ಮೊದಲು ವಿಮಾನದಲ್ಲಿ ಸರಿಯಾಗಿ ಕೂರಲು ಕಲಿಯಿರಿ : ತೇಜಸ್ವಿ ಸೂರ್ಯರನ್ನು ವ್ಯಂಗ್ಯ ಮಾಡಿದ ಪ್ರಿಯಾಂಕ್ ಖರ್ಗೆ

Date:

Advertisements

‘ಕರ್ನಾಟಕ ಅಥವಾ ನನ್ನ ಇಲಾಖೆಗಳ ಬಗ್ಗೆ ಚಿಂತಿಸಬೇಡಿ, ಅದು ಸುರಕ್ಷಿತರ ಕೈಯಲ್ಲಿದೆ. ನೀವು ಮೊದಲು ವಿಮಾನದಲ್ಲಿ ಸರಿಯಾಗಿ ಕೂರಲು ಕಲಿಯಿರಿ’ ಎಂದು ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ಸಂಸದ ತೇಜಸ್ವಿ ಸೂರ್ಯರಿಗೆ ಟಾಂಗ್ ನೀಡಿದ್ದಾರೆ.

ರಾಹುಲ್ ಗಾಂಧಿ ವಿರುದ್ಧ ಅಪಪ್ರಚಾರ ಮಾಡಿ ಟ್ವೀಟ್ ಮಾಡಿದ್ದ ಆರೋಪದ ಮೇರೆಗೆ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ಪ್ರಿಯಾಂಕ್ ಖರ್ಗೆ ಇತ್ತೀಚೆಗೆ ದೂರು ನೀಡಿದ್ದರು. ಆ ಬಳಿಕ ಪೊಲೀಸರು ಎಫ್‌ಐಆರ್ ಕೂಡ ದಾಖಲಿಸಿದ್ದರು. ಹೀಗಾಗಿ, ಮಾಳವೀಯ ಪರವಾಗಿ, ವಕೀಲರೂ ಆಗಿರುವ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೈಕೋರ್ಟಿನಲ್ಲಿ ವಾದ ಮಂಡಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯವು ಎಫ್‌ಐಆರ್‍‌ಗೆ ಮಧ್ಯಂತರ ತಡೆಯನ್ನು ನೀಡಿತ್ತು. ಆ ಬಳಿಕ ಟ್ವೀಟ್ ಮಾಡಿದ್ದ ತೇಜಸ್ವಿ ಸೂರ್ಯ, ‘ಕನಿಷ್ಠ ಈಗಲಾದರೂ ತಮ್ಮ ಸೇಡಿನ ರಾಜಕಾರಣವನ್ನು ನಿಲ್ಲಿಸಿ. ನಿಮ್ಮ ಸಚಿವ ಸ್ಥಾನದ ಮೇಲೆ ಗಮನ ಹರಿಸಿ’ ಎಂದು ಪ್ರಿಯಾಂಕ್ ಖರ್ಗೆಯವರಿಗೆ ಟ್ಯಾಗ್ ಮಾಡಿದ್ದರು.

Advertisements

ಇದಕ್ಕೆ ಉತ್ತರ ನೀಡಿರುವ ಗ್ರಾಮೀಣಾಭಿವೃದ್ಧಿ ಹಾಗೂ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ‘ ಕರ್ನಾಟಕ ಅಥವಾ ನನ್ನ ಇಲಾಖೆಗಳ ಬಗ್ಗೆ ಚಿಂತಿಸಬೇಡಿ. ಅದು ಸುರಕ್ಷಿತರ ಕೈಯಲ್ಲಿದೆ. ನೀವು ತಪ್ಪು ಮಾಹಿತಿ ಹರಡಿದರೆ ನಿಮ್ಮ ಸಹೋದ್ಯೋಗಿಗಳು ಮತ್ತು ನೀವು ದೇಶದ ಕಾನೂನನ್ನು ಎದುರಿಸಬೇಕಾಗುತ್ತದೆ’ ಎಂಬುದು ನೆನಪಿರಲಿ ಎಂದು ಎಚ್ಚರಿಸಿದ್ದಾರೆ.

‘ರಾಜಕೀಯ ಸೇಡಿನ’ ವಿರುದ್ಧ ನೆರವು ಪಡೆಯಲು ನೀವು ಪ್ರಾರಂಭಿಸಿದ ಸಹಾಯವಾಣಿಗೆ ಎಷ್ಟು ಜನರು ಕರೆ ಮಾಡಿದ್ದಾರೆ ಎಂಬುದನ್ನು ದಯವಿಟ್ಟು ರಾಜ್ಯಕ್ಕೆ ತಿಳಿಸುವಿರಾ? ಎಂದು ಸಂಸದರನ್ನು ಕೇಳಿರುವ ಸಚಿವ ಪ್ರಿಯಾಂಕ್ ಖರ್ಗೆ, ‘ನೀವು ರಾಜ್ಯಕ್ಕಾಗಿ ಮಾಡಬಹುದಾದ ಪ್ರಮುಖ ಕೆಲಸಗಳು ಯಾವುದೆಂದರೆ, ನಮಗೆ ಕೇಂದ್ರ ಸರ್ಕಾರ ನೀಡಬೇಕಾದ ಹಣವನ್ನು ಬಿಡುಗಡೆ ಮಾಡಲು ಕೇಳೋದು, ರಾಜ್ಯದಲ್ಲಿ ವಿರೋಧ ಪಕ್ಷದ ನಾಯಕನನ್ನು ಆರಿಸುವುದು ಮತ್ತು ನೀವು ಮೊದಲು ವಿಮಾನದಲ್ಲಿ ಕುಳಿತುಕೊಳ್ಳಲು ಕಲಿಯೋದು’ ಎಂದು ಖಡಕ್ ಉತ್ತರ ನೀಡಿದ್ದಾರೆ.

ಸಂಸದ ತೇಜಸ್ವಿ ಸೂರ್ಯ ವಿಮಾನದಲ್ಲಿ ಪ್ರಯಾಣಿಸುವಾಗ ತುರ್ತು ನಿರ್ಗಮನದ ಬಾಗಿಲು ತೆಗೆಯಲು ಯತ್ನಿಸಿದ್ದ ಸುದ್ದಿ ಭಾರೀ ಇತ್ತೀಚೆಗೆ ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X