ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಅರಣ್ಯ ಇಲಾಖೆಗೆ ₹1,400 ಕೋಟಿ ಪಾವತಿಸಿಲ್ಲ: ಸಚಿವ ಈಶ್ವರ ಖಂಡ್ರೆ

Date:

Advertisements

ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಹೇಳಿರುವಂತೆ ದೇವದಾರಿ ಗಣಿಗಾರಿಕೆಗಾಗಿ ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಅರಣ್ಯ ಇಲಾಖೆಗೆ 500 ಕೋಟಿ ರೂ. ಪಾವತಿಸಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

ವಿಕಾಸಸೌಧದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಈ ಹಿಂದೆ ಕುದುರೆಮುಖದಲ್ಲಿ ಗಣಿಗಾರಿಕೆ ನಡೆಸಿದ ಕೆ.ಐ.ಓ.ಸಿ.ಎಲ್. ಪರಿಸರಕ್ಕೆ ಮಾಡಿರುವ ಹಾನಿಯ ಮೊತ್ತ ಸೇರಿದಂತೆ ಇಲಾಖೆಗೆ ಸುಮಾರು 1400 ಕೋಟಿ ರೂಪಾಯಿ ಬಾಕಿ ಪಾವತಿಸಬೇಕು” ಎಂದು ಹೇಳಿದರು.

“ಅಕ್ರಮವಾಗಿ ಲಕ್ಯಾ ಜಲಾಶಯದ ಎತ್ತರ ಹೆಚ್ಚಿಸಿ, ಅರಣ್ಯ ಮುಳುಗಡೆ ಮಾಡಿದ್ದಕ್ಕಾಗಿ 119.12 ಕೋಟಿ, ಗಣಿಗಾರಿಕೆಗಾಗಿ ಹೊಸ ಭೂಮಿ ಅಗೆದಿದ್ದಕ್ಕಾಗಿ 19.88 ಕೋಟಿ ರೂ. ಸೇರಿದಂತೆ 142.96 ಕೋಟಿ ರೂ.ಗಳನ್ನು ಪರೋಕ್ಷ ಮತ್ತು ಪ್ರತ್ಯಕ್ಷ ಪರಿಸರ ಹಾನಿಗಾಗಿ ಕಂಪನಿ ಪಾವತಿಸಬೇಕು. ಇದಲ್ಲದೆ ಮಹಾ ಲೆಕ್ಕಪರಿಶೋಧಕರು ಉಲ್ಲೇಖಿಸಿರುವಂತೆ ನಿವ್ವಳ ಪ್ರಸ್ತುವ ಮೌಲ್ಯ (ಎನ್.ಪಿ.ವಿ.) ಮೊತ್ತ, ಬಡ್ಡಿ ಸೇರಿ 1349 ಕೋಟಿ ರೂ. ಪಾವತಿಸಬೇಕು” ಎಂದು ಈಶ್ವರ ಖಂಡ್ರೆ ವಿವರ ನೀಡಿದರು.

Advertisements

“ಇದರ ಜೊತೆಗೆ ಕೆ.ಐ.ಓ.ಸಿ.ಎಲ್. ತನ್ನ ಸ್ವಂತ ಭೂಮಿ 114.30 ಹೆಕ್ಟೇರ್, ಸರ್ಕಾರದ ಕಂದಾಯ ಭೂಮಿ 1220.03 ಹೆಕ್ಟೇರ್ ಸೇರಿ ಒಟ್ಟು 1334.33 ಹೆಕ್ಟೇರ್ ಭೂಮಿಯನ್ನು ಅರಣ್ಯ ಇಲಾಖೆಗೆ ಹಿಂತಿರುಗಿಸಬೇಕು. ಈ ಪೈಕಿ 670 ಹೆಕ್ಟೇರ್ ಪ್ರದೇಶವನ್ನು ಅಂಕೋಲ- ಹುಬ್ಬಳ್ಳಿ ರೈಲು ಮಾರ್ಗಕ್ಕೆ ಗುರುತಿಸಲಾಗಿದೆ” ಎಂದು ತಿಳಿಸಿದರು.

“ಕುದುರೇಮುಖ ಕಬ್ಬಿಣದ ಅದಿರು ಕಂಪನಿ ಈ ಹಿಂದೆ ಕುದುರೇಮುಖ ಅರಣ್ಯ ಪ್ರದೇಶದಲ್ಲಿ ನಡೆಸಿದ ಗಣಿಗಾರಿಕೆಯ ವೇಳೆ ಪರಿಸರಕ್ಕೆ ಉಂಟು ಮಾಡಿರುವ ಹಾನಿ ವಿಪರೀತವಾಗಿದೆ. ಈ ಬಗ್ಗೆ ನ್ಯಾಯಾಲಯದ ತೀರ್ಪುಗಳಲ್ಲಿ, ಕೇಂದ್ರ ಉನ್ನತಾಧಿಕಾರ ಸಮಿತಿ (ಸಿ.ಇ.ಸಿ.) ವರದಿಯಲ್ಲಿ ಹಾಗೂ 13ನೇ ವಿಧಾನಸಭೆಯ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ನೀಡಿರುವ 3ನೇ ವರದಿಯಲ್ಲೂ ವಿವರವಾಗಿ ತಿಳಿಸಲಾಗಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X