ದಿವಗಂತ ಆರ್ ಧ್ರುವನಾರಾಯಣ ಪತ್ನಿ ವೀಣಾ ನಿಧನ

Date:

ಇತ್ತೀಚೆಗಷ್ಟೇ ನಿಧನರಾಗಿದ್ದ ಕೆಪಿಸಿಸಿ ಮಾಜಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ ಅವರ ಪತ್ನಿ ವೀಣಾ ಧ್ರುವನಾರಾಯಣ ಅವರು ಇಂದು (ಏ.7) ನಿಧನರಾಗಿದ್ದಾರೆ.

ಬ್ರೈನ್‌ ಟ್ಯೂಬರ್‌ನಿಂದ ಬಳಲುತ್ತಿದ್ದ ಅವರು ಕಳೆದ 10 ವರ್ಷಗಳಿಂದ ಹಾಸಿಗೆ ಹಿಡಿದಿದ್ದರು. ಪತಿ ಧ್ರುವನಾರಾಯಣ ಅವರ ಅಕಾಲಿನ ಸಾವಿನಿಂದಾಗಿ ವೀಣಾ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿತ್ತು.

ತೀವ್ರ ಆನಾರೋಗ್ಯದ ಕಾರಣ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ವೀಣಾ ಅವರ ಅಂತ್ಯಕ್ರಿಯೆ ಶುಕ್ರವಾರ ಸಂಜೆ ಧ್ರುವನಾರಾಯಣ್ ಹುಟ್ಟೂರಾದ ಚಾಮರಾಜ ತಾಲೂಕಿನ ಹೆಗ್ಗವಾಡಿ ಗ್ರಾಮದಲ್ಲಿ ನಡೆಸಲು ನಿರ್ಧರಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ನಂಜನಗೂಡಿನಿಂದ ಹಿಂದೆ ಸರಿದಿದ್ದು ಆತ್ಮಸಾಕ್ಷಿಯಿಂದ: ಡಾ. ಎಚ್‌.ಸಿ ಮಹದೇವಪ್ಪ ಸ್ಪಷ್ಟನೆ

ಧ್ರುವನಾರಾಯಣ ಅವರ ಸಮಾದಿಯ ಪಕ್ಕದಲ್ಲಿಯೇ ವೀಣಾ ಅವರ ಅಂತ್ಯಕ್ರಿಯೆಯೂ ನಡೆಯಲಿದೆ. ಕೇವಲ ಒಂದು ತಿಂಗಳ ಅಂತರದಲ್ಲೇ ಪತಿ – ಪತ್ನಿ ಇಬ್ಬರೂ ಸಾವಿಗೀಡಾಗಿದ್ದು, ಕುಟುಂಬಕ್ಕೆ ದುಃಖ ತಂದೊಡ್ಡಿದೆ.

ಧ್ರುವನಾರಾಯಣ ಅವರ ಪುತ್ರ ದರ್ಶನ್ ಅವರಿಗೆ ನಂಜನಗೂಡು ವಿಧಾನಸಭಾ ಕ್ಷೇತ್ರದ ಟಿಕೆಟ್‌ ನೀಡಲಾಗಿದೆ. ತಂದೆಯ ಸಾವಿನ ನಂತರ ಚೇತರಿಸಿಕೊಂಡಿದ್ದ ದರ್ಶನ್ ಪ್ರಚಾರ ಕಾರ್ಯ ಆರಂಭಿಸಿದ್ದರು. ಆದರೆ, ಪ್ರಚಾರ ಆರಂಭಿಸಿದ ಮೂರೇ ದಿನಕ್ಕೆ ದರ್ಶನ್‌ ಅವರಿಗೆ ಮತ್ತೊಂದು ಅಘಾತವಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತನಿಖೆ ಆಗುವವರೆಗೂ ಸದನಕ್ಕೆ ಹೋಗಲ್ಲ; ತಮ್ಮದೇ ಸರ್ಕಾರದ ವಿರುದ್ಧ ಬಿ.ಆರ್ ಪಾಟೀಲ್ ಕಿಡಿ

ಕಳೆದ ಸದನದಲ್ಲಿ ನನ್ನ ಪ್ರಶ್ನೆಗೆ ಉತ್ತರಿಸಿದ್ದ ಕಂದಾಯ ಸಚಿವ ಕೃಷ್ಣ ಬೈರೇಗೌಡ...

ಕಲಬುರಗಿ | ಸಕಾಲ ಅರ್ಜಿ ವಿಲೇವಾರಿ : ಕಲಬುರಗಿಗೆ ರಾಜ್ಯದಲ್ಲೇ ನಂಬರ್‌ 1 ಸ್ಥಾನ

ಕಾಲಮಿತಿಯಲ್ಲಿ ಸರ್ಕಾರಿ ಸೇವೆ ನೀಡುವ ಸಕಾಲ ಯೋಜನೆಯಡಿ ನವೆಂಬರ್ ತಿಂಗಳ ಅರ್ಜಿ...

3ನೇ ಕಂತಿಗಾಗಿ ಮತ್ತೆ ಬಂದ ಸುರ್ಜೇವಾಲ: ಸಿ ಟಿ ರವಿ ಆರೋಪ

ಕಾಂಗ್ರೆಸ್ ಯಾವಾಗಲೂ ಚುನಾವಣೆ ನಡೆಸುವುದೇ ಕಡೇ 3 ದಿನದಲ್ಲಿ ...