ಮೊದಲು ವಿಮಾನದಲ್ಲಿ ಸರಿಯಾಗಿ ಕೂರಲು ಕಲಿಯಿರಿ : ತೇಜಸ್ವಿ ಸೂರ್ಯರನ್ನು ವ್ಯಂಗ್ಯ ಮಾಡಿದ ಪ್ರಿಯಾಂಕ್ ಖರ್ಗೆ

Date:

Advertisements

‘ಕರ್ನಾಟಕ ಅಥವಾ ನನ್ನ ಇಲಾಖೆಗಳ ಬಗ್ಗೆ ಚಿಂತಿಸಬೇಡಿ, ಅದು ಸುರಕ್ಷಿತರ ಕೈಯಲ್ಲಿದೆ. ನೀವು ಮೊದಲು ವಿಮಾನದಲ್ಲಿ ಸರಿಯಾಗಿ ಕೂರಲು ಕಲಿಯಿರಿ’ ಎಂದು ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ಸಂಸದ ತೇಜಸ್ವಿ ಸೂರ್ಯರಿಗೆ ಟಾಂಗ್ ನೀಡಿದ್ದಾರೆ.

ರಾಹುಲ್ ಗಾಂಧಿ ವಿರುದ್ಧ ಅಪಪ್ರಚಾರ ಮಾಡಿ ಟ್ವೀಟ್ ಮಾಡಿದ್ದ ಆರೋಪದ ಮೇರೆಗೆ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ಪ್ರಿಯಾಂಕ್ ಖರ್ಗೆ ಇತ್ತೀಚೆಗೆ ದೂರು ನೀಡಿದ್ದರು. ಆ ಬಳಿಕ ಪೊಲೀಸರು ಎಫ್‌ಐಆರ್ ಕೂಡ ದಾಖಲಿಸಿದ್ದರು. ಹೀಗಾಗಿ, ಮಾಳವೀಯ ಪರವಾಗಿ, ವಕೀಲರೂ ಆಗಿರುವ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೈಕೋರ್ಟಿನಲ್ಲಿ ವಾದ ಮಂಡಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯವು ಎಫ್‌ಐಆರ್‍‌ಗೆ ಮಧ್ಯಂತರ ತಡೆಯನ್ನು ನೀಡಿತ್ತು. ಆ ಬಳಿಕ ಟ್ವೀಟ್ ಮಾಡಿದ್ದ ತೇಜಸ್ವಿ ಸೂರ್ಯ, ‘ಕನಿಷ್ಠ ಈಗಲಾದರೂ ತಮ್ಮ ಸೇಡಿನ ರಾಜಕಾರಣವನ್ನು ನಿಲ್ಲಿಸಿ. ನಿಮ್ಮ ಸಚಿವ ಸ್ಥಾನದ ಮೇಲೆ ಗಮನ ಹರಿಸಿ’ ಎಂದು ಪ್ರಿಯಾಂಕ್ ಖರ್ಗೆಯವರಿಗೆ ಟ್ಯಾಗ್ ಮಾಡಿದ್ದರು.

Advertisements

ಇದಕ್ಕೆ ಉತ್ತರ ನೀಡಿರುವ ಗ್ರಾಮೀಣಾಭಿವೃದ್ಧಿ ಹಾಗೂ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ‘ ಕರ್ನಾಟಕ ಅಥವಾ ನನ್ನ ಇಲಾಖೆಗಳ ಬಗ್ಗೆ ಚಿಂತಿಸಬೇಡಿ. ಅದು ಸುರಕ್ಷಿತರ ಕೈಯಲ್ಲಿದೆ. ನೀವು ತಪ್ಪು ಮಾಹಿತಿ ಹರಡಿದರೆ ನಿಮ್ಮ ಸಹೋದ್ಯೋಗಿಗಳು ಮತ್ತು ನೀವು ದೇಶದ ಕಾನೂನನ್ನು ಎದುರಿಸಬೇಕಾಗುತ್ತದೆ’ ಎಂಬುದು ನೆನಪಿರಲಿ ಎಂದು ಎಚ್ಚರಿಸಿದ್ದಾರೆ.

‘ರಾಜಕೀಯ ಸೇಡಿನ’ ವಿರುದ್ಧ ನೆರವು ಪಡೆಯಲು ನೀವು ಪ್ರಾರಂಭಿಸಿದ ಸಹಾಯವಾಣಿಗೆ ಎಷ್ಟು ಜನರು ಕರೆ ಮಾಡಿದ್ದಾರೆ ಎಂಬುದನ್ನು ದಯವಿಟ್ಟು ರಾಜ್ಯಕ್ಕೆ ತಿಳಿಸುವಿರಾ? ಎಂದು ಸಂಸದರನ್ನು ಕೇಳಿರುವ ಸಚಿವ ಪ್ರಿಯಾಂಕ್ ಖರ್ಗೆ, ‘ನೀವು ರಾಜ್ಯಕ್ಕಾಗಿ ಮಾಡಬಹುದಾದ ಪ್ರಮುಖ ಕೆಲಸಗಳು ಯಾವುದೆಂದರೆ, ನಮಗೆ ಕೇಂದ್ರ ಸರ್ಕಾರ ನೀಡಬೇಕಾದ ಹಣವನ್ನು ಬಿಡುಗಡೆ ಮಾಡಲು ಕೇಳೋದು, ರಾಜ್ಯದಲ್ಲಿ ವಿರೋಧ ಪಕ್ಷದ ನಾಯಕನನ್ನು ಆರಿಸುವುದು ಮತ್ತು ನೀವು ಮೊದಲು ವಿಮಾನದಲ್ಲಿ ಕುಳಿತುಕೊಳ್ಳಲು ಕಲಿಯೋದು’ ಎಂದು ಖಡಕ್ ಉತ್ತರ ನೀಡಿದ್ದಾರೆ.

ಸಂಸದ ತೇಜಸ್ವಿ ಸೂರ್ಯ ವಿಮಾನದಲ್ಲಿ ಪ್ರಯಾಣಿಸುವಾಗ ತುರ್ತು ನಿರ್ಗಮನದ ಬಾಗಿಲು ತೆಗೆಯಲು ಯತ್ನಿಸಿದ್ದ ಸುದ್ದಿ ಭಾರೀ ಇತ್ತೀಚೆಗೆ ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X