ಲೋಕಸಭಾ ಚುನಾವಣೆ | ರೈತರಿಗೆ 5 ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

Date:

Advertisements

ಲೋಕಸಭಾ ಚುನಾವಣೆಗೆ ಭಾರೀ ತಯಾರಿ ನಡೆಸುತ್ತಿರುವ ಕಾಂಗ್ರೆಸ್‌, ನಾನಾ ಕ್ಷೇತ್ರಗಳಿಗೆ ನಾನಾ ರೀತಿಯ ಗ್ಯಾರಂಟಿಗಳನ್ನು ನೀಡುತ್ತಿದೆ. ಯುವಜನರು, ಆದಿವಾಸಿಗಳು ಹಾಗೂ ಮಹಿಳೆಯರಿಗೆ ಈಗಾಗಲೇ ಗ್ಯಾರಂಟಿಗಳ ಭರವಸೆ ನೀಡಿರುವ ಕಾಂಗ್ರೆಸ್‌, ಇದೀಗ, ರೈತರಿಗೆ ಐದು ಭವರಸೆಗಳನ್ನು ಘೋಷಿಸಿದೆ

ಕೃಷಿ ಕ್ಷೇತ್ರಕ್ಕೆ ಗ್ಯಾರಂಟಿಗಳನ್ನು ಘೋಷಿಸಿ, ಟ್ವೀಟ್ ಮಾಡಿರುವ ರಾಹುಲ್‌ ಗಾಂಧಿ, “ದೇಶದ ಎಲ್ಲ ಅನ್ನದಾತರಿಗೆ ನನ್ನ ನಮನ! ಕಾಂಗ್ರೆಸ್ ನಿಮಗಾಗಿ 5 ಭರವಸೆಗಳನ್ನು ತಂದಿದೆ. ಈ ಭರವಸೆಗಳು ನಿಮ್ಮ ಎಲ್ಲ ಸಮಸ್ಯೆಗಳನ್ನು ಅವುಗಳ ಮೂಲದಿಂದ ತೊಡೆದು ಹಾಕುತ್ತವೆ” ಎಂದಿದ್ದಾರೆ.

ರೈತರಿಗೆ ಕಾಂಗ್ರೆಸ್‌ ಭರವಸೆಗಳು ಹೀಗಿವೆ:

Advertisements
  1. ಸ್ವಾಮಿನಾಥನ್ ಆಯೋಗದ ಸೂತ್ರದ ಅಡಿಯಲ್ಲಿ MSPಗೆ ಕಾನೂನು ಸ್ಥಾನಮಾನ.
  2. ರೈತರ ಸಾಲ ಮನ್ನಾ ಮಾಡಲು ಮತ್ತು ಸಾಲ ಮನ್ನಾ ಪ್ರಮಾಣವನ್ನು ನಿರ್ಧರಿಸಲು ಶಾಶ್ವತ ‘ಕೃಷಿ ಸಾಲ ಮನ್ನಾ ಆಯೋಗ’ ರಚನೆ.
  3. ವಿಮಾ ಯೋಜನೆಯನ್ನು ಬದಲಾಯಿಸುವ ಮೂಲಕ ಬೆಳೆ ನಷ್ಟವಾದಲ್ಲಿ 30 ದಿನಗಳೊಳಗೆ ನೇರವಾಗಿ ಬ್ಯಾಂಕ್ ಖಾತೆಗೆ ಪರಿಹಾರ ಪಾವತಿ.
  4. ರೈತರ ಹಿತಾಸಕ್ತಿಯನ್ನು ಮುಂದಿಟ್ಟುಕೊಂಡು ಹೊಸ ಆಮದು-ರಫ್ತು ನೀತಿ ರಚನೆ.
  5. ಕೃಷಿ ಉತ್ಪನ್ನಗಳಿಂದ ಜಿಎಸ್‌ಟಿಯನ್ನು ತೆಗೆದುಹಾಕುವ ಮೂಲಕ ರೈತರನ್ನು ಜಿಎಸ್‌ಟಿ ಮುಕ್ತವನ್ನಾಗಿ ಮಾಡುವುದು.

ಕಾಂಗ್ರೆಸ್ ಭರವಸೆ1

“ತಮ್ಮ ಬೆವರಿನಿಂದ ನಾಡಿನ ಮಣ್ಣಿಗೆ ನೀರುಣಿಸುವ ರೈತರ ಬದುಕು ಹಸನುಗೊಳಿಸುವುದು ಕಾಂಗ್ರೆಸ್‌ನ ಉದ್ದೇಶವಾಗಿದೆ. ನಮ್ಮ 5 ಐತಿಹಾಸಿಕ ನಿರ್ಧಾರಗಳು ಆ ನಿಟ್ಟಿನಲ್ಲಿ ಕೈಗೊಂಡ ಹೆಜ್ಜೆಗಳಾಗಿವೆ. ಭಾರತದ ಕೃಷಿ ವ್ಯವಸ್ಥೆಯಲ್ಲಿ ‘ಸಮೃದ್ಧಿಯ ಸೂರ್ಯ’ ಉದಯಿಸಲಿದೆ” ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X