ಯುವ, ಮಹಿಳಾ ಹಾಗೂ ಹೊಸ ಮುಖಗಳಿಗೆ ಲೋಕಸಭಾ ಟಿಕೆಟ್: ಡಿಸಿಎಂ ಡಿ ಕೆ ಶಿವಕುಮಾರ್

Date:

ನನ್ನ 40 ವರ್ಷಗಳ ರಾಜಕೀಯ ಇತಿಹಾಸದಲ್ಲೇ ಅತಿ ಹೆಚ್ಚು ಯುವ, ಮಹಿಳಾ, ವಿದ್ಯಾವಂತ, ಪ್ರಜ್ಞಾವಂತರಿಗೆ, ಹೊಸ ಮುಖಗಳಿಗೆ ಅವಕಾಶ ಮಾಡಿಕೊಟ್ಟಿದ್ದೇವೆ. ಇವರೆಲ್ಲಾ ಈ ಬಾರಿ ಗೆದ್ದು ಭವಿಷ್ಯದಲ್ಲಿ ಪಕ್ಷದ ದೊಡ್ಡ ನಾಯಕರಾಗಿ ಬೆಳೆಯುತ್ತಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

- Advertisement -

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದ ಅವರು, “ಕೇವಲ ಸಚಿವರ ಮಕ್ಕಳಿಗೆ ಟಿಕೆಟ್ ನೀಡಿದ್ದು, ಕಾರ್ಯಕರ್ತರಿಗೆ ನೀಡಿಲ್ಲ ಎಂದು ಕೇಳಿದಾಗ “ಕಾರ್ಯಕರ್ತರಿಗೂ ಟಿಕೆಟ್ ನೀಡಿದ್ದೇವೆ. ಯಾರು ಟಿಕೆಟ್ ಕೇಳಿದ್ದಾರೋ ಅವರಿಗೆ ನೀಡಿದ್ದೇವೆ. ಯಾರು ಕೇಳುವುದಿಲ್ಲವೋ ಅವರಿಗೆ ನೀಡಲು ಆಗುವುದಿಲ್ಲ. ಮೊದಲು ಆಸಕ್ತಿ, ಛಲ ಇರಬೇಕು”ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಇಂದು ಸಂಜೆ ಅಂತಿಮ ಪಟ್ಟಿ

“ಕರ್ನಾಟಕದ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಂಡಿದ್ದು ತಮಿಳುನಾಡು, ಉತ್ತರಪ್ರದೇಶದ ಪಟ್ಟಿ ಅಂತಿಮಗೊಳ್ಳುತ್ತಿದ್ದು ಇಂದು (ಗುರುವಾರ) ಸಂಜೆ ಲೋಕಸಭಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತದೆ. ಇಂದು ಸಂಜೆಯೇ ಎಲ್ಲಾ ಅಭ್ಯರ್ಥಿಗಳು ಮತ್ತು ಮಂತ್ರಿಗಳ ಜೊತೆ ಸಭೆ ಇಟ್ಟುಕೊಂಡಿದ್ದೇವೆ” ಎಂದು ಹೇಳಿದರು.

ನಾಲ್ಕು ಕ್ಷೇತ್ರಗಳಲ್ಲಿ ಗೊಂದಲ ಉಂಟಾಗಿದೆ ಎಂದಾಗ “ನಾಲ್ಕು ಕ್ಷೇತ್ರಗಳ ಬಗ್ಗೆ ಒಂದು ಸುತ್ತಿನ ಮಾತುಕತೆ ನಡೆಸಲಾಗಿದೆ. ಜೂಮ್ ಮೂಲಕ ಚರ್ಚೆ ಮಾಡುತ್ತೇವೆ” ಎಂದು ತಿಳಿಸಿದರು.ʼ

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಲ್ಲೆಲ್ಲೂ ಪುರುಷರದೇ ಪಾರುಪತ್ಯ; ಮಹಿಳಾ ಪ್ರಾತಿನಿಧ್ಯ ಕನ್ನಡಿಯೊಳಗಿನ ಗಂಟು

ಮೇಕೆದಾಟು ಕಟ್ಟಲೆಂದೇ ಜಲ ಸಂಪನ್ಮೂಲ ಸಚಿವನಾಗಿದ್ದೇನೆ

ಡಿಎಂಕೆ ತನ್ನ ಪ್ರನಾಳಿಕೆಯಲ್ಲಿ ಮೇಕೆದಾಟು ಅಣೆಕಟ್ಟು ಕಟ್ಟಲು ಬಿಡುವುದಿಲ್ಲ ಎಂದು ಹೇಳಿದೆ ಎಂದು ಕೇಳಿದಾಗ “ಅವರ ರಾಜ್ಯದಲ್ಲಿ ಅವರು ಏನಾದರೂ ಮಾಡಿಕೊಳ್ಳಲಿ. ನಾನು ಮೇಕೆದಾಟು ಕಟ್ಟಲೆಂದೇ ಜಲ ಸಂಪನ್ಮೂಲ ಇಲಾಖೆ ಜವಾಬ್ದಾರಿ ತೆಗೆದುಕೊಂಡಿದ್ದೇನೆ. ಅವರ ಹೋರಾಟ ಅವರು ಮಾಡಲಿ. ಕಾವೇರಿ ನೀರು ನಿರ್ವಹಣಾ ಸಮಿತಿಗೆ ನೀರಿನ ಸಮಸ್ಯೆಯ ಅರಿವಿದೆ. ಅವರು ನಮಗೆ ನ್ಯಾಯ ಕೊಡಲೇ ಬೇಕು. ಕೋರ್ಟಿನಲ್ಲೂ ನಮಗೆ ನ್ಯಾಯ ಸಿಗುತ್ತದೆ” ಎಂದು ಹೇಳಿದರು.

“ಮೇಕೆದಾಟು ಯೋಜನೆ ಕೇವಲ ಕರ್ನಾಟಕಕ್ಕೆ ಮಾತ್ರವಲ್ಲ. ಎರಡೂ ರಾಜ್ಯಗಳಿಗೆ ಉಪಯೋಗವಾಗುತ್ತದೆ. ಇಡೀ ದೇಶದ ಜನರು ಕರ್ನಾಟಕದಲ್ಲಿ ಇದ್ದಾರೆ. ಈ ಯೋಜನೆಯಿಂದ ಇಡೀ ದೇಶದ ಜನರಿಗೆ ಉಪಯೋಗವಾಗುತ್ತದೆ. ನಮ್ಮ ಸಹೋದರರು ಬೆಂಗಳೂರಿನಲ್ಲೂ ಇದ್ದಾರೆ. ಅವರಿಗೂ ಒಳ್ಳೆಯದು ಆಗಲಿ ಎಂದು ಮೇಕೆದಾಟು ಯೋಜನೆಯ ಪರವಾಗಿ ತಮಿಳುನಾಡು ಮಾತನಾಡುವ ಒಳ್ಳೆಯ ಕಾಲ ಬರಲಿದೆ” ಎಂದರು.

ಬಿಜೆಪಿ ಸ್ವಚ್ಚಗೊಳಿಸುತ್ತೇನೆ ಎನ್ನುವ ಸದಾನಂದಗೌಡರ ಹೇಳಿಕೆ ಬಗ್ಗೆ ಕೇಳಿದಾಗ “ಅವರು ಅನುಭವದಿಂದ ಈ ಮಾತನ್ನು ಹೇಳಿದ್ದಾರೆ. ಅನುಭವ ಮನುಷ್ಯನನ್ನು ಮಾಗಿಸುತ್ತದೆ” ಎಂದರು.

ಧಾರ್ಮಿಕ ಸಂಸ್ಥೆಗಳ ಮಸೂದೆಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ ಎಂದಾಗ “ಈ ವಿಚಾರದಲ್ಲಿ ಬಿಜೆಪಿಯದ್ದು ಇಬ್ಬಗೆಯ ನೀತಿ. ಸಣ್ಣ, ಸಣ್ಣ ದೇವಾಲಯಗಳ, ಅರ್ಚಕರ ಅಭಿವೃದ್ದಿಗೆ ಪೂರಕವಾಗಿದ್ದ ಈ ಮಸೂದೆಯನ್ನು ಬಿಜೆಪಿ ವಿರೋಧಿಸಿ ತನ್ನ ನಿಜ ಬಣ್ಣವನ್ನು ಬಯಲುಮಾಡಿಕೊಂಡಿದೆ. ಮುಂದಿನ ಜೂನ್ ತಿಂಗಳ ಅಧಿವೇಶನದಲ್ಲಿ ಬಹುಮತ ಸಿಗಲಿದೆ” ಎಂದು ಉತ್ತರಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು ಬೆಸೆಯಲಿ

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ...

ನನಸಿನತ್ತ ಕರಾವಳಿ ಕನಸು: ಶೀಘ್ರದಲ್ಲೇ ರಾಜ್ಯದ 2ನೇ ಅಧಿಕೃತ ಭಾಷೆಯಾಗಲಿದೆ ತುಳು!

ಕರಾವಳಿ ಜನರ ಬಹುಕಾಲದ ಕನಸು ಮತ್ತು ಬೇಡಿಕೆಯಾದ ತುಳು ಭಾಷೆಗೆ ರಾಜ್ಯದ...

ಕೆಪಿಎಸ್‌ಸಿ ಮಾಜಿ ಅಧ್ಯಕ್ಷರ ಪುತ್ರಿಗೆ ನಕಲಿ ದಾಖಲೆ ನೀಡಿದ್ದ ಕಂದಾಯ ಅಧಿಕಾರಿಯ ಜಾಮೀನು ಅರ್ಜಿ ವಜಾ

ಅಮಾನತುಗೊಂಡಿರುವ ಕೆಪಿಎಸ್‌ಸಿ ಅಧ್ಯಕ್ಷರ ಪುತ್ರಿಗೆ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ...