ಲಕ್ಷ್ಮಣ ಸವದಿ ಕಾಂಗ್ರೆಸ್‌ ಪರವಾಗಿದ್ದಾರೆ, ಅವರು ಪಕ್ಷ ಬಿಡುವುದಿಲ್ಲ: ಸಚಿವ ಸತೀಶ ಜಾರಕಿಹೊಳಿ

Date:

Advertisements

“ಜಗದೀಶ ಶೆಟ್ಟರ್ ಅವರದು ಬೇರೆ ಪ್ರಕರಣ, ಲಕ್ಷ್ಮಣ ಸವದಿ ಅವರದು ಬೇರೆ ಕೇಸ್‌. ಒಂದು ಕೇಸ್‌ ಅನ್ನು ಇನ್ನೊಂದಕ್ಕೆ ಹೋಲಿಸಲಾಗದು. ಶಾಸಕರಾದ ಲಕ್ಷ್ಮಣ ಸವದಿ ನಮ್ಮ ಪಕ್ಷದ ಪರವಾಗಿದ್ದಾರೆ. ಅವರು ಕಾಂಗ್ರೆಸ್‌ ಬಿಡುವುದಿಲ್ಲ” ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, “ಸವದಿ ಬಿಜೆಪಿ ಸೇರುತ್ತಾರೆ ಎಂಬುದು ಸುಳ್ಳು. ಎಲ್ಲ ಕೇಸ್‌ ಬೇರೆ ಬೇರೆ ಇರುತ್ತವೆ. ಜಗದೀಶ್‌ ಶೆಟ್ಟರ್‌ ಕೇಸ್‌ಗೆ ಹೋಲಿಕೆ ಬೇಡ” ಎಂದರು.

ಲಕ್ಷ್ಮಣ ಸವದಿ ಅವರಿಗೆ ಮಂತ್ರಿ ಸ್ಥಾನದ ಆಫರ್ ನೀಡಲಾಗಿದೆಯೇ ಎಂಬ ಪ್ರಶ್ನೆಗೆ, “ಒಳ್ಳೆಯವರಿಗೆ ಅವಕಾಶವಿದೆ. ಅವರಿಗೂ ಸಾಮರ್ಥ್ಯವಿದೆ. ಆ ಬಗ್ಗೆ ಇನ್ನೂ ಸಮಯವಿದೆ. ಉತ್ತಮ ಕೆಲಸ ಮಾಡಿದ್ದಾರೆ. ಸಚಿವ ಸ್ಥಾನ ಸಿಗುವ ಅವಕಾಶಗಳು ಮುಂದಿನ ದಿನಗಳಲ್ಲಿವೆ” ಎಂದರು.

Advertisements

ಲೋಕಸಭೆ ಚುನಾವಣೆ ವಿಚಾರವಾಗಿ ಮಾತನಾಡಿ, ಬೆಳಗಾವಿ ಲೋಕಸಭೆ ಕ್ಷೇತ್ರದ ಟಿಕೆಟ್‌ಗೆ ಇಬ್ಬರ ಹೆಸರು ಕೊಟ್ಟಿದ್ದೇವೆ. ಆದರೆ, ಒಬ್ಬರ ಹೆಸರನ್ನು ಪಕ್ಷದ ಹೈಕಮಾಂಡ್ ಅಂತಿಮಗೊಳಿಸಬೇಕಿದೆ. ಈ ವಿಚಾರವಾಗಿ ಮುಖ್ಯಮಂತ್ರಿ ಜತೆಗೆ, ಇನ್ನೊಂದು ಸುತ್ತಿನ ಚರ್ಚೆ ಆಗಬೇಕಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಗರ ರಥ, ರಕ್ತ ಮತ್ತು ಭಾರತ ರತ್ನ

“ಚಿಕ್ಕೋಡಿ ಕ್ಷೇತ್ರದಿಂದ ನಾನು ಸ್ಪರ್ಧಿಸುವುದಿಲ್ಲ. ಪ್ರತಿ ಬಾರಿ ಒದಿಸಿಕೊಳ್ಳಲು ನಾನೇನೂ ಫುಟ್‌ಬಾಲ್‌ ಅಲ್ಲ” ಎಂದಿರುವ ಪ್ರಕಾಶ ಹುಕ್ಕೇರಿ ಮಾತಿಗೆ ಪ್ರತಿಕ್ರಿಯಿಸಿ, “ಪ್ರಕಾಶ್ ಹುಕ್ಕೇರಿ ಸ್ಪರ್ಧಿಸುವುದಿಲ್ಲ ಎಂದಾಗ ಸ್ಪರ್ಧಿಸುತ್ತಾರೆ. ಸ್ಪರ್ಧಿಸುತ್ತೇನೆ ಎಂದಾಗ ಸ್ಪರ್ಧಿಸಲ್ಲ. ಅವರ ಕೋಡ್‌ ಲಾಂಗ್ವೇಜ್‌ ನಮಗೆ ಗೊತ್ತಿದೆ” ಎಂದರು.

ಧ್ವಜ ವಿಚಾರವಾಗಿ ಮಾತನಾಡಿ, “ರಾಜ್ಯ ಅಭಿವೃದ್ಧಿಯಾಗಬೇಕು, ಸಮಾನತೆ ಬರಬೇಕು. ಈ ಧ್ವಜಗಳ ಹಾವಳಿ ಬಂದ್ ಆಗಬೇಕು” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X