ಗಂಗೆಯಲ್ಲಿ ಮಿಂದ ತಕ್ಷಣ ಡಿ ಕೆ ಶಿವಕುಮಾರ್ ಅವರ ಪಾಪಗಳೆಲ್ಲ ಕಳೆದುಹೋಗುತ್ತಾ? ಎಂಬ ವಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆಗೆ ಡಿಸಿಎಂ ಡಿಕೆ ಶಿಕವಕುಮಾರ್ ತಿರುಗೇಟು ನೀಡಿದ್ದಾರೆ.
ಕುಂಭಮೇಳಕ್ಕೆ ಹೋಗುವುದು ಬಿಡುವುದು ನನ್ನ ವೈಯಕ್ತಿಕ ವಿಚಾರ. ನನ್ನ ವೈಯಕ್ತಿಕ ನಂಬಿಕೆ, ಭಕ್ತಿ ಬಗ್ಗೆ ಮಾತನಾಡುವ ನೈತಿಕತೆ ಯಾರಿಗೂ ಇಲ್ಲ. ಎಲ್ಲರಿಗೂ ಅವರದ್ದೇ ಆದ ಭಕ್ತಿ, ನಂಬಿಕೆಗಳು ಇರುತ್ತವೆ ಎಂದು ವಾಗ್ದಾಳಿ ನಡೆಸಿದರು.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದು ನಮ್ಮ ಧರ್ಮ-ಕರ್ಮ, ನಮ್ಮ ಆಚಾರ-ವಿಚಾರ ಮತ್ತು ನಮ್ಮ ನಂಬಿಕೆ. ಗಂಗೆ, ಕಾವೇರಿ, ಕೃಷ್ಣ ಮತ್ತು ಭ್ರಹ್ಮಪುತ್ರ ನದಿಗಳು ಯಾರ ಸ್ವತ್ತು ಅಲ್ಲ. ಹಾಗಾದರೆ, ಅವರು ಅಶೋಕ್ ಅಂತ ಯಾಕೆ ಹೆಸರು ಇಟ್ಟುಕೊಂಡಿದ್ದಾರೆ. ಅಶೋಕ್ ಬದಲು ಕಲ್ಲು ಮಣ್ಣು ಎಂದು ಹೆಸರು ಇಟ್ಟುಕೊಳ್ಳಬಹುದಲ್ಲ. ನನ್ನ ನಂಬಿಕೆ ಬಗ್ಗೆ ಮಾತಾಡುವ ಅಶೋಕ್ ಅವರಿಗೆ ಏನೋ ಸಮಸ್ಯೆ ಇರಬೇಕು. ಮೊದಲು ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಲಿ. ನನ್ನ ಹೆಸರು ಹೇಳದಿದ್ರೆ ಕೆಲವರಿಗೆ ನಿದ್ದೆ ಬರುವುದಿಲ್ಲ, ಉತ್ಸಾಹ ಬರಲ್ಲ ಎಂದು ಆಕ್ರೋಶಗೊಂಡರು.
“ಪ್ರಪಂಚದಲ್ಲಿ ಹಲವಾರು ಧಾರ್ಮಿಕ ಆಚರಣೆ, ನಂಬಿಕೆಗಳಿವೆ. ನಾನು ನನ್ನ ದೇವರನ್ನು ನಂಬುತ್ತೇನೆ. ಕೆಲವರು ಹಸ್ತ ನೋಡಿಕೊಳುತ್ತಾರೆ, ಇನ್ನೂ ಕೆಲವರು ನೀರು, ಆಕಾಶ, ಸೂರ್ಯನನ್ನು ನಂಬುತ್ತಾರೆ. ಇದರಲ್ಲಿ ಸರಿ ತಪ್ಪು ಎಂಬುದಿಲ್ಲ, ಅವರವರ ನಂಬಿಕೆ ಅಷ್ಟೇ” ಎಂದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನಿದ್ರಿಸುವ ಸಚಿವರು, ಪ್ರಶ್ನಿಸದ ಸಂಸದರು- ಕರ್ನಾಟಕದ ಹಿತ ಕಾಪಾಡುವವರು ಯಾರು?
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು, ಅವರ ವಿಚಾರ ಹೇಳಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ವಿಚಾರವಾಗಿ ಮಾತನಾಡಿದ ಅವರು, ಎರಡನೇ ವಿಮಾನ ನಿಲ್ದಾಣಕ್ಕೆ ನಮ್ಮ ಕೈಗಾರಿಕಾ ಸಚಿವರು ಸ್ಥಳ ಹುಡುಕಾಡುತ್ತಿದ್ದಾರೆ. ಇನ್ನು, ಈ ಬಗ್ಗೆ ನನ್ನ ಮತ್ತು ಮುಖ್ಯಮಂತ್ರಿಗಳ ಬಳಿ ಚರ್ಚೆ ಮಾಡಿಲ್ಲ. ಅಂತಿಮ ನಿರ್ಧಾರವಾಗಿಲ್ಲ ಎಂದರು.
ಬೆಂಗಳೂರಿನಲ್ಲಿ ನೀರಿನ ದರ ಏರಿಕೆ ಮಾಡಬೇಕೆಂಬ ಪ್ರಸ್ತಾಪ ಬಂದಿದೆ. ಮುಂದಿನ ಸಂಪುಟ ಸಭೆಯಲ್ಲಿ ಕಾವೇರಿ ನೀರಿನ ದರ ಏರಿಕೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
