ಮೀಸಲಾತಿ ಘೋಷಣೆ ಎಂಬುದು ಈ ಸರ್ಕಾರಕ್ಕೆ ಮಕ್ಕಳ ಆಟಿಕೆಯಂತಾಗಿದೆ: ಕುಮಾರಸ್ವಾಮಿ ಕಿಡಿ

Date:

Advertisements
  • ಮೀಸಲಾತಿ ಘೋಷಣೆಗೆ ಮುನ್ನ ವೈಜ್ಞಾನಿಕವಾಗಿ ಅಧ್ಯಯನ ಮಾಡಿದ್ದೀರಾ?
  • ಮೋದಿಗೆ ಕನ್ನಡಿಗರ ಮತ ಬೇಕು, ಆದರೆ, ಕನ್ನಡಿಗರಿಗೆ ಪ್ರಧಾನಿ ಕೊಡುಗೆ ಏನು?

ಮೀಸಲಾತಿ ಘೋಷಣೆ ಎಂಬುದು ಈ ಸರ್ಕಾರಕ್ಕೆ ಮಕ್ಕಳ ಆಟಿಕೆಯಂತಾಗಿದೆ. ರಾಜ್ಯ ಸರ್ಕಾರ ಯಾವ ಆಧಾರದಲ್ಲಿ ಮೀಸಲಾತಿ ಘೋಷಣೆ ಮಾಡಿದೆ. ಮೀಸಲಾತಿ ಘೋಷಣೆಗೆ ಮುನ್ನ ವೈಜ್ಞಾನಿಕವಾಗಿ ಅಧ್ಯಯನ ಮಾಡಿದ್ದೀರಾ? ಯಾರ ಸಲಹೆ ಪಡೆದು ಮೀಸಲಾತಿ ಘೋಷಣೆ ಮಾಡಿದ್ದೀರಾ? ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಜೆಡಿಎಸ್ ಪಂಚರತ್ನ ಯಾತ್ರೆ ಸಮಾರೋಪ ಯಶಸ್ವಿ ಹಿನ್ನೆಲೆಯಲ್ಲಿ ಸೋಮವಾರ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

“ಈ ಸರ್ಕಾರದ ಸಾಧನೆ ಬಣ್ಣ ಬಣ್ಣದ ಜಾಹೀರಾತಿಗೆ ಸೀಮಿತವಾಗಿದೆ. ಉತ್ತರ ಕರ್ನಾಟಕ ಸಿಎಂ ಕ್ಷೇತ್ರದ ಬಡತನದ ಬಗ್ಗೆ ಕೇಂದ್ರ ವರದಿ ಮಾಡಿದೆ. ಅಪೌಷ್ಟಿಕತೆಯ ಬಗ್ಗೆಯೂ ಕೇಂದ್ರ ಸರ್ಕಾರ ವರದಿ ನೀಡಿದೆ. ಡಬಲ್ ಇಂಜಿನ್ ಸರ್ಕಾರದ ಬಗ್ಗೆ ಹೇಳುತ್ತಾರೆ. ಬಡತನ ಅಪೌಷ್ಟಿಕತೆ ನಿವಾರಿಸುವಲ್ಲಿ ಸರ್ಕಾರ ವಿಫಲವಾಗಿದೆ” ಎಂದು ವಾಗ್ದಾಳಿ ನಡೆಸಿದರು.

Advertisements

ಮೋದಿ ಸಮಾಧಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, “ಅವರನ್ನು ಸಮಾಧಿ ಮಾಡಲು ಯಾರಿಗೆ ಆಗುತ್ತದೆ. ಅಂಬೇಡ್ಕರ್ ಅವರ ಸಂವಿಧಾನ ಸಮಾಧಿ ಮಾಡಲು ಹೊರಟಿರುವುದೇ ಅವರು. ಒಬ್ಬ ಪ್ರಧಾನಿ ಬಾಯಿಂದ ಈ ರೀತಿಯ ಮಾತು ಎಷ್ಟರಮಟ್ಟಿಗೆ ಸರಿ? ಮೋದಿಗೆ ಕನ್ನಡಿಗರ ಮತ ಬೇಕು, ಕನ್ನಡಿಗರಿಗೆ ಅವರ ಕೊಡುಗೆ ಏನು” ಎಂದು ಪ್ರಶ್ನಿಸಿದರು.

“ಸಮಾವೇಶಕ್ಕೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವೆ. ಮುಂದಿನ ಏಪ್ರಿಲ್ 10ರವೆಗೂ ಪಂಚರತ್ನ ಯಾತ್ರೆ ಮುಂದುವರೆಯಲಿದೆ. ಬೆಂಗಳೂರ ನಗರದ ಕ್ಷೇತ್ರದಲ್ಲಿ ನಾಳೆಯಿಂದ ರಥಯಾತ್ರೆ ನಡೆಯಲಿದೆ. 6ರಂದು ಮೈಸೂರಿನ ಪಿರಿಯಾಪಟ್ಟಣ, 7 ರಂದು ಕೆಆರ್ ನಗರ ನಂತರ ಕೊಳ್ಳೇಗಾಲ ಹನೂರು ಗುಂಡ್ಲುಪೇಟೆ ಕ್ಷೇತ್ರದಲ್ಲಿ ರಥಯಾತ್ರೆ ನಡೆಸುತ್ತೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X