ಅಧಿಕಾರಿಗಳೊಂದಿಗೆ ಕುಮಾರಸ್ವಾಮಿ ಮೊದಲ ಸಭೆ; ʼಚೀನಾದೊಂದಿಗೆ ಸ್ಪರ್ಧೆʼ ಪರಿಕಲ್ಪನೆ‌ ಬಗ್ಗೆ ಚರ್ಚೆ

Date:

Advertisements

ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವಾಲಯಗಳ ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕಾರಕ್ಕೂ ಮುನ್ನ ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ಅವರು ಮಂಗಳವಾರ ಉಕ್ಕು ಸಚಿವಾಲಯದ ಉನ್ನತ ಅಧಿಕಾರಿಗಳ ಜತೆ ಸಭೆ ನಡೆಸಿದರು.

ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡರ ನಿವಾಸದಲ್ಲಿ ಸಭೆ ನಡೆಸಿದ ಸಚಿವರು, ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಪುನಶ್ಚೇತನದ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿದರು. ಅವಕಾಶಗಳ ಬಗ್ಗೆ ಶೀಘ್ರವೇ ಸಮಗ್ರ ಮಾಹಿತಿ ಕೊಡುವಂತೆ ಅಧಿಕಾರಿಗಳಿಗೆ ಕುಮಾರಸ್ವಾಮಿ ಸೂಚಿಸಿದರು.

ಕುದುರೆಮುಖದಲ್ಲಿ ಸಿಗುತ್ತಿದ್ದ ಕಬ್ಬಿಣದ ಅದಿರು ಜಗತ್ತಿನಲ್ಲಿಯೇ ಶ್ರೇಷ್ಠ ಗುಣಮಟ್ಟದ ಅದಿರು ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಜೊತೆಗೆ ಬೆಂಗಳೂರಿನಲ್ಲಿ ಉಕ್ಕು ಸಂಶೋಧನಾ ಕೇಂದ್ರ ಸ್ಥಾಪನೆ ಬಗ್ಗೆ ಸಚಿವರ ಗಮನ ಸೆಳೆದರು.

Advertisements

ಉಕ್ಕು ಸಂಶೋಧನೆ ಮತ್ತು ಅಭಿವೃದ್ಧಿಗೆ ಹೆಚ್ಚು ಒತ್ತು ಕೊಟ್ಟರೆ ಕೈಗಾರಿಕೆಗಳಿಗೆ ಅನುಕೂಲವಾಗುತ್ತದೆ. ಬೃಹತ್ ಕೈಗಾರಿಕೆ ಖಾತೆಯನ್ನು ತಮಗೇ ಕೊಟ್ಟಿರುವ ಕಾರಣ ಉಕ್ಕು ಖಾತೆಗೆ ಹೆಚ್ಚು ಸಹಾಯ ಆಗುತ್ತಿದೆ. ಸಿಎಂ ಆಗಿದ್ದ ವೇಳೆ ಕರ್ನಾಟಕದಲ್ಲಿ ಕೈಗಾರಿಕೆ ಕ್ಷೇತ್ರದಲ್ಲಿ ತಾವು ಮಾಡಿದ್ದ ಕೆಲಸಗಳ ಮಾಹಿತಿಯನ್ನು ಅಧಿಕಾರಿಗಳಿಗೆ ಸಚಿವರು ನೀಡಿದರು.

ಸಭೆಯಲ್ಲಿ ‘ಚೀನಾದೊಂದಿಗೆ ಸ್ಪರ್ಧೆʼ ಪರಿಕಲ್ಪನೆ ಬಗ್ಗೆ ವಿವರಣೆ ನೀಡಿದ ಅಧಿಕಾರಿಗಳಿಗೆ ಮೆಚ್ಚುಗೆ ಸೂಚಿಸಿದರು. ಇಡೀ ದೇಶದ ಎಲ್ಲ ರಾಜ್ಯಗಳ ಅಭಿವೃದ್ಧಿ ನನ್ನ ಗುರಿ ಎಂದು ಸಚಿವರು ತಿಳಿಸಿದರು.

“ಅವಕಾಶ ಇರುವ ಕೈಗಾರಿಕೆಗಳನ್ನು ಪುನಃಶ್ಚೇತನ ಮಾಡೋಣ. ಸುಖಾ ಸುಮ್ಮನೆ ಜನರ ತೆರಿಗೆ ಹಣ ಪೋಲು ಮಾಡೋದು ಬೇಡ. ಪ್ರಧಾನಿಗಳು ಬಹಳ ವಿಶ್ವಾಸ ಇಟ್ಟು ಮಹತ್ವದ ಖಾತೆಗಳನ್ನು ಕೊಟ್ಟಿದ್ದಾರೆ. ಅವರ ನಿರೀಕ್ಷೆ ಹುಸಿ ಆಗಬಾರದು” ಎಂದರು.

ಸಭೆಯಲ್ಲಿ ಸುಕೃತಿ ಲಿಖಿ – ಉಕ್ಕು ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ, ವಿನೋದ್ ಕುಮಾರ್ ತ್ರಿಪಾಠಿ – ಜಂಟಿ ಕಾರ್ಯದರ್ಶಿ, ಅಶ್ವಿನಿ ಕುಮಾರ್, ಆರ್ಥಿಕ ಸಲಹೆಗಾರರು, ಸುಭಾಷ್ ಕುಮಾರ್, ಉಪ ಕಾರ್ಯದರ್ಶಿ ಭಾಗಿಯಾಗಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X