- ಕುಮಾರಸ್ವಾಮಿ ಮಾತುಗಳನ್ನು ಗಂಭೀರವಾಗಿ ಪರಿಗಣಿಸಲು ಸಾಧ್ಯವೇ?
- ಪ್ರಶ್ನೆ ಮಾಡಿದವರನ್ನ ಹೊರ ದಬ್ಬುವ ಚಾಳಿ ಕುಮಾರಸ್ವಾಮಿಗಿದೆ: ಕಿಡಿ
ಕುಮಾರಸ್ವಾಮಿಯವರ ಮಾತುಗಳಿಗೆ, ತೀರ್ಮಾನಗಳಿಗೆ ಅವರದ್ದೇ ಪಕ್ಷದಲ್ಲಿ ನಯಾಪೈಸೆ ಕಿಮ್ಮತ್ತಿಲ್ಲ. ಹೀಗಿರುವಾಗ ಕಾಂಗ್ರೆಸ್ ಪಕ್ಷ ಅವರ ಮಾತುಗಳನ್ನು ಗಂಭೀರವಾಗಿ ಪರಿಗಣಿಸಲು ಸಾಧ್ಯವೇ?! ಎಂದು ಕಾಂಗ್ರೆಸ್ ಕುಟುಕಿದೆ.
ಬಿಜೆಪಿ ಜೊತೆ ಮೈತ್ರಿ ವಿಚಾರವಾಗಿ ಜೆಡಿಎಸ್ನಲ್ಲಿ ಈಗ ಸಿಎಂ ಇಬ್ರಾಹಿಂ ಹಾಗೂ ಎಚ್ಡಿ ಕುಮಾರಸ್ವಾಮಿ ನಡುವೆ ಸಮರ ನಡೆಯುತ್ತಿದೆ. ಇದೇ ವಿಚಾರವನ್ನು ಇಟ್ಟುಕೊಂಡು ಕರ್ನಾಟಕ ಕಾಂಗ್ರೆಸ್, ಜೆಡಿಎಸ್ ಹಾಗೂ ಎಚ್ಡಿ ಕುಮಾರಸ್ವಾಮಿ ವಿರುದ್ಧ ಟ್ವೀಟ್ ಮೂಲಕ ಕಿಡಿಕಾರಿದೆ.
“ಕುಮಾರಸ್ವಾಮಿಯವರು ರಾಜಕೀಯ ತೀರ್ಮಾನ ತೆಗೆದುಕೊಳ್ಳಲು ಜೆಡಿಎಸ್ ಪಕ್ಷದ ಯಾವುದೇ ಪದಾಧಿಕಾರಿ ಅಲ್ಲ. ಅಪ್ಪನ ಹೆಸರಿನಲ್ಲಿ ನಡೆಸುವ ದರ್ಬಾರು! ಪ್ರಶ್ನೆ ಮಾಡಿದವರನ್ನ ಹೊರ ದಬ್ಬುವ ಚಾಳಿ! ರಾಜ್ಯ ರಾಜಕೀಯ ವ್ಯಾಪಾರದ ದಲ್ಲಾಳಿ!” ಎಂದು ಟೀಕಿಸಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಜಾಪ್ರಭುತ್ವದ ವ್ಯಾಖ್ಯಾನ ಬದಲಿಸಿದ ಕಾಂಚಾಣ
“ಇತ್ತೀಚಿನ ದಿನಗಳಲ್ಲಿ ಹೊರಬರುತ್ತಿರುವ ಸತ್ಯ ಏನೆಂದರೆ ಮೈತ್ರಿ ಇರುವುದು ಅಮಿತ್ ಶಾ ಹಾಗೂ ಕುಮಾರಸ್ವಾಮಿ ನಡುವೆ ಹೊರತು ಬಿಜೆಪಿ ಜೆಡಿಎಸ್ ನಡುವೆ ಅಲ್ಲ! ಇತ್ತ ಬಿಜೆಪಿ ನಾಯಕರಿಗೂ ಮೈತ್ರಿ ಬಗ್ಗೆ ಅಸಮಾಧಾನ, ಅತ್ತ ಒರಿಜಿನಲ್ ಜೆಡಿಎಸ್ ನವರಿಗೂ ಅಸಮಾಧಾನ. ಇಂತಹದ್ದನ್ನು ಮೈತ್ರಿ ಎನ್ನಲಾದೀತೆ” ಎಂದು ಪ್ರಶ್ನಿಸಿದೆ.
“ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ನಾನೇ ಜೆಡಿಎಸ್ ರಾಜ್ಯಾಧ್ಯಕ್ಷ ಪಕ್ಷದ ತೀರ್ಮಾನಗಳನ್ನು ನಾನೇ ತೆಗೆದುಕೊಳ್ಳುವುದು ಎಂದು ಕುಮಾರಸ್ವಾಮಿಯವರಿಗೆ ನೀವು “ಲೆಕ್ಕಕ್ಕಿಲ್ಲ” ಎಂದು ಹೇಳಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಕುಮಾರಸ್ವಾಮಿಯವರದ್ದು ಅಬ್ಬೇಪಾರಿ ಸ್ಥಿತಿಗಿಂತ ಭಿನ್ನವಾಗಿಲ್ಲ!” ಎಂದು ಲೇವಡಿ ಮಾಡಿದೆ.
ಇತ್ತೀಚಿನ ದಿನಗಳಲ್ಲಿ ಹೊರಬರುತ್ತಿರುವ ಸತ್ಯ ಏನೆಂದರೆ ಮೈತ್ರಿ ಇರುವುದು ಅಮಿತ್ ಶಾ ಹಾಗೂ ಕುಮಾರಸ್ವಾಮಿ ನಡುವೆ ಹೊರತು ಬಿಜೆಪಿ ಜೆಡಿಎಸ್ ನಡುವೆ ಅಲ್ಲ!
ಇತ್ತ ಬಿಜೆಪಿ ನಾಯಕರಿಗೂ ಮೈತ್ರಿ ಬಗ್ಗೆ ಅಸಮಧಾನ, ಅತ್ತ ಒರಿಜಿನಲ್ ಜೆಡಿಎಸ್ ನವರಿಗೂ ಅಸಮಧಾನ.
ಇಂತಹದ್ದನ್ನು ಮೈತ್ರಿ ಎನ್ನಲಾದೀತೆ?ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ನಾನೇ…
— Karnataka Congress (@INCKarnataka) October 17, 2023