾರೆ ಗೊತ್ತು” ಎಂದರು.

ಸಾರಿಗೆ ಇಲಾಖೆಗೆ ಯಾವುದೇ ನಷ್ಟ ಆಗಿಲ್ಲ: ರಾಮಲಿಂಗಾರೆಡ್ಡಿ

ಸಾರಿಗೆ ಇಲಾಖೆಗೆ ಯಾವುದೇ ನಷ್ಟ ಆಗಿಲ್ಲ, ಶಕ್ತಿಯುತವಾಗಿದೆ ಎಂದು ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.

“ಶಕ್ತಿ ಯೋಜನೆಯಲ್ಲಿ ಕೆಲ ಸಣ್ಣಪುಟ್ಟ ದೋಷಗಳಿವೆ. ಆದರೆ ಯೋಜನೆಯಿಂದ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡುವ ಮಹಿಳೆಯರ ಸಂಖ್ಯೆ ಹೆಚ್ಚಾಗಿದೆ. ಒಮ್ಮೆ ಹೋದವರು ಮತ್ತೆ ಹೋಗುವುದಿಲ್ಲ, ಎಲ್ಲ ಸರಿಹೋಗಲಿದೆ” ಎಂದರು.

“ಸಾರಿಗೆ ಸಂಸ್ಥೆಗಳಿಗೆ ವಿಶೇಷ ಅನುದಾನ ನೀಡಬೇಕಾಗುತ್ತದೆ. ಪ್ರಯಾಣಿಕರ ಜೊತೆ ಸೌಜನ್ಯದಿಂದ ವರ್ತಿಸುವಂತೆ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ. ಸಾರ್ವಜನಿಕರು ಕೂಡ ಸಿಬ್ಬಂದಿಗೆ ಸಹಕಾರ ನೀಡಬೇಕು” ಎಂದು ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಓಳ್ಳೆದೇ ,ನಿನ್ನ ಪಕ್ಷದವರು ಅದಾನಿಗೋ ಅಂಬಾನಿಗೆ ಕೋಟ್ಟಿಬಿಡೀ ,ಸೀದಾ 40% ಬಂತಲ್ಲಾ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X