ಪ್ರಧಾನಿಯಲ್ಲ, ಮೂರು ಲೋಕಕ್ಕೂ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಧ್ಯಕ್ಷರನ್ನಾಗಿ ಮಾಡಲಿ: ಸಿ ಟಿ ರವಿ ಲೇವಡಿ

Date:

Advertisements

ಕಾಂಗ್ರೆಸ್‌ನ ಇಂದಿನ ಪರಿಸ್ಥಿತಿ ನೋಡಿದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ 50 ಸ್ಥಾನ ಗೆಲ್ಲುವುದು ಕಷ್ಟ. ಇಂತಹ ಸ್ಥಿತಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಮಾಡ್ತೀವಿ ಅಂದ್ರೇನು? ಮಾಡಲ್ಲ ಅಂದ್ರೇನು? ಬೇಕಾದರೆ ಮೂರು ಲೋಕಕ್ಕೂ ಖರ್ಗೆ ಅವರನ್ನು ಅಧ್ಯಕ್ಷರನ್ನಾಗಿ ಮಾಡಲಿ ಎಂದು ಸಿ ಟಿ ರವಿ ಲೇವಡಿ ಮಾಡಿದರು.

ಚಿಕ್ಕಮಗಳೂರಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಪಾತಾಳ, ದೇವ, ಭೂಲೋಕ ಮೂರಕ್ಕೂ ಖರ್ಗೆ ಅವರನ್ನು ಮಾಡಲಿ. ಹೇಗೂ 50 ದಾಟಲ್ಲ. ಇದರ ಮೇಲೆ ಏನೂ ಹೇಳೋಣ ಇವರ ಬಗ್ಗೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಕ್ಷಿ ಮಲಿಕ್‌ ʼಶೂʼಗಳು ಭಾರತದ ಆತ್ಮಸಾಕ್ಷಿಯನ್ನು ಅಣಕಿಸುವ ಸಂಕೇತವಾಗಿ ಉಳಿಯಲಿದೆ

Advertisements

ದಲಿತರನ್ನು ಯಾಕೆ ಸಿಎಂ ಮಾಡಿಲ್ಲ?

“ಕಾಂಗ್ರೆಸ್​ಗೆ ಬಹುಮತ ಬಂದಾಗ ಯಾಕೆ ದಲಿತರನ್ನು ಸಿಎಂ ಮಾಡಲ್ಲ. ಈ ಬಾರಿ ಏಕೆ ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಅವರನ್ನು ಸಿಎಂ ಮಾಡಬೇಕಿತ್ತು. ಈ ಹಿಂದೆ ಪರಮೇಶ್ವರ್ ಎಲ್ಲಿ ಸಿಎಂ ಆಗ್ತಾರೋ ಅಂತ ಷಡ್ಯಂತ್ರ, ಹಣ, ಜಾತಿಯಿಂದ ಸೋಲಿಸಿದರು” ಎಂದು ಹೇಳಿದರು.

“ಚುನಾವಣೆ ಪೂರ್ವ ಡಿಕೆ ಶಿವಕುಮಾರ್ ಅವರೇ ಖರ್ಗೆ ಸಿಎಂ ಆಗಲಿ ಎಂದಿ‌ದ್ದರು. ಸುಮಾರು ಜನ ಅವರ ಮಾತನ್ನು ನಂಬಿ ಖರ್ಗೆ ಸಿಎಂ ಆಗ್ತಾರೆ ಅಂತ ಓಟು ಹಾಕಿದ್ರು. ಮೆಜಾರಿಟಿ ಬಂದ ಮೇಲೆ ಖರ್ಗೆ ಅವರೂ ಇಲ್ಲ, ಖರ್ಗೆ ಅವರ ಹೆಸರೂ ಇಲ್ಲ” ಎಂದು ಟೀಕಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X