ಸ್ಪರ್ಧಿಸಿದ್ದ ಐದೂ ಸ್ಥಾನಗಳಲ್ಲಿ ಗೆದ್ದ ಎಲ್‌ಜೆಪಿ; ಮೋದಿ ಸರ್ಕಾರದಲ್ಲಿ ಮಂತ್ರಿಯಾಗ್ತಾರಾ ಚಿರಾಗ್ ಪಾಸ್ವಾನ್?

Date:

Advertisements

ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟದ ಮಿತ್ರಪಕ್ಷ ಚಿರಾಗ್ ಪಾಸ್ವಾನ್ ಅವರ ಎಲ್‌ಜೆಪಿ (ರಾಮ್ ವಿಲಾಸ್) ಐದು ಸ್ಥಾನಗಳಲ್ಲಿ ಸ್ಪರ್ಧಿಸಿ, ಐದರಲ್ಲೂ ಗೆಲುವು ಸಾಧಿಸಿದೆ. ಎಲ್‌ಜೆಪಿಯ ಐವರು ಸಂಸದರಲ್ಲಿ ಒಬ್ಬರಾದ ಎಲ್‌ಜೆಪಿ ನಾಯಕ ಚಿರಾಗ್ ಪಾಸ್ವಾನ್ ಅವರು ಮೋದಿ ಸರ್ಕಾರದಲ್ಲಿ ಸಚಿವರಾಗಲಿದ್ದಾರೆ ಎಂದು ವರದಿಯಾಗಿದೆ.

ಮೂರನೇ ಅವಧಿಗೆ ಪ್ರಧಾನಿಯಾಗಿ ಮೋದಿ ಅವರು ಭಾನುವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಕ್ಕೂ ಮುನ್ನವೇ ಪಾಸ್ವಾನ್‌ ಅವರಿಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರಿಂದ ಕರೆ ಬಂದಿದ್ದು, ಪ್ರಧಾನಿ ನಿವಾಸದಲ್ಲಿ ನಡೆಯಲಿರುವ ಸಭೆಯಲ್ಲಿ ಪಾಸ್ವಾನ್ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.

ಈ ಹಿಂದೆ, ಮೊದಲ ಮತ್ತು ಎರಡನೇ ಅವಧಿಯ ಮೋದಿ ಸರ್ಕಾರಗಳಲ್ಲಿ ಚಿರಾಗ್ ಪಾಸ್ವಾನ್ ಅವರಿಗೆ ಸಚಿವ ಸ್ಥಾನಗಳನ್ನು ನೀಡಲಾಗಿತ್ತು. ಆದರೆ, ಅವರು ತಮ್ಮ ತಂದೆ, ಎಲ್‌ಜೆಪಿ ಮುಖ್ಯಸ್ಥ ರಾಮ್ ವಿಲಾಸ್ ಪಾಸ್ವಾನ್ ಅವರಿಗೆ ಮಂತ್ರಿಗಿರಿಯನ್ನು ಬಿಟ್ಟುಕೊಟ್ಟಿದ್ದರು. ಆದರೆ, 2020ರಲ್ಲಿ ರಾಮ್ ವಿಲಾಸ್ ಪಾಸ್ವಾನ್ ಅವರು ಕೊನೆಯುಸಿರೆಳೆದರು.

Advertisements

ರಾಮ್ ವಿಲಾಸ್ ಅವರ ಸಾವಿನ ಬಳಿಕ ಕುಟುಂಬದೊಳಗೆ ಕಲಹ ಉಂಟಾಗಿತ್ತು. ಚಿರಾಗ್ ಪಾಸ್ವಾನ್ ಮತ್ತು ಅವರ ಚಿಕ್ಕಪ್ಪ ಪಶುಪತಿ ಕುಮಾರ್ ಪರಾಸ್ ಇಬ್ಬರ ನಡುವಿನ ವೈಮನಸ್ಸಿನಿಂದ ಪಕ್ಷವು ಇಬ್ಬಾಗವಾಯಿತು. ಬಿಜೆಪಿ ಪಶುಪತಿ ಅವರ ಪರವಾಗಿ ನಿಂತರೂ, ಚಿರಾಗ್ ಅವರು ಎನ್‌ಡಿಎಗೆ ತಮ್ಮ ಬೆಂಬಲವನ್ನು ಮುಂದುವರೆಸಿದ್ದರು. ಅಲ್ಲದೆ, ತಮ್ಮ ಬಣವನ್ನು ಬಲಗೊಳಿಸಲು, ಜನಸಂಪರ್ಕ ಸಾಧಿಸಲು ‘ಬಿಹಾರ್ ಫಸ್ಟ್, ಬಿಹಾರಿ ಫಸ್ಟ್’ ಅಭಿಯಾನ ಪ್ರಾರಂಭಿಸಿದ್ದರು.

2024ರ ಲೋಕಸಭಾ ಚುನಾವಣೆಗೂ ಮುನ್ನ, ಜಾತಿ ಲೆಕ್ಕಾಚಾರದಲ್ಲಿ ಬಿಹಾರದಲ್ಲಿ ಹೆಚ್ಚು ಮತಗಳನ್ನು ಸೆಳೆಯಲು ಚಿರಾಗ್ ಬಣ ಪ್ರಬಲವಾಗಿ ಎಂದು ಭಾವಿಸಿದ ಬಿಜೆಪಿ, ಚಿರಾಗ್ ಜೊತೆಗೂ ಸೀಟು ಹಂಚಿಕೆ ಮಾಡಿಕೊಂಡು, ಹೋರಾಟ ನಡೆಸಿತು. ಈಗ, ಬಿಜೆಪಿ ಏಕಾಂಗಿಯಾಗಿ ಬಹುಮತ ಪಡೆಯಲು ಸಾಧ್ಯವಾಗ ಹಿನ್ನೆಲೆ, ಚಿರಾಗ್ ಅವರಂತಹ ಸಣಣ ಮಿತ್ರಪಕ್ಷಗಳು ಸರ್ಕಾರ ರಚಿಸಲು ಬಿಜೆಪಿಗೆ ಬಲ ನೀಡಿವೆ.

ಹೀಗಾಗಿ, ಮೋದಿ ನೇತೃತ್ವದ ಹೊಸ ಸರ್ಕಾರದಲ್ಲಿ ಚಿರಾಗ್ ಪಾಸ್ವಾನ್‌ ಅವರಿಗೆ ಮಂತ್ರಿಗಿರಿ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X