ನನ್ನ ಚುನಾವಣೆಯ ಉದ್ದೇಶ ಯಶಸ್ವಿ, ಸಂಸದ ರಾಘವೇಂದ್ರ ಬಂಧನವಾಗಲಿ: ಕೆ ಎಸ್‌ ಈಶ್ವರಪ್ಪ

Date:

Advertisements

ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಅವರು ಚುನಾವಣೆ ವೇಳೆ ನನಗೆ ಸಭೆ ನಡೆಸಲು ಬಿಟ್ಟಿಲ್ಲ. ಸಾಮಾಜಿಕ ಜಾಲತಾಣದಲ್ಲಿ ತಿರುಚಿದ ವಿಡಿಯೋ ಮಾಡಿ, ನನ್ನ ಪರವಾಗಿ ಬಿಜೆಪಿಗೆ ಮತ ಹಾಕಿ ಎನ್ನುವ ರೀತಿಯಲ್ಲಿ ಸುದ್ದಿ ಹಬ್ಬಿಸಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮವಾಗಬೇಕು ಎಂದು ಪಕ್ಷೇತರ ಅಭ್ಯರ್ಥಿ ಕೆ ಎಸ್‌ ಈಶ್ವರಪ್ಪ ಹೇಳಿದರು.

ಶಿವಮೊಗ್ಗದಲ್ಲಿ ಗುರುವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ರಾಘವೇಂದ್ರ ವಿರುದ್ಧ ಕ್ರಮ ಕೈಗೊಳ್ಳದೆ ಇದ್ದರೆ ಹೋರಾಟ ಮಾಡುತ್ತೇನೆ. ನನ್ನ ಸೋಲಿಸಲು ಅವರಿಂದ ಷಡ್ಯಂತ್ರ ನಡೆದಿದೆ. ತಕ್ಷಣ ಅವರನ್ನು ಬಂಧಿಸಬೇಕು” ಎಂದು ಆಗ್ರಹಿಸಿದರು.

“ಈ ಬಗ್ಗೆ ಡಿಸಿ, ಎಸ್ಪಿಗೆ ನಾನು ದೂರು ನೀಡಿದ್ದೇನೆ. ಈ ಸುಳ್ಳು ಸುದ್ದಿಯಿಂದ ನನಗೆ ಮತಗಳ ಅನ್ಯಾಯವಾಗಿದೆ. ಸುಳ್ಳು ಸುದ್ದಿಯಿಂದ ನನಗೆ ಮತ ನೀಡಲು ಬಂದವರಿಗೆ ಗೊಂದಲವಾಗಿ, ಮತದಾನ ಕಡಿಮೆಯಾಗಿದೆ. ಇದು ರಾಘವೇಂದ್ರ ಅವರ ಕುತಂತ್ರ” ಎಂದು ಆರೋಪಿಸಿದರು.

Advertisements

“ರಾಘವೇಂದ್ರ ಅವರನ್ನು ಬಂಧಿಸಲು ಒಂದು ವಾರ ಗಡುವು ನೀಡುತ್ತೇನೆ. 15 ನೇ ತಾರೀಖಿನೊಳಗೆ ಕ್ರಮ ಕೈಗೊಳ್ಳದೆ ಹೋದರೆ ಹೋರಾಟ ಮಾಡುತ್ತೇವೆ. ಈ ಬಗ್ಗೆ ಸಮಗ್ರ ತನಿಖೆ ಆಗಬೇಕು, ರಾಘವೇಂದ್ರ ಮೇಲೆ ಎಫ್ಐಆರ್ ದಾಖಲಿಸಬೇಕು” ಎಂದಯ ಒತ್ತಾಯಿಸಿದರು.

“ನನ್ನ ಚುನಾವಣೆಯ ಉದ್ದೇಶ ಯಶಸ್ವಿಯಾಗಿದೆ. ಜಿಲ್ಲೆಯ ಮತದಾರರಿಗೆ ಧನ್ಯವಾದ ತಿಳಿಸುತ್ತೇನೆ. ಬೇರೆ ಪಕ್ಷ ಕಟ್ಟಲು ನಾನು ಯಡಿಯೂರಪ್ಪ ಅಲ್ಲ. ಪಕ್ಷ ಶುದ್ದೀಕರಣದ ಸಿದ್ದಾಂತ ಮುಂದುವರಿಸುತ್ತೇನೆ. ಸಿದ್ಧಾಂತ, ಹಿಂದುತ್ವದ ಮುಂದೆ ಯಾರು ದೊಡ್ಡವರಲ್ಲ. ಸಿದ್ದಾಂತಕ್ಕೆ ಪೆಟ್ಟು ಬಿದ್ದಾಗ ನಾನು ಚುನಾವಣೆಗೆ ಸ್ಪರ್ಧಿಸಿದ್ದೇನೆ. ಸಿಟಿ ರವಿ, ಪ್ರತಾಪ್ ಸಿಂಹ, ಅನಂತ್ ಕುಮಾರ್ ಅವರ ಧ್ವನಿಯಾಗಿ ನಾನು ನಿಂತಿದ್ದೇನೆ. ಒಂದೇ ತಿಂಗಳಲ್ಲಿ ನಾನು ಸಾಕಷ್ಟು ಪರಿವರ್ತನೆ ತಂದಿದ್ದೇನೆ” ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X