ಲೋಕಸಭಾ ಚುನಾವಣೆ | ಜಗದೀಶ ಶೆಟ್ಟರ್‌ಗೆ ಟಿಕೆಟ್ ಬೇಡವೇ ಬೇಡ, ಅವ್ರು ಜಿಲ್ಲೆಗೆ ಅನ್ಯಾಯ ಮಾಡಿದ್ದಾರೆ; ಮತದಾರರ ಆಕ್ರೋಶ

Date:

Advertisements

ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಿದೆ. ಆದರೂ ಬೆಳಗಾವಿ ಲೋಕಸಭೆಯ ಬಿಜೆಪಿ ಟಿಕೆಟ್ ಯಾರಿಗೆ ಎಂಬ ಗೊಂದಲಕ್ಕೆ ಇನ್ನೂ ಪರಿಹಾರ ಸಿಕ್ಕಿಲ್ಲ. ಬಿಜೆಪಿ ವರಿಷ್ಠರು ಜಗದೀಶ ಶೆಟ್ಟರ್‌ಗೆ ಟಿಕೆಟ್ ಎಂದು ಹೇಳಿದ್ದರು ಸಹ ಇನ್ನೂ ಸ್ಪಷ್ಟವಾಗಿಲ್ಲ. ಅಲ್ಲದೆ ಜಗದೀಶ ಶೆಟ್ಟರ್‌ ಬೆಳಗಾವಿ ಲೋಕಸಭೆಗೆ ಬೇಡವೇ ಬೇಡ ಎಂಬ ಕೂಗು ಕೇಳಿ ಬರುತ್ತಿದೆ.

ಜಗದೀಶ ಶೆಟ್ಟರ ಮುಖ್ಯಮಂತ್ರಿ ಆಗಿದ್ದಾಗ ಬೆಳಗಾವಿ ಜಿಲ್ಲೆಯನ್ನು ಕಡೆಗಣಿಸಿದ್ದಾರೆ. ಬೆಳಗಾವಿ ಗೆ ಬರಬೇಕಿದ್ದ ಹೈಕೋರ್ಟ್ ಧಾರವಾಡಕ್ಕೆ ಮಾಡಿದ್ದಾರೆ, ರೈಲ್ವೆ ಮತ್ತು ವಿಮಾನ ಸೌಲಭ್ಯಗಳನ್ನು ಬೆಳಗಾವಿ ಬಿಟ್ಟು ಹುಬ್ಬಳ್ಳಿಗೆ ಮಾಡಿದ್ದಾರೆ ಈ ಮೂಲಕ ಜಗದೀಶ ಶೆಟ್ಟರ ಬೆಳಗಾವಿ ಜಿಲ್ಲೆಗೆ ಅನ್ಯಾಯ ಮಾಡಿದ್ದಾರೆ ಈ ಕಾರಣಕ್ಕೆ ಜಗದೀಶ ಶೆಟ್ಟರ್‌ ಬೆಳಗಾವಿ ಲೋಕಸಭೆಗೆ ಬೇಡವೆ ಬೇಡ ಎಂಬುದು ಬೆಳಗಾವಿ ಜನತೆಯ ಆಕ್ರೋಶವಾಗಿದೆ.

ವಿಧಾನ ಸಭಾ ಚುನಾವಣೆಯಲ್ಲಿ ಜಗದೀಶ ಶೆಟ್ಟರ ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡಿ ನಮ್ಮನ್ನು ಸೋಲಿಸಿದ್ದಾರೆ ಅವರಿಗೆ ಬಿಜೆಪಿ ಟಿಕೆಟ್ ಕೊಡುವುದು ಯಾವ ನ್ಯಾಯ. ಮಹಾಂತೇಶ ಕವಟಗಿಮಠ, ವಿಶ್ವನಾಥ ಪಾಟೀಲ, ರಮೇಶ ಕತ್ತಿ, ಸಂಜಯ ಪಾಟಿಲ, ಟಿಕೆಟ್ ಗೆ ಪೈಟ್ ಮಾಡುತ್ತಿದ್ದು ಇವರಲ್ಲಿ ಯಾರಿಗಾದರೂ ಸ್ಥಳೀಯರಿಗೆ ಟಿಕೆಟ್ ನೀಡಬೇಕು ಎಂದು ಬೆಳಗಾವಿ ಜಿಲ್ಲೆಯ ಬಿಜೆಪಿ ಮುಖಂಡರು ಒತ್ತಾಯ ಮಾಡುತ್ತಿದ್ದಾರೆ‌

Advertisements

ಪಂಚಮಸಾಲಿ ಸಮುದಾಯದವರಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಪುತ್ರನಿಗೆ ಕಾಂಗ್ರೆಸ್ ನಿಂದ ಟಿಕೆಟ್ ನೀಡುತ್ತಿದ್ದು ಬಿಜೆಪಿಯು ಸಹ ಪಂಚಮಸಾಲಿ ಸಮುದಾಯದವರಿಗೆ ಟಿಕೆಟ್ ಕೊಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದು ಮುರುಗೇಶ ನೀರಾಣಿಯವರು ಬೆಳಗಾವಿ ಲೋಕಸಭಾ ಟಿಕೆಟ್ ಗೆ ಪ್ರಯತ್ನಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ಜಗದೀಶ ಶೆಟ್ಟರ ಅವರು ನಾನು ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಮಾಡುತ್ತೆನೆ ಕ್ಷೇತ್ರದ ಜನತೆಯು ನನ್ನ ಜೊತೆಗೆ ಇದ್ದಾರೆ ಎಂದು ಹೇಳಿಕೆ ನೀಡಿದ್ದು ಒಂದು ವೇಳೆ ಜಗದೀಶ ಶೆಟ್ಟರ್‌ ಅವರಿಗೆ ಬೆಳಗಾವಿ ಲೋಕಸಭಾ ಟಿಕೆಟ್ ನೀಡಿದರೆ ಸ್ಥಳೀಯ ಬಿಜೆಪಿ ಮುಖಂಡರು ಜಗದೀಶ ಶೆಟ್ಟರ್‌ ಪರವಾಗಿ ಎಷ್ಟರ ಮಟ್ಟಿಗೆ ಕೆಲಸ ಮಾಡುತ್ತಾರೆ? ಇದು ನಿಜಕ್ಕೂ ಜಗದೀಶ ಶೆಟ್ಟರ್‌ಗೆ ಕಠಿಣ ಸವಾಲಾಗಿದೆ.

ಸುನಿಲ್
ಸುನಿಲ್ ಹಂಪನ್ನವರ
+ posts

ಬೆಳಗಾವಿ ಜಿಲ್ಲಾ ಸಂಯೋಜಕರು

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಸುನಿಲ್ ಹಂಪನ್ನವರ
ಸುನಿಲ್ ಹಂಪನ್ನವರ
ಬೆಳಗಾವಿ ಜಿಲ್ಲಾ ಸಂಯೋಜಕರು

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X