- ಶುಕ್ರವಾರ ಜೆಡಿಎಸ್ ಮಡಿಲಿಗೆ ಅನ್ಯ ಪಕ್ಷದ ಹಲವು ಮುಖಂಡರು
- ನಾಳೆಯೇ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ: ಎಚ್ಡಿಕೆ
ರಾಷ್ಟ್ರೀಯ ಪಕ್ಷಗಳಲ್ಲಿನ ಟಿಕೆಟ್ ಹಂಚಿಕೆಯ ಗೊಂದಲ ಪ್ರಾದೇಶಿಕ ಪಕ್ಷ ಜೆಡಿಎಸ್ ಪಾಲಿಗೆ ವರವಾಗುತ್ತಿದೆ.
ಇದಕ್ಕೆ ಪೂರಕವಾಗುವಂತೆ ಜೆಡಿಎಸ್ ಮುಖಂಡ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೀಡಿರುವ ಹೇಳಿಕೆ ರಾಜ್ಯ ರಾಜಕಾರಣದಲ್ಲಿನ ಗಮನಾರ್ಹ ಬದಲಾವಣೆ ಸೂಚನೆ ನೀಡಿದೆ.
ಕಲಬುರ್ಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಮತ ಪರಿವರ್ತನೆ ಮಾಡುವ ನಾಯಕರನೇಕರು ನಾಳೆ ನಮ್ಮ ಪಕ್ಷ ಸೇರಲಿದ್ದಾರೆ ಎಂದು ತಿಳಿಸಿದ್ದಾರೆ.
ತಮ್ಮ ಪಕ್ಷದ ಸಾಧನೆ ಬಗ್ಗೆ ಮಾತನಾಡುತ್ತಿದ್ದ ಅನ್ಯಪಕ್ಷದ ನಾಯಕರ ಹೇಳಿಕೆಗಳಿಗೆ ಮಾರ್ಮಿಕ ತಿರುಗೇಟು ನೀಡಿದ ಕುಮಾರಸ್ವಾಮಿ, ಉತ್ತರ ಕರ್ನಾಟಕ ಭಾಗದಲ್ಲಿ ಜಾತ್ಯತೀತ ಜನತಾದಳ ಪಕ್ಷ ಮುಳುಗಿ ಹೋಗಿದೆ ಅಂತ ಹೇಳುತ್ತಿದ್ದರು.
ಆದರೆ ಇದೀಗ ನಲವತ್ತು ಜನ ಗೆಲ್ಲುವ ವಿಶ್ವಾಸವಿದೆ. ಮತ ಲೆಕ್ಕಾಚಾರ ಬದಲಾಯಿಸುವ ಅನೇಕ ನಾಯಕರು ನಮ್ಮ ಪಕ್ಷ ಸೇರುತ್ತಿದ್ದಾರೆ. ನಾಳೆ ಬೆಂಗಳೂರು ಪಕ್ಷದ ಕಚೇರಿಯಲ್ಲಿ ಇವರನ್ನು ಬರಮಾಡಿಕೊಳ್ಳುತ್ತೇವೆ ಎಂದು ಅವರು ಹೇಳಿದರು.
ಈ ಸುದ್ದಿ ಓದಿದ್ದೀರಾ? : ಚುನಾವಣೆ 2023 | ಒಲ್ಲದ ಮನಸ್ಸಿನಲ್ಲೇ ವರುಣಾದೆಡೆಗೆ ಸೋಮಣ್ಣ; ನಾಮಪತ್ರ ಸಲ್ಲಿಕೆಗೆ ದಿನಾಂಕ ನಿಗದಿ
ಇದೇ ವೇಳೆ ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ವಿಚಾರವಾಗಿಯೂ ಮಾಹಿತಿ ನೀಡಿದ ಕುಮಾರಸ್ವಾಮಿ, ನಾಳೆಯೇ ಜೆಡಿಎಸ್ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ ಮಾಡುತ್ತೇವೆ. ಇದಾದ ಎರಡು ದಿನಗಳ ಬಳಿಕ ಹಾಸನ ಟಿಕೆಟ್ ಫೈನಲ್ ಆಗಲಿದೆ ಎಂದು ತಿಳಿಸಿದರು.