ಮಂಡ್ಯದಂತೆಯೇ ರಾಮನಗರದಲ್ಲೂ ನನ್ನ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ: ನಿಖಿಲ್ ಕುಮಾರಸ್ವಾಮಿ

Date:

  • ‘ಯೋಗೇಶ್ವರ್‌ಗೆ ಚುನಾವಣಾ ಹಿನ್ನೆಲೆ ಕ್ಷೇತ್ರ ನೆನಪಾಗಿದೆ’
  • ‘ಜನರ ಆಶೀರ್ವಾದ ನಮ್ಮ ಮೇಲಿದೆ, ಗೆಲುವು ನಮ್ಮದೆ’

ಕಳೆದ ಲೋಕಸಭಾ ಚುನಾವಣೆಯಲ್ಲಿ ನನ್ನ ವಿರುದ್ಧ ಮಂಡ್ಯದಲ್ಲಿ ಷಡ್ಯಂತ್ರ ಮಾಡಿದಂತೆ ಈಗ ರಾಮನಗರದಲ್ಲೂ ಕುತಂತ್ರ ನಡೆಯುತ್ತಿದೆ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಚನ್ನಪಟ್ಟಣದ ಗ್ರಾಮವೊಂದರಲ್ಲಿ ಮಾತನಾಡಿರುವ ಅವರು, “ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದರು. ಇದೀಗ ರಾಮನಗರದಲ್ಲೂ ನನ್ನನ್ನು ಸೋಲಿಸಲು ಕುತಂತ್ರ ಮಾಡುತ್ತಿದ್ದಾರೆ. ಕಾಂಗ್ರೆಸ್‌ ಮತ್ತು ಬಿಜೆಪಿ ಸೇರಿ ನನ್ನ ವಿರುದ್ಧ ಸಾಕಷ್ಟು ಷಡ್ಯಂತ್ರ ನಡೆಸುತ್ತಿದ್ದಾರೆ. ಅವರೆಲ್ಲ ಸೇರಿ ಏನೇ ಷಡ್ಯಂತ್ರ ನಡೆಸಿದರೂ ಪ್ರಯೋಜನವಾಗುವುದಿಲ್ಲ. ಜನರ ಆಶೀರ್ವಾದ ನನ್ನ ಮೇಲಿದೆ” ಎಂದು ಕಿಡಿಕಾರಿದ್ದಾರೆ.

ವಿಧಾನ ಪರಿಷತ್ ಸದಸ್ಯ ಸಿ ಪಿ ಯೋಗೇಶ್ವರ್ ವಿರುದ್ಧ ವಾಗ್ದಾಳಿ ನಡೆಸಿರುವ ನಿಖಿಲ್ ಕುಮಾರಸ್ವಾಮಿ, “ಅವರ ಮುಖದಲ್ಲಿ ಸೋಲಿನ ಭೀತಿ ಸ್ಪಷ್ಟವಾಗಿ ಕಾಣಿಸುತ್ತಿದೆ. ಶಾಸಕರಾಗಿದ್ದ ವೇಳೆ ಕ್ಷೇತ್ರದ ಅಭಿವೃದ್ಧಿ ಮಾಡಿದ್ದರೆ ಇಂದು ಭಯಪಡುವ ಅಗತ್ಯವೇ ಇರುತ್ತಿರಲಿಲ್ಲ” ಎಂದಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಚನ್ನಪಟ್ಟಣದ ಗ್ರಾಮವೊಂದರಲ್ಲಿ ಮಾತನಾಡಿರುವ ಅವರು, “ಯೋಗೇಶ್ವರ್ ಅವರು 20 ವರ್ಷಗಳ ಕಾಲ ಶಾಸಕರಾಗಿ ಕೆಲಸ ಮಾಡಿದ್ದಾರೆ. ಆದರೂ ಚುನಾವಣಾ ಸೋಲಿನ ಭೀತಿ ಅವರನ್ನು ಕಾಡುತ್ತಿದೆ. ಇಷ್ಟು ದಿನಗಳ ಕಾಲ ನಾಪತ್ತೆಯಾಗಿದ್ದ ಅವರಿಗೆ ಚುನಾವಣೆ ಸಮೀಪಿಸಿರುವ ಹಿನ್ನೆಲೆ ದಿಢೀರನೆ ಕ್ಷೇತ್ರ ನೆನಪಾಗಿದೆ. ಸಂಕಲ್ಪ ಯಾತ್ರೆ ನಡೆಸುತ್ತಿದ್ದಾರೆ” ಎಂದು ಕಿಡಿಕಾರಿದ್ದಾರೆ.

“ಇಂದು ನಾನು ನಿಮ್ಮ ಮನೆಯ ಮಗ ಎಂದುಕೊಂಡು ಪ್ರಚಾರ ಪಡೆಯುತ್ತಿರುವವರು ಕೋವಿಡ್ ಸಂದರ್ಭದಲ್ಲಿ ನಾಪತ್ತೆಯಾಗಿದ್ದರು. ಕುಮಾರಸ್ವಾಮಿ ಅವರು ಮುಂದೆ ನಿಂತು ಜನರ ಸಂಕಷ್ಟಗಳಿಗೆ ಸ್ಪಂದಿಸಿದ್ದಾರೆ. ಯೋಗೇಶ್ವರ್ ಅವರು ಕುಮಾರಸ್ವಾಮಿ ಅವರ ಸರ್ಕಾರವನ್ನು ಬೀಳಿಸುವವರೆಗೆ ಕ್ಷೇತ್ರಕ್ಕೆ ಕಾಲಿಡುವುದಿಲ್ಲ ಎಂದು ಶಪಥ ಮಾಡಿದ್ದರು. ರೈತಪರ ಸರ್ಕಾರ ಬೀಳಿಸಿದ ಅವರಿಗೆ ನಾಚಿಕೆಯಾಗಬೇಕು” ಎಂದಿದ್ದಾರೆ.

“ಕುಮಾರಸ್ವಾಮಿ ಇಲ್ಲಿಂದಲೇ ಸ್ಪರ್ಧಿಸುತ್ತಾರೆ. ನಿಮ್ಮೆಲ್ಲರ ಆಶೀರ್ವಾದದಿಂದ ಮೂರನೇ ಬಾರಿಗೆ ಮುಖ್ಯಮಂತ್ರಿಯಾಗುತ್ತಾರೆ. ಯೋಗೇಶ್ವರ್ ಅವರು ಕಾಂಗ್ರೆಸ್‌ನಿಂದಾದರೂ ಸ್ಪರ್ಧಿಸಲಿ ಅಥವಾ ಬಿಜೆಪಿಯಿಂದಾದರೂ ಅಖಾಡಕ್ಕಿಳಿಯಲಿ ಗೆಲುವು ನಮ್ಮದೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಲೆಯೇರಿಕೆ, ನಿರುದ್ಯೋಗ, ರೈತರ ಬಗ್ಗೆ ಪ್ರಧಾನಿ ಮೋದಿ ತುಟಿಯೇ ಬಿಚ್ಚಲ್ಲ: ಸಿದ್ದರಾಮಯ್ಯ ವಾಗ್ದಾಳಿ

ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆಯೇ ಮಾಡುವುದಿಲ್ಲ. ಕೇವಲ...

ಬೀದರ್‌ | ಪತ್ನಿ ಕೊಲೆಗೈದ ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

ಹೆಂಡತಿಗೆ ಕೊಲೆ ಮಾಡಿದ ಆರೋಪ ಸಾಬೀತಾದ ಹಿನ್ನಲೆ ಆಕೆಯ ಪತಿಗೆ ಬೀದರ...

ಬೆಂಗಳೂರು | ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ತೇಜಸ್ವಿ ಸೂರ್ಯ: ಪ್ರಕರಣ ದಾಖಲು

ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ಆರೋಪದ ಮೇಲೆ ಬೆಂಗಳೂರು ದಕ್ಷಿಣ...

ಚಾಮರಾಜನಗರ | ಮತದಾನ ಬಹಿಷ್ಕಾರ; ಮನವೊಲಿಸಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ

ರಾಜ್ಯ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಕೆಲವೆಡೆ ಮತದಾನ ಬಹಿಷ್ಕಾರ...