ವಿಧಾನ ಪರಿಷತ್ ಚುನಾವಣೆ | ಕಾಂಗ್ರೆಸ್ಸಿಗೆ ರಾಜ್ಯದಲ್ಲಿ ಉಳಿಗಾಲವಿಲ್ಲ: ಆರ್‌ ಅಶೋಕ್

Date:

Advertisements

ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಗೆ ಇಬ್ಬರು ಅಭ್ಯರ್ಥಿಗಳೂ ಇಂದು ನಾಮಪತ್ರ ಸಲ್ಲಿಸಿದ್ದಾರೆ. ನಮ್ಮೆಲ್ಲ ಅಭ್ಯರ್ಥಿಗಳು ಗೆಲುವು ಸಾಧಿಸುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರು ನಗರದಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಅವರು ಮಾತನಾಡಿ, “ನಮ್ಮ ಪಕ್ಷದ ಎಲ್ಲ ಹಿರಿಯ ಮುಖಂಡರು, ಜೆಡಿಎಸ್ ಪಕ್ಷದ ಸಮ್ಮುಖದಲ್ಲಿ ನಮ್ಮ ಇಬ್ಬರು ಅಭ್ಯರ್ಥಿಗಳು ಶುಭಗಳಿಗೆಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ವಿಧಾನ ಪರಿಷತ್‍ನಲ್ಲಿ ಅಪಾರ ಅನುಭವ ಇರುವ ನಮ್ಮ ಇಬ್ಬರು ಅಭ್ಯರ್ಥಿಗಳು ಮತ್ತೊಮ್ಮೆ ದೊಡ್ಡ ಅಂತರದಲ್ಲಿ ವಿಜಯಶಾಲಿಯಾಗಿ ಬರಲಿದ್ದಾರೆ” ಎಂದರು.

“ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಟ್ಟಾಗಿ ಲೋಕಸಭಾ ಚುನಾವಣೆಯನ್ನು ಎದುರಿಸಿದ್ದೇವೆ. ಈ ಚುನಾವಣೆಯನ್ನೂ ಒಗ್ಗಟ್ಟಾಗಿ ಎದುರಿಸಿ ಎಲ್ಲ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸುವ ವಿಶ್ವಾಸವಿದೆ” ಎಂದು ತಿಳಿಸಿದರು.

Advertisements

ಕಾಂಗ್ರೆಸ್ಸಿಗೆ ಉಳಿಗಾಲವಿಲ್ಲ: ಅಶೋಕ್

ವಿಪಕ್ಷ ನಾಯಕ ಆರ್.ಅಶೋಕ್ ಅವರು ಇದೇ ವೇಳೆ ಮಾತನಾಡಿ, “ಸಿದ್ದರಾಮಯ್ಯ ಸೇರಿ ಯಾರೇ ಪ್ರಚಾರ ಮಾಡಿದರೂ ಕಾಂಗ್ರೆಸ್ಸಿಗೆ ಇಲ್ಲಿ ಉಳಿಗಾಲ ಇಲ್ಲ” ಎಂದು ಅಭಿಪ್ರಾಯಪಟ್ಟರು.

“ವೈ.ಎ.ನಾರಾಯಣಸ್ವಾಮಿ ಮತ್ತು ಅ.ದೇವೇಗೌಡರ ಗೆಲುವು ನಿಶ್ಚಿತ. ವೈ.ಎ.ನಾರಾಯಣಸ್ವಾಮಿ ಅವರು ಮಾಡಿರುವ ಕೆಲಸ, ಅವರ ಸಂಪರ್ಕ, ನಿರಂತರ ಸೇವೆ ಗಮನಿಸಿ ಅವರ ಆಶೀರ್ವಾದ ಖಚಿತ; ಬೆಂಗಳೂರಿನಲ್ಲಿ ಅ.ದೇವೇಗೌಡರು ಮತದಾರರ ಉತ್ತಮ ಒಲವನ್ನು ಹೊಂದಿದ್ದಾರೆ” ಎಂದು ತಿಳಿಸಿದರು.

ವೈ ಎ ನಾರಾಯಣಸ್ವಾಮಿ ಮತ್ತು ಅ.ದೇವೇಗೌಡ ಅವರು ನಾಮಪತ್ರ ಸಲ್ಲಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಡಿಸಿಎಂ ಗೋವಿಂದ ಕಾರಜೋಳ, ಡಾ.ಅಶ್ವತ್ಥನಾರಾಯಣ, ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್, ಸಂಸದ ಪಿ.ಸಿ.ಮೋಹನ್, ಶಾಸಕ ಸುರೇಶ್ ಗೌಡ, ಮುಖಂಡ ಲಕ್ಷ್ಮೀನಾರಾಯಣ್, ಮಾಜಿ ಶಾಸಕ ಎಂ.ಕೃಷ್ಣರೆಡ್ಡಿ ಮತ್ತಿತರ ಮುಖಂಡರು ಹಾಜರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X