ಮಣಿಪುರ ಹಿಂಸಾಚಾರ | ರಾಷ್ಟ್ರಪತಿ ದ್ರೌಪದಿ ಮುರ್ಮು ತಕ್ಷಣ ಮಧ್ಯ ಪ್ರವೇಶಿಸಲಿ: ಐವನ್ ಡಿ ಸೋಜ

Date:

Advertisements
  • ‘ದೇಶದ ಪ್ರಧಾನಿ, ಮಣಿಪುರ ಸಿಎಂ ತಳೆದಿರುವ ನಿಲುವು ನಾಚಿಗೇಡು’
  • ರಾಜ್ಯ ಬಿಜೆಪಿ ಸ್ಥಿತಿ ನಾವಿಕನಿಲ್ಲದ ಹಡಗಿನಂತಾಗಿದೆ: ಐವನ್ ಡಿ ಸೋಜ

ಮಣಿಪುರದ ಘಟನೆಯ ಬಗ್ಗೆ ದೇಶದ ಪ್ರಧಾನಿ ಮತ್ತು ಅಲ್ಲಿನ ಮುಖ್ಯಮಂತ್ರಿ ತಳೆದಿರುವ ನಿಲುವು ನಾಚಿಗೇಡು. ಅಲ್ಲಿ ಹಿಂಸೆ ದೌರ್ಜನ್ಯ ಹತ್ತಿಕ್ಕುವ ಬದಲು ಪ್ರಧಾನ ಮಂತ್ರಿ ಗುಜರಾತ್, ಛತ್ತೀಸ್ ಗಡದ ಉದಾಹರಣೆ ನೀಡುತ್ತಿದ್ದಾರೆ ಎಂದು ಮಾಜಿ ಶಾಸಕ ಮತ್ತು ಎಐಸಿಸಿ ಮುಖಂಡ ಐವನ್ ಡಿ ಸೋಜ ವಾಗ್ದಾಳಿ ನಡೆಸಿದರು.

ಮಂಗಳೂರಿನಲ್ಲಿ ಮಾತನಾಡಿದ ಅವರು, “ಮಣಿಪುರದಲ್ಲಿ ನಡೆಯುತ್ತಿರುವ ದೌರ್ಜನ್ಯ ಹಿಂಸೆ ಸೇರಿದಂತೆ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗಟ್ಟಿದೆ. ಇಂತಹ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ತಕ್ಷಣ ಮಧ್ಯ ಪ್ರವೇಶ ಮಾಡಿ ಪರಿಸ್ಥಿತಿ ಯನ್ನು ನಿಯಂತ್ರಿಸಬೇಕು. ಅಲ್ಲಿನ ಆದಿವಾಸಿ ಬುಡಕಟ್ಟು ಸೇರಿದಂತೆ ಜನ ಸಾಮಾನ್ಯರ ರಕ್ಷಣೆಗೆ ಮುಂದಾಗಬೇಕು” ಎಂದು ಒತ್ತಾಯಿಸಿದರು.

‘ಚುನಾವಣಾ ಪ್ರಚಾರ’ಕ್ಕೆತೆರಳುವ ನಮ್ಮದೇಶದ ಪ್ರಧಾನಿ ಮಣಿಪುರದ ಸಮಸ್ಯೆ ಬಗೆಹರಿಸಲು ಎಷ್ಟು ಸಮಯ ನೀಡುತ್ತಿದ್ದಾರೆ? ಅಲ್ಲಿ ಮಾನ ವೀಯತೆಯ ಕುರುಹು ಇಲ್ಲದಂತೆ ಹಿಂಸಾಚಾರ ನಡೆಯುತ್ತಿದೆ. ದೇಶದ ಬಿಜೆಪಿಯ ಮಹಿಳಾ ಸಂಸದರು, ಸಚಿವರು ಮಹಿಳಾ ದೌರ್ಜನ್ಯದ ಬಗ್ಗೆ ಮೌನವಹಿಸಿರುವುದು ನಾಚಿಗೇಡು” ಎಂದು ಹರಿಹಾಯ್ದರು.

Advertisements

ನಾವಿಕನಿಲ್ಲದ ಹಡಗು ಬಿಜೆಪಿ

“ರಾಜ್ಯದಲ್ಲಿ ಬಿಜೆಪಿ ನಾವಿಕನಿಲ್ಲದ ಹಡಗಿನಂತಾಗಿದೆ. ದೇಶದ ಯಾವುದೇ ರಾಜ್ಯದಲ್ಲಿ ಕರ್ನಾಟಕ ಹೊರತಾಗಿ ವಿಪಕ್ಷಗಳು ನಾಯಕನಿಲ್ಲದೆ ಬಜೆಟ್ ಅಧಿವೇಶನ ನಡೆದ ಉದಾಹರಣೆಗಳಿಲ್ಲ” ಎಂದರು.

“ಗಮನ ಸೆಳೆಯಬೇಕಾದ ಸದನದಲ್ಲಿ ಸಭಾಪತಿ ಅವಕಾಶ ನೀಡಿದ ನಂತರ ಮುಖಂಡರ ಜೊತೆ ಮಾತುಕತೆ ನಡೆದ ಬಳಿಕವೂ ಜನತೆ ತಲೆ ತಗ್ಗಿಸುವ ರೀತಿಯಲ್ಲಿ ಶಾಸಕರು ಕಾಗದವನ್ನು ಹರಿದು ಸಭಾಧ್ಯಕ್ಷ ರ ಮುಖದ ಮೇಲೆ, ಪೀಠದ ಮೇಲೆ ಎಸೆದು ಅನುಚಿತವಾಗಿ ವರ್ತಿಸಿದ್ದಾರೆ. ಅದಕ್ಕಾಗಿ ಅಮಾನತು ಗೊಂಡಿದ್ದಾರೆ. ಸ್ಪೀಕರ್ ಸರಿಯಾದ ಕ್ರಮ ಕೈ ಗೊಂಡಿದ್ದಾರೆ” ಎಂದು ಯು ಟಿ ಖಾದರ್ ನಡೆ ಸಮರ್ಥಿಸಿಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X