ಲೋಕಸಭಾ ಚುನಾವಣೆ | ಕಾಂಗ್ರೆಸ್‌ 2ನೇ ಪಟ್ಟಿ ಬಿಡುಗಡೆ; ಸಚಿವರ ಮಕ್ಕಳಿಗೆ ‘ಟಿಕೆಟ್‌ ಭಾಗ್ಯ’

Date:

Advertisements

ಕಾಂಗ್ರೆಸ್‌ ತನ್ನ ಎರಡನೇ ಪಟ್ಟಿಯನ್ನು ಗುರುವಾರ ಸಂಜೆ ಬಿಡುಗಡೆ ಮಾಡಿದ್ದು, ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಕರ್ನಾಟಕದ 17 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.

ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ದೆಹಲಿಯ ಪಕ್ಷದ ಕೇಂದ್ರ ಕಚೇರಿಯಲ್ಲಿ ಎರಡು ದಿನಗಳ ಕಾಲ ಕೇಂದ್ರ ಚುನಾವಣಾ ಸಮಿತಿಯ ಸಭೆ ನಡೆದು, ಹುರಿಯಾಳುಗಳ ಹೆಸರನ್ನು ಅಂತಿಮಗೊಳಿಸಲು ಕಾಂಗ್ರೆಸ್‌ ನಾಯಕರು ಕಸರತ್ತು ನಡೆಸಿದ ಬಳಿಕ ಈ ಪಟ್ಟಿ ಬಿಡುಗಡೆಗೊಂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ಕೇಂದ್ರ ಚುನಾವಣಾ ಸಮಿತಿ ಸದಸ್ಯ ಕೆ ಜೆ ಜಾರ್ಜ್‌ ಮತ್ತಿತರರು ಈ ಸಭೆಯಲ್ಲಿ ಭಾಗಿಯಾಗಿ, ಉಳಿದಿದ್ದ 21 ಕ್ಷೇತ್ರಗಳ ಪೈಕಿ 17 ಕ್ಷೇತ್ರದ ಹೆಸರನ್ನು ಅಂತಿಮಗೊಳಿಸಿ ಪ್ರಕಟಿಸಿದೆ.

Advertisements

WhatsApp Image 2024 03 21 at 8.15.33 PM

ಕಾಂಗ್ರೆಸ್‌ ಈಗಾಗಲೇ ಏಳು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಈಗ ಪ್ರಕಟಗೊಂಡಿರುವ 17 ಕ್ಷೇತ್ರಗಳ ಪೈಕಿ ಬಾಗಲಕೋಟೆಯಿಂದ ಸಕ್ಕರೆ ಸಚಿವ ಶಿವಾನಂದ ಪಾಟೀಲ ಪುತ್ರಿ ಸಂಯುಕ್ತ ಪಾಟೀಲ, ಚಿಕ್ಕೋಡಿಯಲ್ಲಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ, ಬೆಳಗಾವಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳಕರ ಹಾಗೂ ಬೀದರ್‌ ಲೋಕಸಭಾ ಕ್ಷೇತ್ರಕ್ಕೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಪುತ್ರ ಸಾಗರ್‌ ಖಂಡ್ರೆ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ ಅವರಿಗೆ ಬೆಂಗಳೂರು ದಕ್ಷಿಣ ಹೆಸರನ್ನು ಅಂತಿಮಗೊಳಿಸಿ, ಟಿಕೆಟ್ ನೀಡಲಾಗಿದೆ. ಈ ಮೂಲಕ ಐದು ಕ್ಷೇತ್ರಗಳಲ್ಲಿ ಸಚಿವರ ಮಕ್ಕಳಿಗೆ ಮಣೆ ಹಾಕಲಾಗಿದೆ.

ಬಳ್ಳಾರಿ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಚಾಮರಾಜನಗರ ಸೇರಿದಂತೆ ಒಟ್ಟು 4  ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಹೆಸರನ್ನು ಎರಡನೇ ಪಟ್ಟಿಯಲ್ಲಿ ಕಾಂಗ್ರೆಸ್ ಪ್ರಕಟಿಸಿಲ್ಲ.

WhatsApp Image 2024 03 21 at 9.27.05 PM

  1. ಬೆಂಗಳೂರು ಉತ್ತರ – ಪ್ರೊ.ಎಂ.ವಿ. ರಾಜೀವ್ ಗೌಡ
  2. ಬೆಂಗಳೂರು ದಕ್ಷಿಣ – ಸೌಮ್ಯಾ ರೆಡ್ಡಿ
  3. ಬೆಂಗಳೂರು ಸೆಂಟ್ರಲ್ – ಮನ್ಸೂರ್ ಆಲಿಖಾನ್
  4. ಮೈಸೂರು – ಎಂ.ಲಕ್ಷ್ಮಣ್
  5. ರಾಯಚೂರು – ಜಿ. ಕುಮಾರನಾಯ್ಕ್
  6. ಕೊಪ್ಪಳ – ರಾಜಶೇಖರ ಬಸವರಾಜ್ ಹಿಟ್ನಾಳ್
  7. ಬೀದರ್ – ಸಾಗರ್ ಖಂಡ್ರೆ
  8. ದಾವಣಗೆರೆ – ಪ್ರಭಾ ಮಲ್ಲಿಕಾರ್ಜುನ
  9. ಉತ್ತರ ಕನ್ನಡ – ಡಾ. ಅಂಜಲಿ ನಿಂಬಾಳ್ಕರ್
  10. ದಕ್ಷಿಣ ಕನ್ನಡ – ಆರ್.ಪದ್ಮರಾಜ್
  11. ಚಿತ್ರದುರ್ಗ – ಬಿ ಎನ್ ಚಂದ್ರಪ್ಪ
  12. ಕಲಬುರಗಿ – ರಾಧಾಕೃಷ್ಣ
  13. ಧಾರವಾಡ‌ – ವಿನೋದ ಅಸೂಟಿ
  14. ಬಾಗಲಕೋಟೆ – ಸಂಯುಕ್ತ ಪಾಟೀಲ್
  15. ಉಡುಪಿ-ಚಿಕ್ಕಮಗಳೂರು – ಡಾ. ಜಯಪ್ರಕಾಶ್ ಹೆಗಡೆ
  16. ಬೆಳಗಾವಿ – ಮೃಣಾಲ್ ಹೆಬ್ಬಾಳ್ಕರ್
  17. ಚಿಕ್ಕೋಡಿ – ಪ್ರಿಯಾಂಕ ಜಾರಕಿಹೊಳಿ
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X