ಕೆರೆ ತುಂಬಿಸುವ ಯೋಜನೆ | ಅಂತರ್ಜಲದ ಮೇಲಾದ ಪರಿಣಾಮ ಬಗ್ಗೆ ವಿಸ್ತೃತ ವರದಿ ನೀಡಿ: ಸಚಿವ ಭೋಸರಾಜು ಸೂಚನೆ

Date:

Advertisements

ರಾಜ್ಯದಲ್ಲಿ ಕೆರೆ ತುಂಬಿಸುವ ಯೋಜನೆಗಳಿಂದ ಅಂತರ್ಜಲದ ಮೇಲೆ ಆಗಿರುವ ಪರಿಣಾಮಗಳ ಬಗ್ಗೆ ವಿಸ್ತೃತ ವರದಿ ನೀಡುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿಕಾಸಸೌಧದಲ್ಲಿ ಸೋಮವಾರ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ದಿ ಪ್ರಾಧಿಕಾರ, ಅಂತರ್ಜಲ ಇಲಾಖೆ ಹಾಗೂ ಅಟಲ್ ಭೂಜಲ್ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.

“ರಾಜ್ಯದಲ್ಲಿ ಕಳೆದ 10 ವರ್ಷಗಳಿಗೆ ಹೋಲಿಸಿದರೆ ಕಳೆದ ಕೆಲವು ವರ್ಷಗಳಲ್ಲಿ117 ತಾಲ್ಲೂಕುಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚಾಗಿದೆ. 119 ತಾಲ್ಲೂಕುಗಳಲ್ಲಿ ಅಂತರ್ಜಲ ಮಟ್ಟ ಕಡಿಮೆಯಾಗಿರುವುದು ಅಂಕಿ ಸಂಖ್ಯೆಗಳಿಂದ ತಿಳಿದುಬಂದಿದೆ. ಕೆರೆ ತುಂಬುವ ಯೋಜನೆಗಳನ್ನ ಕೈಗೊಳ್ಳಲಾಗಿರುವಂತಹ ಜಿಲ್ಲೆಗಳಾದ ಕೋಲಾರ, ರಾಮನಗರ, ಚಿಕ್ಕಬಳ್ಳಾಪುರದಂತಹ ಜಿಲ್ಲೆಗಳಲ್ಲಿ ಅಂತರ್ಜಲ ಮಟ್ಟ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಕೆರೆ ತುಂಬುವ ಯೋಜನೆಗಳಿಂದ ಆಗಿರುವಂತಹ ಪರಿಣಾಮದ ಬಗ್ಗೆ ವಿಸ್ತೃತ ಅಧ್ಯಯನ ಅಗತ್ಯವಿದೆ. ಬರಗಾಲದ ತೀವ್ರತೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಧೀರ್ಘಕಾಲೀನ ಯೋಜನೆಗಳನ್ನು ಕೈಗೊಳ್ಳಲು ಇದು ನೆರವಾಗಲಿದೆ. ಈ ಬಗ್ಗೆ ಅಧ್ಯಯನ ಕೈಗೊಂಡು ವರದಿ ಸಲ್ಲಿಸುವಂತೆ” ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

Advertisements

ಕೆರೆ ಸಂಘಗಳ ನಿಶ್ಚಿತ ಠೇವಣಿ ಮಾಹಿತಿ ನೀಡದ ಅಧಿಕಾರಿಗಳ ತರಾಟೆ

“ಜಲ ಸಂವರ್ಧನೆ ಯೋಜನೆಯ ಅಡಿಯಲ್ಲಿ ರಚಿಸಲಾಗಿರುವಂತಹ ಕೆರೆ ಸಂಘಗಳ ಮೂಲಕ ಬ್ಯಾಂಕುಗಳಲ್ಲಿ ನಿಶ್ಚಿತ ಠೇವಣಿಗಳನ್ನು ಇಡಲಾಗಿದೆ. ಕಳೆದ ಹಲವಾರು ವರ್ಷಗಳಲ್ಲಿ ಕೆರೆ ಸಂಘಗಳ ಮೂಲಕ ಇರಿಸಲಾದ ಠೇವಣಿಗಳ ಸರಿಯಾದ ನಿರ್ವಹಣೆಯಾಗದೇ ಇರುವುದು ಸಚಿವರ ಗಮನಕ್ಕೆ ಬಂದಿತು. ಈ ಬಗ್ಗೆ ಅಧಿಕಾರಿಗಳಿಂದ ಸರಿಯಾದ ಮಾಹಿತಿ ದೊರೆಯದೇ ಇರುವ ಬಗ್ಗೆ ಸಚಿವರು ಕೋಪಗೊಂಡರು. ನಿಶ್ಚಿತ ಠೇವಣಿಯ ಸರಿಯಾದ ನಿರ್ವಹಣೆ ಮಾಡುವುದು ಅಯಾ ಅಧಿಕಾರಿಗಳ ಕರ್ತವ್ಯವಾಗಿದೆ. ಇದರಲ್ಲಿ ವಿಫಲರಾಗುವವರ ಮೇಲೆ ಕಠಿಣ ಕ್ರಮ ಕೈಗೊಳ್ಳುವುದಾಗಿ” ಸಚಿವರು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಮ ನೆಲೆ ನಿಂತರೂ ನಿಲ್ಲದ ನಾಟಕ

ಕೆರೆ ಸಂಜೀವಿನಿ ಯೋಜನೆಯ ಬಗ್ಗೆ ಪ್ರಚಾರ ನೀಡಿ

“ಕೆರೆ ಸಂಜೀವಿನಿ ಯೋಜನೆಯ ಅಡಿಯಲ್ಲಿ ಕೆರೆಯಿಂದ ತೆಗೆಯಲಾಗುವ ಹೂಳಿನ ಬಗ್ಗೆ ಮೊದಲೇ ರೈತರಿಗೆ ಮಾಹಿತಿ ನೀಡುವ ಕಾರ್ಯ ಮಾಡಬೇಕು. ಬೀಜ ಬಿತ್ತುವಂತಹ ಸಮಯದಲ್ಲಿ ಹೂಳೆತ್ತುವ ಕಾಮಗಾರಿ ಕೈಗೊಂಡಲ್ಲಿ ಹೆಚ್ಚಿನ ರೈತರು ಹೂಳನ್ನು ತಗೆದುಕೊಂಡು ಹೋಗುತ್ತಾರೆ. ಆದರೆ, ಕಾಲೋಚಿತವಲ್ಲದ ಅನುಷ್ಠಾನಕ್ಕೆ ಸರಿಯಾದ ಪ್ರತಿಕ್ರಿಯೆ ದೊರಕುವುದಿಲ್ಲ. ಈ ಹಿನ್ನೆಲೆಯಲ್ಲಿ ಕೆರೆ ಸಂಜೀವಿನಿ ಯೋಜನೆಯ ಪ್ರಾರಂಭಕ್ಕೂ ಮುನ್ನ ರೈತರಿಗೆ ಮಾಹಿತಿ ನೀಡಬೇಕು. ಹಾಗೂ ಕೆರೆಯಲ್ಲಿ ಹೂಳನ್ನು ತಗೆಯುವ ಮೂಲಕ ಆಯಾ ಕೆರೆಗಳ ನೀರು ತುಂಬುವ ಸಾಮರ್ಥ್ಯವೂ ಹೆಚ್ಚಾಗುವಂತೆ ನೋಡಿಕೋಳ್ಳಬೇಕು” ಎಂದು ಸೂಚಿಸಿದರು.

ಸಭೆಯಲ್ಲಿ ಸಣ್ಣ ನೀರಾವರಿ ಇಲಾಖೆ ಕಾರ್ಯದರ್ಶಿಗಳಾದ ಯತೀಶ್ ಚಂದ್ರ, ಕೆರೆ ಅಭಿವೃದ್ದಿ ಪ್ರಾಧಿಕಾರದ ನಿರ್ದೇಶಕರಾದ ಶಿವಸ್ವಾಮಿ, ಅಂತರ್ಜಲ ಇಲಾಖೆಯ ನಿರ್ದೇಶಕರಾದ ರಾಮಚಂದ್ರ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X