ಆಡಳಿತ ಪಕ್ಷ, ವಿಪಕ್ಷಗಳ ರಾಜಕೀಯ ಕಿತ್ತಾಟ ಹೊರಗಿರಲಿ, ಉತ್ತರ ಕರ್ನಾಟಕ ಬಗ್ಗೆ ಚರ್ಚೆ ನಡೆಯಲಿ: ಸಭಾಧ್ಯಕ್ಷ ಖಾದರ್

Date:

Advertisements

ರಾಜ್ಯದ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನ ಇದರಲ್ಲಿ ರಾಜ್ಯದ ಜನತೆಯ ಮುಖ್ಯವಾಗಿ ಉತ್ತರ ಕರ್ನಾಟಕದ ಭಾಗದ ಜನತೆಯ ಹಿತದೃಷ್ಟಿಯಿಂದ ಚರ್ಚೆ ಕಲಾಪ ನಡೆಸಬೇಕು ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದ‌ರ್ ಮನವಿ ಮಾಡಿದರು.

ಇಟಲಿಯ ವ್ಯಾಟಿಕನ್ ಸಿಟಿಯಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಶಾಂತಿ ಸಮ್ಮೇಳನಕ್ಕೆ ತೆರಳುವ ಮುನ್ನ ಮಂಗಳೂರಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, “ಆಡಳಿತ ಪಕ್ಷ ಹಾಗೂ ವಿಪಕ್ಷಗಳು ತಮ್ಮ ವಿವಿಧ ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ” ಎಂದು ತಿಳಿಸಿದರು.

“ವಿಧಾನ ಮಂಡಳ ಚಳಿಗಾಲದ ಅಧಿವೇಶನವನ್ನು ಮಂಡ್ಯದಲ್ಲಿ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕಾರಣಕ್ಕಾಗಿ ಒಂದು ದಿನ ಮೊಟಕುಗೊಳಿಸಲಾಗಿದೆ. ಡಿ.9ರಿಂದ 19ರ ವರೆಗೆ ಮಾತ್ರ ಅಧಿವೇಶನ ನಡೆಯಲಿದೆ” ಎಂದು ಹೇಳಿದರು.

Advertisements

“ಮೊದಲು 9ರಿಂದ 20ರ ವರೆಗೆ ಅಧಿವೇಶನ ನಡೆಸಲು ನಿರ್ಧರಿಸಲಾಗಿತ್ತು. ಸಾಹಿತ್ಯ ಸಮ್ಮೇಳನ ಡಿ. 20ರಿಂದ ಆರಂಭವಾಗಲಿದೆ. ಮುಖ್ಯಮಂತ್ರಿ ಮತ್ತು ಸಚಿವರು ಅದರಲ್ಲಿ ಪಾಲ್ಗೊಳ್ಳಲು ಅನುವಾಗುವಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೇವಲ ಕಾಗದದ ಹುಲಿಯಾಯಿತೇ ಪೂಜಾಸ್ಥಳಗಳ ಕಾಯಿದೆ?

‘ಮೋದಿ ನಂತರ ಅತಿ ಹೆಚ್ಚು ವಿದೇಶ ಪ್ರವಾಸ ಮಾಡಿದವರು ನೀವೇ ಇರಬೇಕು’ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಈ ವರ್ಷ ಹತ್ತು ದೇಶಗಳ ಪ್ರವಾಸ ಮಾಡಿದ್ದೇನೆ. ವಿದೇಶ ಪ್ರವಾಸದಲ್ಲಿ ಇನ್ನೊಬ್ಬರ ನಂತರದ ಸ್ಥಾನ ಅಲ್ಲ, ಅವರಿಗಿಂತ ಜಾಸ್ತಿ ವಿದೇಶ ಪ್ರವಾಸ ಮಾಡಬೇಕು ಎಂಬುದು ನನ್ನ ಆಸೆ” ಎಂದು ಹಾಸ್ಯವಾಗಿ ನುಡಿದರು.

“ಸ್ಪೀಕ‌ರ್ ಹುದ್ದೆಗೆ ಇರುವ ಎಲ್ಲ ಅವಕಾಶಗಳನ್ನು ಬಳಸಿಕೊಳ್ಳುತ್ತಿದ್ದೇನೆ. ನಾನು ಸ್ಪೀಕರ್ ಆಗಿರುವ ಕಾರಣಕ್ಕಾಗಿಯೂ ನನ್ನ ಕ್ಷೇತ್ರಕ್ಕೆ ಹೆಚ್ಚು ಅನುದಾನ ತರುತ್ತಿದ್ದೇನೆ. ಸ್ಪೀಕರ್ ಹುದ್ದೆಗೆ ಇಷ್ಟೆಲ್ಲ ಅವಕಾಶಗಳು ಇವೆ, ಈ ಹುದ್ದೆ ಅಲಂಕರಿಸಲು ಶಾಸಕರು ಮುಂದೆ ಬರಬೇಕು” ಎಂದು ನಗುತ್ತ ಹೇಳಿದರು.

ನೀವು ಸಚಿವರಾಗುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಯಾವ ಬಾಲ್ ಬಂದರೂ ಬ್ಯಾಟ್ ಮಾಡುತ್ತೇನೆ ಎಂದು ಹಿಂದೆಯೂ ಹೇಳಿದ್ದೆ, ಈಗಲೂ ಅದನ್ನೇ ಹೇಳುತ್ತೇನೆ. ಆದಾಗ್ಯೂ ರಾಜಕೀಯ ಬೆಳವಣಿಗೆಗಳ ಬಗ್ಗೆ ನನಗೆ ಗೊತ್ತಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

ಬಿಹಾರದಲ್ಲಿ ಒಂದು ಮತವನ್ನೂ ಕದಿಯಲು ನಾವು ಬಿಡಲ್ಲ: ರಾಹುಲ್ ಗಾಂಧಿ

ಮತಗಳನ್ನು ಕದಿಯಲು ಚುನಾವಣಾ ಆಯೋಗ ಮತ್ತು ಬಿಜೆಪಿ ಪಾಲುದಾರಿಕೆ ಹೊಂದಿದೆ ಎಂದು...

Download Eedina App Android / iOS

X