ಯಾದಗಿರಿ ಬಿಜೆಪಿಯಲ್ಲಿ ಬಂಡಾಯ: ಶಾಸಕರ ವಿರುದ್ಧ ಸ್ಥಳೀಯ ನಾಯಕರ ಮುನಿಸು

Date:

  • ಯಾದಗಿರಿಯಲ್ಲಿ ಆಡಳಿತ ವಿರೋಧಿ ಅಲೆ 
  • ವೆಂಕಟರೆಡ್ಡಿ ಮುದ್ನಾಳ್ ವಿರುದ್ಧ ದೂರು

ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಗೆ ಟಿಕೆಟ್‌ ಹಂಚಿಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಒಂದೆಡೆ ಆಕಾಂಕ್ಷಿಗಳ ನಡುವೆ ಜಿದ್ದಾಜಿದ್ದಿ ನಡೆಯುತ್ತಿದ್ದರೆ, ಮತ್ತೊಂದೆಡೆ ಪಕ್ಷದ ಶಾಸಕರ ವಿರುದ್ಧವೇ ಕಾರ್ಯಕರ್ತರು ದೂರು ನೀಡುತ್ತಿದ್ದಾರೆ.

- Advertisement -

ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲು ತಿಣುಕಾಡುತ್ತಿದೆ. ಈ ನಡುವೆ, ಟಿಕೆಟ್ ಆಕಾಂಕ್ಷಿಗಳ ಪ್ರತಿಭಟನೆ, ಗೋ ಬ್ಯಾಕ್‌ ಅಭಿಯಾನ ಸೇರಿದಂತೆ ಕಾರ್ಯಕರ್ತರ ಪ್ರತಿಕ್ರಿಯೆಗೆ ಬಿಜೆಪಿ ಕಂಗಾಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ದೇಶದ ಬೃಹತ್ ಉದ್ಯಮ ಸಂಸ್ಥೆ ಟಾಟಾ ಸನ್ಸ್ ಬೋರ್ಡ್...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಈಗಾಗಲೇ ಕಾಂಗ್ರೆಸ್ ಮತ್ತು ಜೆಡಿಎಸ್‌ ಎರಡೂ ಪಕ್ಷಗಳು ತಮ್ಮ ಎರಡನೇ ಪಟ್ಟಿಯ ಬಿಡುಗಡೆ ಹಂತದಲ್ಲಿವೆ. ಆದರೆ, ಬಿಜೆಪಿ ಆಕಾಂಕ್ಷಿಗಳ ಮೊದಲ ಪಟ್ಟಿ ಈಗ ತಾನೆ ದೆಹಲಿ ಪಡಸಾಲೆಗೆ ಹೋಗಿದೆ.

ಯಾದಗಿರಿ ಶಾಸಕರ ವಿರುದ್ಧ ಕಾರ್ಯಕರ್ತರ ದೂರು

ರಾಜ್ಯ ರಾಜಕಾರಣದಲ್ಲಿ ಒಂದು ಕಡೆ ಪಕ್ಷಾಂತರ ಪರ್ವ ಶುರುವಾದರೆ, ಮತ್ತೊಂದು ಕಡೆ ಟಿಕೆಟ್ ಗೊಂದಲ ಶುರುವಾಗಿದೆ. ಯಾದಗಿರಿ ಬಿಜೆಪಿ ಶಾಸಕ ವೆಂಕಟರೆಡ್ಡಿ ಮುದ್ನಾಳ್‌ ಅವರ ವಿರುದ್ಧ ಬಿಜೆಪಿ ಜಿಲ್ಲಾ ನಾಯಕರೇ, ಬಿ ಎಸ್‌ ಯಡಿಯೂರಪ್ಪ ಮುಂದೆ ಧ್ವನಿ ಎತ್ತಿದ್ದಾರೆ.

ಯಾದಗಿರಿ ಬಿಜೆಪಿ ಜಿಲ್ಲಾಧ್ಯಕ್ಷ ಶರಣ ಭೂಪಾಲರೆಡ್ಡಿ ನೇತೃತ್ವದಲ್ಲಿ ಕೆಲವು ಕಾರ್ಯಕರ್ತ ಯಡಿಯೂರಪ್ಪ ಅವರಿಗೆ ವೆಂಕಟರೆಡ್ಡಿ ಮುದ್ನಾಳ್ ವಿರುದ್ಧ ದೂರು ನೀಡಿದ್ದಾರೆ. ಆ ಮೂಲಕ ಯಾದಗಿರಿಯ ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ, ಭಿನ್ನಮತ ತಾಂಡವವಾಡುತ್ತಿರುವುದು ಬಹಿರಂಗಗೊಂಡಿದೆ.

“ಯಾದಿಗಿರಿ ಕ್ಷೇತ್ರದಲ್ಲಿ ಆಡಳಿತ ವಿರೋಧಿ ಅಲೆ ಇದೆ. ಶಾಸಕ ಮುದ್ನಾಳ್‌ ಅವರು ತಾವೇ ದೊಡ್ಡವರು ಎನ್ನುವಂತೆ ವರ್ತಿಸುತ್ತಾರೆ. ಕಳೆದ ಚುನಾವಣೆಯಿಂದ ಈವರೆಗೆ ಶಾಸಕರು ಪಕ್ಷದ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ” ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಶರಣ ಭೂಪಾಲರೆಡ್ಡಿ ಆರೋಪಿಸಿದ್ದಾರೆ.

“ಶಾಸಕರ ಆಡಳಿತದಲ್ಲಿ ಅವರ ಕುಟುಂಬಸ್ಥರೇ ಶಾಮೀಲಾಗಿದ್ದಾರೆ. ಈ ಎಲ್ಲ ಕಾರಣದಿಂದ ಅವರಿಗೆ ಟಿಕೆಟ್ ನೀಡಬೇಡಿ” ಎಂದು ಮನವಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿಜೆಪಿಯ 40 ಹಾಲಿ ಶಾಸಕರು ಅಪರಾಧದ ಹಿನ್ನೆಲೆ ಉಳ್ಳವರು: ರಮೇಶ್ ಬಾಬು ಆರೋಪ

ಬಿಜೆಪಿಯ ಸ್ಥಳೀಯ ಮಟ್ಟದ ನಾಯಕರ ದೂರನ್ನು ಅಸ್ತ್ರವಾಗಿಸಿಕೊಂಡಿರುವ ಕಾಂಗ್ರೆಸ್ ಬಿಜೆಪಿ ವರ್ಸಸ್‌ ಬಿಜೆಪಿ ಎನ್ನುವ ಹ್ಯಾಶ್‌ಟ್ಯಾಗ್‌ನಡಿ ಟ್ವೀಟ್ ಮಾಡಿ, “ಬಿಜೆಪಿಯ ಬಹುತೇಕ ಶಾಸಕರಿಗೆ ಟಿಕೆಟ್ ನೀಡದಂತೆ ಬಿಜೆಪಿ ಕಾರ್ಯಕರ್ತರೇ ಬಂಡಾಯವೆದ್ದಿದ್ದಾರೆ. ಇದು ಸರ್ಕಾರದ ದುರಾಡಳಿತದ ಪರಿಣಾಮವೋ, ಶಾಸಕರ ವೈಫಲ್ಯದ ಕಾರಣವೋ?” ಎಂದು ವ್ಯಂಗ್ಯವಾಗಿ ಪ್ರಶ್ನಿಸಿದೆ.ಬಿಜೆಪಿ ಟಿಕೆಟ್ ಹಂಚಿಕೆ

“40% ಕಮಿಷನ್ ಭ್ರಷ್ಟಾಚಾರದ ಬಿಜೆಪಿ ಅತಿ ಹೀನಾಯ ಆಡಳಿತ ನೀಡಿದೆ ಎನ್ನಲು ಬಿಜೆಪಿ ಕಾರ್ಯಕರ್ತರ ಬಂಡಾಯವೇ ಸಾಕ್ಷಿ ಹೇಳುತ್ತಿದೆ” ಎಂದು ಲೇವಡಿ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆ ನಿರ್ಮಾಣಕ್ಕೆ ಸರ್ಕಾರ ಅಸ್ತು

"ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆಗಳ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ...

SIR ಪ್ರಕ್ರಿಯೆಯಲ್ಲಿ ಗಂಭೀರ ಲೋಪ; ಚುನಾವಣಾ ಆಯೋಗಕ್ಕೆ ಬಿ.ಕೆ. ಹರಿಪ್ರಸಾದ್ ಪತ್ರ

ASDDO ಅಂಕಿಅಂಶಗಳಲ್ಲಿ ಹೊಂದಾಣಿಕೆ ಇಲ್ಲ, 44 ಲಕ್ಷ ಮತದಾರರ ಮ್ಯಾಪಿಂಗ್ ಸಮಸ್ಯೆ,...

ಕರಾವಳಿ-ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿಗೆ ಸಚಿವ ಸಂಪುಟ ಅನುಮೋದನೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟದಲ್ಲಿ ಕರಾವಳಿ, ಮಲೆನಾಡು ಕರ್ನಾಟಕ ಪ್ರವಾಸೋದ್ಯಮ...

ತುಳು ಭಾಷೆಯನ್ನು ರಾಜ್ಯದ ಎರಡನೆಯ ಹೆಚ್ಚುವರಿ ಭಾಷೆಯನ್ನಾಗಿ ಮಾಡಲು ತೀರ್ಮಾನ: ಸಿಎಂ ಡಿಕೆಶಿ ಘೋಷಣೆ

ತುಳು ಭಾಷೆಯನ್ನು ರಾಜ್ಯದ ಎರಡನೆಯ ಹೆಚ್ಚುವರಿ ಭಾಷೆಯನ್ನಾಗಿ ಮಾಡಲು ನಾವು ತೀರ್ಮಾನ...