ಲಕ್ಷ್ಮಣ ಸವದಿ ಶೀಘ್ರದಲ್ಲೇ ಬಿಜೆಪಿಗೆ ಬರುತ್ತಾರೆ. ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ್ ಸವದಿ ಮೂಲತಃ ಬಿಜೆಪಿ ಹಿನ್ನೆಲೆಯುಳ್ಳವರು. ಅವರಿಗೆ ಕಾಂಗ್ರೆಸ್ ಸಂಸ್ಕೃತಿ ಇಷ್ಟವಾಗುವುದಿಲ್ಲ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ಶಿವಮೊಗ್ಗದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, “ಸವದಿ ಅವರು ಶೀಘ್ರದಲ್ಲಿ ಬಿಜೆಪಿಗೆ ಬರುತ್ತಾರೆ. ಕಾಂಗ್ರೆಸ್ ನಲ್ಲಿ ಅವರಿಗೆ ಯಾವುದೇ ಸ್ಥಾನಮಾನ ನೀಡಿಲ್ಲ. ನಾವು ಅವರನ್ನ ಡಿಸಿಎಂ ಮಾಡಿದ್ದೆವು. ಅಲ್ಲಿಗೆ ಕರೆದುಕೊಂಡು ಹೋಗಿ, ಅವರನ್ನು ಪುಕ್ಸಟ್ಟೆ ಕೂರಿಸಿದ್ದಾರೆ” ಎಂದರು.
“ಲಕ್ಷ್ಮಣ ಸವದಿ ಬಹಳಷ್ಟು ದಿನ ಅಲ್ಲಿ ಇರುವುದಿಲ್ಲ. ಅವರು ನನ್ನ ಆತ್ಮೀಯ ಸ್ನೇಹಿತರು. ಅವರ ಬಗ್ಗೆ ನನಗೆ ಗೊತ್ತು. ಹೀಗಾಗಿ ಈ ಮಾತು ಹೇಳುತ್ತಿದ್ದೇನೆ” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಂಸತ್ ದಾಳಿ ಆರೋಪಿಗಳಿಗೆ ಸುಳ್ಳು ಹೇಳಲು ಒತ್ತಡ; ವಿಪಕ್ಷಗಳನ್ನು ದೇಶದ್ರೋಹಿಗಳೆಂದು ಬಿಂಬಿಸುವ ವಿಫಲ ಯತ್ನ
ಬಿಜೆಪಿಯ ಹಿರಿಯ ನಾಯಕ ಅಡ್ವಾಣಿಗೆ ಭಾರತ ರತ್ನ ದೊರೆತಿರುವ ಬಗ್ಗೆ ಪ್ರತಿಕ್ರಿಯಿಸಿ, “ಅಡ್ವಾಣಿ ಅವರು ಇಡೀ ದೇಶದ ಮೂಲೆ ಮೂಲೆಗಳಲ್ಲಿ ರಥಯಾತ್ರೆ ಮೂಲಕ ದೇಶವನ್ನು ಜೋಡಿಸಿದ್ದರು. ದೇಶದಲ್ಲಿ ಸಾಂಸ್ಕೃತಿಕ ಸಂಚಲನವನ್ನು ನಿರ್ಮಾಣ ಮಾಡಿದಂತಹ ಅಡ್ವಾಣಿ ಅವರಿಗೆ ಭಾರತ ಸರ್ಕಾರ ಭಾರತ ರತ್ನ ನೀಡಿ ಪುರಸ್ಕರಿಸಿದೆ. ಅಡ್ವಾಣಿಯವರಿಗೆ ನೀಡಿರುವುದರಿಂದ ಭಾರತ ರತ್ನಕ್ಕೆ ಈಗ ಮೆರಗು ಬಂದಿದೆ” ಎಂದರು.