ಲಡಾಕ್‌ನೊಳಗೆ ನುಸುಳಿದ್ದ ಚೀನೀ ಸೈನಿಕರನ್ನು ಹಿಮ್ಮೆಟ್ಟಿಸಿದ ಭಾರತೀಯ ಕುರಿಗಾಹಿಗಳು: ವಿಡಿಯೋ ವೈರಲ್

Date:

Advertisements

ದೇಶದ ಸಂಸತ್‌ನ ಬಜೆಟ್ ಅಧಿವೇಶನ ಆರಂಭದ ದಿನವೇ ಭಾರತ-ಚೀನಾ ಗಡಿಯಲ್ಲಿ ನಡೆದ ಘಟನೆಯೊಂದರ ವಿಡಿಯೋ ವೈರಲಾಗಿದೆ.

ಲಡಾಕ್‌ನೊಳಗೆ ನುಸುಳಿದ್ದ ಚೀನಾದ ಸೈನಿಕರನ್ನು ಹಿಮ್ಮೆಟ್ಟಿಸಿರುವ ಭಾರತೀಯ ಕುರಿಗಾಹಿಗಳು, ಬಂದ ದಾರಿಗೆ ಸುಂಕವಿಲ್ಲದಂತೆ ಹಿಂದೆ ಹೋಗಿರುವ ಬಗ್ಗೆ ವರದಿಯಾಗಿದೆ. ಈ ಬೆಳವಣಿಗೆಯು ಜನವರಿ 2ರಂದು ನಡೆದಿದ್ದು, ಭಾರತದ ನಿಯಂತ್ರಣದಲ್ಲಿರುವ ಪ್ರದೇಶದಲ್ಲಿ ವಾಸಿಸುತ್ತಿರುವ ಸ್ಥಳೀಯ ಕುರುಬರು ಮತ್ತು ಚೀನೀ ಸೈನಿಕರ ನಡುವೆ ನಡೆದ ವಾಗ್ವಾದದ ವೀಡಿಯೊ ಬಜೆಟ್ ಅಧಿವೇಶನ ಆರಂಭದ ದಿನವೇ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಭಾರತ ಮತ್ತು ಚೀನಾ ನಡುವಿನ ಗಡಿ ವಿವಾದ ಮುಂದುವರಿದಿದೆ. ಲಡಾಖ್‌ನಲ್ಲಿ ಕುರುಬರ ಗುಂಪನ್ನು ಚೀನಾ ಸೈನಿಕರು ಕುರಿಗಳನ್ನು ಮೇಯಿಸುವುದನ್ನು ವಾಸ್ತವಿಕ ನಿಯಂತ್ರಣ ರೇಖೆ (ಎಲ್‌ಎಸಿ) ಬಳಿ ತಡೆದಿದ್ದಾರೆ. ಆದರೆ ಕುರುಬರು ಹಿಂದೆ ಹೋಗಲು ನಿರಾಕರಿಸಿದ್ದಲ್ಲದೇ, ಚೀನೀ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಸೈನಿಕರನ್ನು ಧೈರ್ಯದಿಂದ ಎದುರಿಸಿದ್ದಾರೆ. ಅಲ್ಲದೇ, ನಾವು ಭಾರತೀಯ ಭೂಪ್ರದೇಶದಲ್ಲಿ ನಮ್ಮ ಕುರಿಗಳನ್ನು ಮೇಯಿಸುತ್ತಿದ್ದೇವೆ. ಅದನ್ನು ಕೇಳಲು ನೀವು ಯಾರು ಎಂದು ಪ್ರಶ್ನಿಸಿದ್ದಾರೆ.

Advertisements

“ಇದು ಭಾರತದ ಭೂ ಪ್ರದೇಶ, ವಾಸ್ತವ ಗಡಿ ನಿಯಂತ್ರಣ ರೇಖೆ ಇನ್ನು ದೂರವಿದೆ, ನೀವು ಹಿಂದೆ ಸರಿಯಿರಿ” ಎಂದು ಖಡಕ್ ಎಚ್ಚರಿಕೆ ಕೊಟ್ಟ ನಂತರ ಅಲ್ಲಿಂದ ನಿರ್ಗಮಿಸುವ ದೃಶ್ಯವು ವಿಡಿಯೋದಲ್ಲಿ ದಾಖಲಾಗಿದೆ.

ಕುರಿ ಹಾಗೂ ಸಾಕು ಪ್ರಾಣಿಗಳನ್ನು ಮೇಯಿಸುವ ಹಕ್ಕಿಗೆ ಸಂಬಂಧಿಸಿದಂತೆ ಚೀನಾ ಸೈನಿಕರ ಜೊತೆ ವಾಗ್ವಾದದ ದೃಶ್ಯವನ್ನು ಲಡಾಖ್ ಗಡಿ ಭಾಗದ ಕುರಿಗಾಹಿಗಳು ತಮ್ಮ ಮೊಬೈಲ್‌ನಲ್ಲಿ ವಿಡಿಯೋ ರೆಕಾರ್ಡಿಂಗ್ ಮಾಡಿಕೊಂಡಿದ್ದಾರೆ. ಅದೇ ವಿಡಿಯೋ ಈಗ, ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ. ಜೊತೆಗೆ ಕೇಂದ್ರ ಸರ್ಕಾರದ ನಡೆಯ ಬಗ್ಗೆ ಪ್ರಶ್ನೆಗಳನ್ನು ಎಬ್ಬಿಸಿದೆ.

2020ರಲ್ಲಿ ಗಾಲ್ವಾನ್ ಕಣಿವೆಯಲ್ಲಿ ಭಾರತೀಯ ಸೈನಿಕರು-ಚೀನೀ ಸೈನಿಕರ ನಡುವೆ ನಡೆದಿದ್ದ ಘರ್ಷಣೆಯು ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಈ ಬಗ್ಗೆ ಮಾತನಾಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ, ನಮ್ಮ ದೇಶದ ಒಂದಿಂಚನ್ನೂ ಕೂಡ ನಾವು ಬಿಟ್ಟುಕೊಡಲ್ಲ ಎಂದು ಹೇಳಿಕೆ ನೀಡಿದ್ದರು. ಈ ಎಲ್ಲ ಬೆಳವಣಿಗೆಯ ನಡುವೆ ಈಗಿನ ಘಟನೆ ಗಡಿಯಲ್ಲಿ ಸೈನಿಕರು ಹಾಗೂ ಸ್ಥಳೀಯತು ಎದುರಿಸುತ್ತಿರುವ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಿದೆ.

ಕೇಂದ್ರಾಡಳಿತ ಪ್ರದೇಶ ಲಡಾಖ್‌ನ ಸ್ಥಳೀಯ ಅಲೆಮಾರಿ ಜನಾಂಗಕ್ಕೆ ಸೇರಿರುವ ಕುರಿಗಾಹಿಗಳು, ಗಾಲ್ವಾನ್ ಕಣಿವೆಯಲ್ಲಿ ಸಂಘರ್ಷದ ಬಳಿಕ ಪೂರ್ವ ಲಡಾಖ್ ಪ್ರಾಂತ್ಯದಲ್ಲಿ ತಮ್ಮ ಸಾಕು ಪ್ರಾಣಿಗಳನ್ನು ಮೇಯಿಸಲು ಸಾಧ್ಯ ಆಗುತ್ತಿರಲಿಲ್ಲ. ಇದೀಗ ಇದೇ ಮೊದಲ ಬಾರಿಗೆ ತಮ್ಮ ಸಾಕು ಪ್ರಾಣಿಗಳನ್ನು ಪೂರ್ವ ಲಡಾಖ್‌ಗೆ ಕರೆದೊಯ್ದ ವೇಳೆ ಕುರಿಗಾಹಿಗಳನ್ನು ಚೀನಾ ಸೈನಿಕರು ತಡೆದಿರುವುದಾಗಿ ವರದಿಯಾಗಿದೆ.

ಚೀನಾ ಸೈನಿಕರ ಜೊತೆಗೆ ಕುರಿಗಾಹಿಗಳು ಮಾತ್ರ ವಾಕ್ಸಮರ ನಡೆಸಿದ್ದು, ಯಾವುದೇ ಹಿಂಸಾಚಾರ ನಡೆಸಿಲ್ಲ. ಆದರೆ, ಈ ವಾಕ್ಸಮರದಲ್ಲಿ ಭಾರತದ ಕುರಿಗಾಹಿಗಳು ಮೇಲುಗೈ ಸಾಧಿಸಿರುವುದಾಗಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದೆ.

ಕುರಿಗಾಹಿಗಳು ಚೀನಾ ಸೈನಿಕರ ವಿರುದ್ಧ ದಿಟ್ಟತನದಿಂದ ಎದುರಿಸಿರುವುದನ್ನು ಭಾರತೀಯ ಸೇನೆಯು ಪ್ರಶಂಸಿಸಿದೆ. “ನಮ್ಮ ಈ ಧೈರ್ಯಕ್ಕೆ ಭಾರತೀಯ ಸೇನೆ ನೀಡಿರುವ ಧೈರ್ಯವೇ ನಮಗೆ ಸ್ಪೂರ್ತಿ” ಎಂದು ಚೀನೀ ಸೈನಿಕರನ್ನು ಎದುರಿಸಿದ್ದ ತಂಡದಲ್ಲಿದ್ದ ಕುರಿಗಾಹಿಯೋರ್ವರು ಹೇಳಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X