ಇಬ್ರಾಹಿಂ ಅವರು ತಾವೇ ಒರಿಜಿನಲ್ ಅಂತಾ ಬೋರ್ಡ್ ಹಾಕಿಕೊಳ್ಳಲಿ: ಕುಮಾರಸ್ವಾಮಿ

Date:

Advertisements
  • ನಮಗೆ ಏನು ಮಾಡಬೇಕೋ, ಸರಿ ಮಾಡ್ತೀವಿ
  • ಇಬ್ರಾಹಿಂ ಫ್ರೀ ಇದ್ದಾರೆ ಮಾತನಾಡಿಕೊಳ್ಳಲಿ

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಮತ್ತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನಡುವಿನ ವಾಕ್ಸಮರ ದಿನೇ ದಿನೇ ಹೆಚ್ಚುತ್ತಿದೆ.

ಸಿಎಂ ಇಬ್ರಾಹಿಂ ಅವರ ಹೇಳಿಕೆಗೆ ಬೆಂಗಳೂರಿನ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಸಿಟ್ಟಿನಿಂದಲೇ ಉತ್ತರಿಸಿದ್ದಾರೆ. “ಇಬ್ರಾಹಿಂ ಅವರೇ ಒರಿಜಿನಲ್ ಅಂತಾ ಬೋರ್ಡ್ ಹಾಕಿಕೊಳ್ಳಲಿ. ಅವರೇ ಒರಿಜಿನಲ್ ಅಂತಾ ಬರೆದುಕೊಳ್ಳಲಿ, ಅವರು ಏನು ಬೇಕಾದ್ರು ಮಾಡ್ಕೊಳ್ಳಿ, ಅವರಿಗೆ ಬಿಟ್ಟಿದ್ದು. ದಯವಿಟ್ಟು ಇಂತಾ ಸಿಲ್ಲಿ ವಿಚಾರಕ್ಕೆ ಬರಬೇಡಿ” ಎಂದು ಪತ್ರಕರ್ತರಿಗೆ ಗದರಿಸಿದ್ದಾರೆ.

“ನಮಗೆ ಏನು ಮಾಡಬೇಕೋ, ಸರಿ ಮಾಡ್ತೀವಿ, ನೀವು ತಲೆಕೆಡಿಸಿಕೊಂಡು ಬಂದಿದ್ದೀರಾ. ಅವರು ಫ್ರೀ ಇದ್ದಾರೆ ಮಾತಾಡ್ಕೊಳ್ಳಿ. ನಮ್ಮ ಪಕ್ಷದಲ್ಲಿ ಇರುವ ಹಿರಿಯರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಯಾರನ್ನು ಯಾರು ಉಚ್ಛಾಟನೆ ಮಾಡ್ತಾರೆ ನೋಡುವ್ರಂತೆ” ಎಂದರು.

Advertisements

ಇಬ್ರಾಹಿಂ ಹೇಳಿದ್ದೇನು?

“ನಮ್ಮದೇ ಒರಿಜಿನಲ್ ಜೆಡಿಎಸ್. ನಾನೇ ಅದರ ಅಧ್ಯಕ್ಷನಾಗಿದ್ದೇನೆ. ಇದು ನನ್ನ ಮನೆ. ಮುಂದೇನಾಗುತ್ತದೆ ಅದನ್ನು ಪರದೆಯಲ್ಲಿ ನೋಡಿ. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ನನ್ನನ್ನು ಯಾರಿಂದಲೂ‌ ತೆಗೆಯಲು ಸಾಧ್ಯವಿಲ್ಲ. ಹೊಸ ಸಮಿತಿ ರಚನೆ ಮಾಡಿ ಎಚ್‌ ಡಿ ಕುಮಾರಸ್ವಾಮಿ ಅವರನ್ನೇ ಉಚ್ಛಾಟನೆ ಮಾಡಲಾಗುವುದು” ಎಂದಿದ್ದರು.

ಈ ಸುದ್ದಿ ಓದಿದ್ದೀರಾ? ಯಾರನ್ನು ಪಕ್ಷದಿಂದ ಉಚ್ಛಾಟನೆ ಮಾಡುತ್ತಾರೆ ನೋಡೋಣ: ಎಚ್‌.ಡಿ ರೇವಣ್ಣ

ಇಬ್ರಾಹಿಂ ವಿರುದ್ಧ ಸಮೃದ್ಧಿ ಮಂಜುನಾಥ್ ವಾಗ್ದಾಳಿ

“ಜೆಡಿಎಸ್ ನಲ್ಲಿ 19 ಶಾಸಕರು ಗೆದ್ದರೂ ನೋವಿನಲ್ಲಿ ಇದ್ದಾರೆ. ಇಂತಹ ಸಂದರ್ಭದಲ್ಲಿ ಇಬ್ರಾಹಿಂ ಅವರ ತೆವಲುಗಳಿಗೆ‌ ಚಿಂತನ ಮಂಥನ ಕಾರ್ಯಕ್ರಮ‌ ಹಮ್ಮಿಕೊಳ್ಳುವುದು ಸೂಕ್ತವಲ್ಲ. ಇಬ್ರಾಹಿಂ ಅವರ ಗಮನಕ್ಕೆ ಬಾರೆದೆ ಪಕ್ಷದಲ್ಲಿ‌ ಏನು ನಡೆದಿಲ್ಲ. ಮತ್ತೊಂದು ದಿನ ನಾನು ಬಾಯಿ ಬಿಚ್ಚಬೇಕಾಗುತ್ತದೆ ಎಂದು ಶಾಸಕ ಸಮೃದ್ಧಿ ಮಂಜುನಾಥ್ ಕಿಡಿಕಾರಿದ್ದಾರೆ.

“ಹೈಕಮಾಂಡ್ ನನಗೆ ಬಾಯಿ ಬಿಚ್ಚಲು ಅನುಮತಿ ನೀಡಿಲ್ಲ. ಅವರ ತೆವಲುಗೋಸ್ಕರ ಮಾತಬಾಡಬಾರದು. ಶಾಸಕರ‌ ಪರಿಸ್ಥಿತಿ ಅರ್ಥ ಮಾಡಿಕೊಳ್ಳಬೇಕು. ನಿಖಿಲ್ ಕುಮಾರಸ್ವಾಮಿ‌ ಸೋತ ಕಾರಣ ನೈತಿಕ ಹೊಣೆ ಹೊತ್ತು ಯುವ ಘಟಕಕ್ಕೆ ರಾಜೀನಾಮೆ ಕೊಟ್ಟರು. ಇಬ್ರಾಹಿಂ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದು ಯಾರು? ಕುಮಾರಸ್ವಾಮಿ‌ ಅವರನ್ನು ‌ಪಕ್ಷದಿಂದ‌ ಉಚ್ಚಾಟನೆ ಮಾಡುವುದಾಗಿ ಹೇಳುವ ಇಬ್ರಾಹಿಂ, ಮೊದಲು ಅವರ ಆತ್ಮಸಾಕ್ಷಿಯನ್ನು ಮುಟ್ಟಿ ನೋಡಿಕೊಳ್ಳಲಿ” ಎಂದು ತಿರುಗೇಟು ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

Download Eedina App Android / iOS

X