ಎಂಎಲ್‌ಸಿ ಸ್ಥಾನಕ್ಕೆ ಲಕ್ಷ್ಮಣ ಸವದಿ ಇಂದು ರಾಜೀನಾಮೆ; ಕಾಂಗ್ರೆಸ್‌ನತ್ತ ಚಿತ್ತ

Date:

Advertisements
  • ಕಾಂಗ್ರೆಸ್ ಎಂಎಲ್‌ಸಿ ಜೊತೆ ಸವದಿ ಬೆಂಗಳೂರಿಗೆ
  • ಕಾಂಗ್ರೆಸ್ ನಾಯಕರ ಭೇಟಿಗೆ ಆಲೋಚಿಸುವೆ ಎಂದ ಸವದಿ

ಅಭ್ಯರ್ಥಿಗಳ ಪಟ್ಟಿ ಘೋಷಿಸುತ್ತಿದ್ದಂತೆಯೇ ಬಿಜೆಪಿಗೆ ಇನ್ನಿಲ್ಲದ ಸಂಕಷ್ಟ ಎದುರಾಗಿದೆ. ಸ್ವಪಕ್ಷದ ನಾಯಕರೇ ರಾಜ್ಯ ಸರ್ಕಾರದ ವಿರುದ್ಧ ಬಂಡಾಯ ಸಾರಿದ್ದಾರೆ. ಈ ನಡುವೆ ಲಕ್ಷ್ಮಣ ಸವದಿ ಅವರು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದು, ಕಾಂಗ್ರೆಸ್ ನಾಯಕರ ಜೊತೆಗೆ ಸಭೆ ನಡೆಸಿದರು.

ಬಿಜೆಪಿ 212 ಅಭ್ಯರ್ಥಿಗಳ ಎರಡು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳ ಹೆಸರು ಹೊರಬಿದ್ದಿದ್ದೇ ತಡ ಬಿಜೆಪಿಗೆ ಬಂಡಾಯದ ಬಿಸಿ ತಗುಲಿದೆ. ಅನೇಕ ನಾಯಕರು ಬಿಜೆಪಿ ತೊರೆದು ಬೇರೆ ಪಕ್ಷಗಳ ಕಡೆಗೆ ಮುಖ ಮಾಡಿದರೆ, ಇನ್ನು ಕೆಲವರು ರಾಜ್ಯ ಸರ್ಕಾರದ ಲೋಪದೋಷಗಳನ್ನು ಉಲ್ಲೇಖಿಸಿ ಹರಿಹಾಯುತ್ತಿದ್ದಾರೆ.

ಮಾಜಿ ಶಾಸಕ ಲಕ್ಷ್ಮಣ ಸವದಿ ಅವರಿಗೂ ಟಿಕೆಟ್ ಕೈತಪ್ಪಿದೆ. ಈ ಹಿನ್ನೆಲೆ ಪಕ್ಷ ಹಾಗೂ ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್​ ಸೇರುವ ಸಾಧ್ಯತೆ ಇದೆ. ಈ ಸಂಬಂಧ ಇಂದು (ಏ.14) ಕಾಂಗ್ರೆಸ್ ಎಂಎಲ್​ಸಿ ಚನ್ನರಾಜ ಹಟ್ಟಿಹೊಳಿ ಜತೆಗೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದ್ದಾರೆ.

Advertisements

ಬಿಜೆಪಿಗೆ ರಾಜೀನಾಮೆ ನೀಡಿರುವ ಲಕ್ಷ್ಮಣ ಸವದಿ ಅವರು ಇಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ನಿವಾಸಕ್ಕೆ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರೊಂದಿಗೆ ಭೇಟಿ ನೀಡಿ ಮಾತುಕತೆ ನಡೆಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿರುವ ಲಕ್ಷ್ಮಣ ಸವದಿ ಅವರು, “ಇಂದು ಸಂಜೆ 4ಕ್ಕೆ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಭೇಟಿಯಾಗಿ, ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವೆ. ತದನಂತರ ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡುವೆ. ಪಕ್ಷ ಬಿಡಲು ನಿನ್ನೆಯೇ ನಿರ್ಧರಿಸಿದ್ದೇನೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮತ ಪರಿವರ್ತನೆ ಮಾಡುವ ನಾಯಕರು ನಾಳೆ ಜೆಡಿಎಸ್ ಸೇರಲಿದ್ದಾರೆ : ಎಚ್‌ ಡಿ ಕುಮಾರಸ್ವಾಮಿ

“ಬಿಜೆಪಿಯ ಯಾವೊಬ್ಬ ನಾಯಕನನ್ನೂ ಭೇಟಿಯಾಗಲ್ಲ. ಸದ್ಯ ನಾನಿನ್ನು ಬಿಜೆಪಿ ಪಕ್ಷದಲ್ಲಿಯೇ ಇದ್ಧೇನೆ. ಹಾಗಾಗಿ ಬೇರೆ ಮಾತನಾಡುವುದಿಲ್ಲ. ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ ನಂತರ ಬೇರೆ ವಿಚಾರದ ಚರ್ಚೆ” ಎಂದಿದ್ದಾರೆ.

ಕಾಂಗ್ರೆಸ್ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ ಅವರ ಜೊತೆಗೆ ಬೆಂಗಳೂರಿಗೆ ಆಗಮಿಸಿರುವ ಲಕ್ಷ್ಮಣ ಸವದಿ ಅವರು ಡಿ ಕೆ ಶಿವಕುಮಾರ್, ಸಿದ್ದರಾಮಯ್ಯ ಮತ್ತು ರಣದೀಪ್ ಸಿಂಗ್ ಸುರ್ಜೇವಾಲ ಅವರ ಜೊತೆಗೆ ಸಭೆ ನಡೆಸಿದರು.

“ಕಾಂಗ್ರೆಸ್ ನಾಯಕರ ಜೊತೆ ಕೆಲವು ವಿಚಾರ ಹಂಚಿಕೊಳ್ಳುವೆ. ಅವರು ಅದಕ್ಕೆ ಒಪ್ಪಿಗೆ ನೀಡಿದರೆ ಮಾತ್ರ ತೀರ್ಮಾನ ಮಾಡುತ್ತೇನೆ” ಎಂದಿದ್ದರು. ಇದೀಗ ಕಾಂಗ್ರೆಸ್ ನಾಯಕರ ಜೊತೆಗೆ ಅವರು ಸಭೆ ನಡೆಸಿದ್ದು, ಕಾಂಗ್ರೆಸ್ ಸೇರ್ಪಡೆ ಆಗುವುದು ಬಹುತೇಕ ಖಚಿತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X