Lok Sabha Elections-2024 | ಹೊಸ‌ ಮುಖಗಳಿಗೆ ಹೆಚ್ಚು ಟಿಕೆಟ್: ಆರ್‌ ಅಶೋಕ್‌

Date:

Advertisements

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೊಸ‌ ಮುಖಗಳಿಗೆ ಹೆಚ್ಚು ಟಿಕೆಟ್ ಸಿಗಬಹುದು. ಇನ್ನೊಂದು ಸುತ್ತಿನ ಮಾತುಕತೆ ಆದ ಕೂಡಲೇ ಪಟ್ಟಿ ಬಿಡುಗಡೆ ಮಾಡುತ್ತಾರೆ. ಯಾವ ಕ್ಷೇತ್ರದಲ್ಲಿ ಸಮಸ್ಯೆ ಇದೆಯೋ ಅಲ್ಲಿ ಮತ್ತೊಮ್ಮೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಈ ಬಾರಿ ಕೆಲವು ಹಾಲಿ ಸಂಸದರಿಗೆ ವಯಸ್ಸು ಹಾಗೂ ಅನಾರೋಗ್ಯ ಕಾರಣದಿಂದಾಗಿ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ” ಎಂದರು.

“ವರಿಷ್ಠರು ಅಭ್ಯರ್ಥಿಗಳ ಮಾಹಿತಿ, ಹಿನ್ನೆಲೆ ತೆಗೆದುಕೊಂಡಿದ್ದಾರೆ. ಕೆಲವರನ್ನು ವಯಸ್ಸು, ಆರೋಗ್ಯ ಕಾರಣದಿಂದ ಬದಲಾವಣೆ ಮಾಡಲಾಗುತ್ತದೆ. ಬಹುತೇಕ ಚರ್ಚೆ ಒಂದು ಹಂತಕ್ಕೆ ಬಂದಿದೆ. ಗೊಂದಲ ಇರುವ ಕ್ಷೇತ್ರಗಳ ಬಗ್ಗೆ ಚರ್ಚೆ ಆಗಬೇಕಿದೆ” ಎಂದು ಹೇಳಿದರು.

Advertisements

“ಎರಡು ದಿನಗಳ ಕಾಲ ದೆಹಲಿಯಲ್ಲಿ ಸಭೆ ನಡೆಸಲಾಗಿದೆ. ಒಂದು ಸುತ್ತಿನ ಮಾತುಕತೆ ನಡೆದಿದೆ. ಸಭೆಯಲ್ಲಿ ರಾಜ್ಯ ಕೋರ್ ಕಮಿಟಿ ಕಳಿಸಿದ್ದ ಪಟ್ಟಿ ಬಗ್ಗೆ ಚರ್ಚೆ ಆಗಿದೆ. ಸವಿಸ್ತಾರವಾಗಿ ಅಮಿತ್ ಶಾ, ನಡ್ಡಾ, ಸಂತೋಷ್ ಅವರ ಜೊತೆ ಚರ್ಚೆ ಆಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೋರ್ಡ್ ಪರೀಕ್ಷೆ ರದ್ದು ಸ್ವಾಗತಾರ್ಹ; ಮೇಲ್ಮನವಿಗೆ ಹೋಗದಿರಲಿ ಸರ್ಕಾರ

ಸುಮಲತಾ ಅಂಬರೀಶ್ ಇನ್ನೂ ನಮ್ಮ ಪಕ್ಷ ಸೇರಿಲ್ಲ

ಮಂಡ್ಯದಲ್ಲಿ ಬಿಜೆಪಿಯಿಂದ ನಾನೇ ಸ್ಪರ್ಧೆ ಎಂದು ಸಂಸದೆ ಸುಮಲತಾ ಹೇಳಿದ್ದಾರಲ್ಲಾ ಎಂದು ಪ್ರಶ್ನಿಸಿದಾಗ, “ಸುಮಲತಾ ಅಂಬರೀಶ್ ನಮಗೆ ಬರೀ ಬೆಂಬಲ ಅಷ್ಟೇ ಕೊಟ್ಟಿದ್ದಾರೆ. ಆದರೆ ಅವರು ಇನ್ನೂ ಪಕ್ಷಕ್ಕೆ ಸೇರಿಲ್ಲ. ಹೀಗಾಗಿ ಅವರ ಬಗ್ಗೆ ವರಿಷ್ಠರು ತೀರ್ಮಾನ ಮಾಡುತ್ತಾರೆ” ಎಂದರು.

ಮೈಸೂರು, ಮಂಡ್ಯ, ಗುಲ್ಬರ್ಗ, ಹಾಸನ ಎಲ್ಲಾ ಕ್ಷೇತ್ರಗಳ ಬಗ್ಗೆ ಚರ್ಚೆ ಆಗಿದೆ. ಹಾಲಿ ಉತ್ತಮ ಸಂಸದರಿಗೆ ಮತ್ತೊಮ್ಮೆ ಅವಕಾಶ ಕೊಡುವ ಬಗ್ಗೆ ಚರ್ಚೆ ಆಗಿದೆ. ಬೆಂಗಳೂರು ಉತ್ತರಕ್ಕೆ ನಮ್ಮ ಅಭಿಪ್ರಾಯವನ್ನು ನಾವು ತಿಳಿಸಿದ್ದೇವೆ. ಮುಂದಿನ ತೀರ್ಮಾನವನ್ನು ನಮ್ಮ ವರಿಷ್ಠರು ಮಾಡುತ್ತಾರೆ. ಜೆಡಿಎಸ್ ನಾಯಕರು ಇನ್ನು ಎರಡು-ಮೂರು ದಿನಗಳಲ್ಲಿ ದೆಹಲಿಗೆ ಹೋಗುತ್ತಾರೆ. ಅವರು ಯಾವ ಕ್ಷೇತ್ರದಲ್ಲಿ ಸೀಟು ಕೇಳುತ್ತಾರೋ ಅದನ್ನು ಬಿಟ್ಟು ಕೊಡುವ ಬಗ್ಗೆ ವರಿಷ್ಠರು ಮಾತಾಡುತ್ತಾರೆ” ಎಂದು ವಿವರಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X