ಪ್ರಜ್ವಲ್ ಪ್ರಕರಣದಿಂದ ದೇವೇಗೌಡರು ತುಂಬಾ ನೊಂದಿದ್ದಾರೆ: ಮೊದಲ ಬಾರಿಗೆ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ

Date:

Advertisements

ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಹಾಗೂ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ , “ಪ್ರಜ್ವಲ್ ಪ್ರಕರಣದಿಂದ ದೇವೇಗೌಡ ಹಾಗೂ ಅವರ ಪತ್ನಿ ತುಂಬಾ ನೊಂದುಕೊಂಡಿದ್ದಾರೆ” ಎಂದಿದ್ದಾರೆ.

ಬೆಂಗಳೂರಿನ ಪದ್ಮನಾಭನಗರ ನಿವಾಸದಲ್ಲಿ ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡರ ಆರೋಗ್ಯವನ್ನು ವಿಚಾರಿಸಿದ ಬಳಿಕ ಮಾತನಾಡಿದ ಅವರು, “ಕುಮಾರಸ್ವಾಮಿ, ದೇವೇಗೌಡರು ಹಲವಾರು ವರ್ಷಗಳಿಂದ ರಾಜಕೀಯದಲ್ಲಿ ಇದ್ದಾರೆ. ವಿಶೇಷವಾಗಿ ದೇವೇಗೌಡರ ವೈಯಕ್ತಿಕ ಬದುಕು ತೆರೆದ ಪುಸ್ತಕ. ಅದರಲ್ಲಿ ಮುಚ್ಚುಮರೆ ಇಲ್ಲ. ದೇವೇಗೌಡರಾಗಲಿ, ಅಜ್ಜಿ ಚೆನ್ನಮ್ಮ ಅವರಾಗಲಿ ನಮ್ಮಂತ ಯುವಕರಿಗೆ ಸ್ಫೂರ್ತಿ. ದಂಪತಿ ಯಾವ ರೀತಿ ಬಾಳಿ ಬದುಕಬೇಕು ಅನ್ನೋದಕ್ಕೆ ಅವರಿಗಿಂತ ಉದಾಹರಣೆ ಯಾರು ನನಗೆ ಕಾಣುವುದಿಲ್ಲ. ಆದರೆ, ಈ ಪೆನ್‌ಡ್ರೈವ್ ಘಟನೆಯಿಂದ ತುಂಬಾ ನೊಂದಿದ್ದಾರೆ” ಎಂದರು.

“ದೇವೇಗೌಡರಿಗೆ 91 ವರ್ಷ. ಸಹಜವಾಗಿ ಇಂತಹ ವಿಷಯ ಕೇಳಿದ ಮೇಲೆ ದೇವೇಗೌಡರ ಮೇಲೆ ಯಾವ ರೀತಿ ಪರಿಣಾಮ ಆಗಿರುತ್ತೆ, ಅಘಾತವಾಗಿರುತ್ತೆ ಅಂತ ಯಾರು ಊಹೆ ಮಾಡಲು ಸಾಧ್ಯವಿಲ್ಲ. ದೇವೇಗೌಡರು ಸಾಕಷ್ಟು ನೊಂದಿದ್ದಾರೆ. ಇಡೀ ರಾಜ್ಯದ ಜನತೆಗೂ ಕೂಡಾ ದೇವೇಗೌಡ ಮನಸಿನ ಮೇಲೆ ಯಾವ ರೀತಿ ಪರಿಣಾಮ ಬೀರಿರಬೇಕು ಅಂತ ಎಲ್ಲರಿಗೂ ಗೊತ್ತಿರುವ ವಿಷಯ” ಎಂದರು.

Advertisements

“ನನಗೆ ಒಂದು ವಿಷಯಕ್ಕೆ ದುಃಖ ಆಗಿದೆ. ಆ ವಿಡಿಯೋಗಳನ್ನು ನೋಡಲು ನಾನು ಧೈರ್ಯ ಮಾಡಲಿಲ್ಲ, ನನ್ನ ಸ್ನೇಹಿತರು ಫೋನ್‌ ಮಾಡಿ ಹೇಳಿದರು. ಬ್ಲರ್‌ ಮಾಡದೇ ವಿಡಿಯೋ ಹರಿಬಿಟ್ಟಿದ್ದಾರೆ. ಆ ಹೆಣ್ಣು ಮಕ್ಕಳ ಮುಖ ಕಾಣುವ ರೀತಿ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಈ ರೀತಿ ವಿಡಿಯೋ ಬಿಡುಗಡೆ ಮಾಡಿರುವವರ ಮೇಲೆ ಕ್ರಮ ಆಗಬೇಕು” ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.

ಇದನ್ನು ಓದಿದ್ದೀರಾ? ಈ ದಿನ ಸಮೀಕ್ಷೆ | ‘ಬಿಜೆಪಿ ಬಂದ ಬಳಿಕವೂ ಭ್ರಷ್ಟಾಚಾರ ಕಡಿಮೆಯಾಗಿಲ್ಲ’ ಎಂದ ಉತ್ತರ ಕರ್ನಾಟಕದ ಮಂದಿ!

“ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವೇಗೌಡ, ಕುಮಾರಸ್ವಾಮಿಯವರನ್ನ ಎಳೆದು ತರೋದು ಸರಿಯಲ್ಲ. ತಪ್ಪು ಮಾಡಿದವರು ತಲೆ ಬಾಗಲೇಬೇಕು. ತಪ್ಪಿಸಿಕೊಳ್ಳುವ ಪ್ರಶ್ನೆ ಇಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಈಗಾಗಲೇ ಎಸ್‌ಐಟಿ ರಚನೆ ಮಾಡಿದ್ದು, ತನಿಖೆ ಆಗುತ್ತಿದೆ. ಕಾನೂನಿಗಿಂತ ಯಾರೂ ದೊಡ್ಡವರಿಲ್ಲ. ಅಂತಿಮವಾಗಿ ಎಸ್‌ಐಟಿ ವರದಿ ಬಂದ ಮೇಲೆ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳುತ್ತಾರೆ. ಅದರ ಬಗ್ಗೆ ನಾನು ಹೆಚ್ಚಿಗೆ ಮಾತನಾಡಲ್ಲ. ಅಂತಿಮವಾಗಿ ತನಿಖಾ ವರದಿ ಬಂದ ಮೇಲೆ ಮುಂದಿನ ದಿನಗಳಲ್ಲಿ ಮಾತನಾಡುತ್ತೇನೆ” ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X