ಇಸ್ರೇಲ್ ವಿರುದ್ಧ ದಾಳಿಗೆ ‘ಹಮಾಸ್’ ಜೊತೆಗೆ ಕೈ ಜೋಡಿಸಿದ ಲೆಬನಾನ್‌ನ ‘ಹಿಜ್ಬುಲ್ಲಾ’

Date:

Advertisements

ಇಸ್ರೇಲ್ ವಿರುದ್ಧ ಶನಿವಾರದಿಂದ ದಾಳಿ ನಡೆಸುತ್ತಿರುವ ‘ಹಮಾಸ್’ ಜೊತೆಗೆ ಕೈ ಜೋಡಿಸಿರುವ ಲೆಬನಾನ್‌ನ ‘ಹಿಜ್ಬುಲ್ಲಾ’ ಸಂಘಟನೆಯು, ಇಸ್ರೇಲ್‌ನ ವಿರುದ್ಧ ಬಾಂಬ್ ದಾಳಿ ನಡೆಸಿರುವುದಾಗಿ ಹೇಳಿಕೊಂಡಿದೆ.

ಭಾನುವಾರ ಬೆಳಗ್ಗೆ ದಕ್ಷಿಣ ಲೆಬನಾನ್‌ನ ಬಳಿ ಇರುವ ಇಸ್ರೇಲಿನ ಮೂರು ಸೇನಾ ಹೊರಠಾಣೆಗಳ ಮೇಲೆ ಶೆಲ್‌ಗಳಿಂದ ಬಾಂಬ್ ದಾಳಿ ಮಾಡಿರುವುದಾಗಿ ಲೆಬನಾನ್‌ನ ‘ಹಿಜ್ಬುಲ್ಲಾ’ ಸಂಘಟನೆ ಹೇಳಿಕೊಂಡಿದೆ. ಅಲ್ಲದೇ, ದಾಳಿ ನಡೆಸಿರುವ ವಿಡಿಯೋ ಕೂಡ ಬಿಡುಗಡೆ ಮಾಡಿದೆ.

ಬಾಂಬ್ ಹಾಕಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇಸ್ರೇಲ್‌ನ ಸೇನಾ ಔಟ್‌ಪೋಸ್ಟ್‌ಗಳ ಮೇಲೆ ಬಾಂಬ್‌ಗಳನ್ನು ಹಾರಿಸುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು.

Advertisements

ಇಸ್ರೇಲಿನ ಮಿಲಿಟರಿ ಹೊರಠಾಣೆಗಳನ್ನು ಗುರಿಯಾಗಿಸಿಕೊಂಡು ಶೆಲ್‌ ಹಾಗೂ ಕ್ಷಿಪಣಿಗಳನ್ನು ಹಾರಿಸಿದ್ದೇವೆ. ರಾಡಾರ್ ಕೇಂದ್ರವನ್ನು ನಿಷ್ಕ್ರಿಯಗೊಳಿಸಿದ್ದೇವೆ ಎಂದು ಹಿಜ್ಬುಲ್ಲಾ ಹೇಳಿಕೊಂಡಿದೆ.

ಇಸ್ರೇಲ್‌ನ ರಾಡಾರ್ ಕೇಂದ್ರವನ್ನು ನೇರವಾಗಿ ಗುರಿಯಾಗಿರಿಸಿಕೊಂಡು ದಾಳಿ ನಡೆಸಲಾಗಿದೆ ಎಂಬ ವರದಿಗಳೂ ಇವೆ. ಸಿಗ್ನಲಿಂಗ್ ಟವರ್ ಗಳಿರುವ ಪ್ರದೇಶದಲ್ಲಿ ಸ್ಫೋಟಗಳು ನಡೆಯುತ್ತಿರುವುದು ವಿಡಿಯೋದಲ್ಲಿ ಕಂಡು ಬರುತ್ತಿದೆ.

ಇಸ್ರೇಲಿ ಸೇನೆಯು ಲೆಬನಾನ್‌ನ ಗಡಿಯುದ್ದಕ್ಕೂ ಬೀಡುಬಿಟ್ಟಿದ್ದು, ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳು ಸೈನ್ಯದ ಅಧಿಕಾರಿಗಳಿಗೆ ತಿಳಿಸಿದ್ದು, ಯುದ್ಧಕ್ಕೆ ಸಿದ್ಧರಾಗಿರಬೇಕು ಎಂದು ಆದೇಶಗಳನ್ನು ನೀಡಲಾಗಿದೆ ಎಂದು ವರದಿಯಾಗಿದೆ.

ಹಮಾಸ್ ಜೊತೆಗೆ ಹಿಜ್ಬುಲ್ಲಾ ಸಂಘಟನೆ ಕೈ ಜೋಡಿಸಿರುವುದು ಇಸ್ರೇಲ್ ಅನ್ನು ಕೆರಳಿಸಿದ್ದು, ಇದು ಮತ್ತಷ್ಟು ದೀರ್ಘ ಕಾಲದ ಯುದ್ಧದ ಮುನ್ಸೂಚನೆಯನ್ನು ನೀಡಿದೆ.

war

ಇಸ್ರೇಲ್ ಹಾಗೂ ಪ್ಯಾಲೆಸ್ತೀನಿನ ಹಮಾಸ್‌ ನಡುವೆ ನಡೆಯುತ್ತಿರುವ ಯುದ್ಧವು ಅತ್ಯಂತ ವಿನಾಶಕಾರಿ ತಿರುವು ಪಡೆಯುತ್ತಿದ್ದು, ಈವರೆಗೂ ಈ ಯುದ್ಧದಲ್ಲಿ ಕನಿಷ್ಠ 500ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.

ಮಾಹಿತಿಯ ಪ್ರಕಾರ, ಈ ಯುದ್ಧದಲ್ಲಿ ಇದುವರೆಗೆ ಇಸ್ರೇಲ್‌ವೊಂದರಲ್ಲಿ ಕನಿಷ್ಠ 300ಕ್ಕೂ ಅಧಿಕ ಇಸ್ರೇಲಿಯನ್ನರು ಸಾವನ್ನಪ್ಪಿದ್ದು, 1750 ಜನ ಗಾಯಗೊಂಡಿದ್ದಾರೆ. ಇದಕ್ಕೆ ಪ್ರತೀಕಾರವಾಗಿ ಗಾಝಾ ಮೇಲೆ ಇಸ್ರೇಲ್ ನಡೆಸಿದ ಪ್ರತಿದಾಳಿಯಲ್ಲಿ 250ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಇಸ್ರೇಲ್ ಹಿಂದೆಂದೂ ಕಂಡಿರದ ಐತಿಹಾಸಿಕ ದುರಂತವನ್ನು ಕಂಡಿದೆ. ಕೇವಲ 20 ನಿಮಿಷಗಳಲ್ಲಿ ಇಸ್ರೇಲ್ ಮೇಲೆ 5 ಸಾವಿರ ರಾಕೆಟ್​ಗಳನ್ನು ಹಾರಿಸಿರುವುದಾಗಿ ನಿನ್ನೆ ಹಮಾಸ್ ವಿಡಿಯೋ ಬಿಡುಗಡೆ ಮಾಡಿತ್ತು.

 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X