ಅಕ್ರಮ ಆಸ್ತಿ ಗಳಿಕೆ ಆರೋಪ, ಆರು ಜಿಲ್ಲೆಗಳಲ್ಲಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

Date:

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಮತ್ತು ಭ್ರಷ್ಟಾಚಾರ ಆರೋಪ ಸಂಬಂಧ ಬೆಸ್ಕಾಂ, ಆರೋಗ್ಯ ಇಲಾಖೆ, ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರ ಮನೆ ಮತ್ತು ಇತರೆಡೆ ಲೋಕಾಯುಕ್ತ ಪೊಲೀಸರು ಮಂಗಳವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.

- Advertisement -

ಬೆಂಗಳೂರು ಸೇರಿ ರಾಜ್ಯದ ಆರು ಜಿಲ್ಲೆಯಲ್ಲಿ ಅಕ್ರಮ ಆಸ್ತಿ ಹೊಂದಿ ಅಧಿಕಾರಿಗಳಿ ಲೋಕಾಯುಕ್ತ ಶಾಕ್ ಕೊಟ್ಟಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಗದಗ, ಕಲಬುರುಗಿ, ರಾಯಚೂರು, ಚಿತ್ರದುರ್ಗದಲ್ಲಿ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು, ಹಲವು ಅಧಿಕಾರಿಗಳ ಮನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿ 5 ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಉತ್ತರ ಕನ್ನಡ: ನಡುಮುರಿದ ಕಾಂಗ್ರೆಸ್ ಕಟ್ಟಬಲ್ಲರೆ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ ಪಂಗಡದ ಮೀನುಗಾರ ಸಂಕುಲ, ಕೋಮಾರ ಪಂಥ, ಕೊಂಕಣ ಮರಾಠರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಈ ಓಬಿಸಿಗಳ ಬೆಂಬಲ ಕ್ರೋಡೀಕರಿಸುವ ಚಾಕಚಕ್ಯತೆ ಹೊಸ...

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಬೆಂಗಳೂರಿನಲ್ಲಿ ಈಸ್ಟ್ ಸರ್ಕಲ್ ಬೆಸ್ಕಾಂನ ಸೂಪರಿಂಟೆಂಡೆಂಟ್ ಎಂಜಿನಿಯರ್ (ಎಲೆಕ್ಟಿಕಲ್) ಲೋಕೇಶ್ ಬಾಬು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಸಂತಪುರ ವಾರ್ಡ್ ಸಂಖ್ಯೆ 197 ರ ಕಂದಾಯ ನಿರೀಕ್ಷಕ ಸುರೇಶ್ ಬಾಬು, ಬಿಬಿಎಂಪಿಯ ಯಲಹಂಕ ವಲಯದ ತೆರಿಗೆ ನಿರೀಕ್ಷಕ ಕೃಷ್ಣಪ್ಪ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯಾಧಿಕಾರಿ ಎಂ.ಸಿ. ಸುನೀಲ್ ಕುಮಾರ್ ಅವರ ಮನೆ ಮೇಲೆ ದಾಳಿ ನಡೆದಿದೆ.

ಕಲಬುರಗಿ ಮಹಾನಗರ ಪಾಲಿಕೆ ಉಪ ಆಯುಕ್ತ ಆರ್.ಪಿ. ಜಾಧವ ಮನೆ, ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಿದ್ದಾರೆ. ಕೊಪ್ಪಳದಲ್ಲಿ ಅಬಕಾರಿ ನಿರೀಕ್ಷಕ ರಮೇಶ ಅಗಡಿ ಮನೆ ಮೇಲೂ ದಾಳಿ ನಡೆದಿದೆ.

ಯಾವೆಲ್ಲ ಅಧಿಕಾರಿಗಳ ಮನೆ ಮೇಲೆ ದಾಳಿ 

  • ಲೋಕೇಶ್ ಬಾಬು, ಬೆಸ್ಕಾಂ ಇಂಜಿಯರ್, ಬೆಂಗಳೂರಿನ ಬಣಸವಾಡಿ ನಿವಾಸಿ.
  • ಸುರೇಶ್ ಬಾಬು ಕಂದಾಯ ಇಲಾಖೆ ಇನ್ಸ್​ಪೆಕ್ಟರ್ ಬೆಂಗಳೂರು ನಿವಾಸ.
  • ಕೃಷ್ಣಪ್ಪ ಬಿಬಿಎಂಪಿ ತೆರಿಗೆ ಇನ್ಸ್​ಪೆಕ್ಟರ್, ಬೆಂಗಳೂರು ನಿವಾಸ.
  • ಸುನೀಲ್ ಕುಮಾರ್ ಜಿಲ್ಲಾ ಆರೋಗ್ಯಾಧಿಕಾರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ.
  • ನಂಜುಡಯ್ಯ, ಶಸಸ್ತ್ರ ಡಿವೈಎಸ್​ಪಿ, ಚನ್ನಪಟ್ಟಣ ಪೊಲೀಸ್ ತರಬೇತಿ ಶಾಲೆ.
  • ಲಕ್ಷ್ಮಣ್ ಎಸ್​ಡಿಎ, ಗದಗ.
  • ರಾಮಪ್ಪ, ಕಲಬುರುಗಿ ಮಹಾನಗರ ಪಾಲಿಕೆ ಇಂಜಿನಿಯರ್.
  • ರಮೇಶ್, ಅಬಾಕಾರಿ ಇನ್ಸ್ ಪೆಕ್ಟರ್ ರಾಯಚೂರು.
  • ಸುರೇಶ್ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ.
  • ಸುನೀಲ್ ಬಿಹೆಚ್ಒ, ಬೆಂಗಳೂರು ಗ್ರಾಮಾಂತರ.

ಚಿತ್ರದುರ್ಗದಲ್ಲೂ ಲೋಕಾಯುಕ್ತ ದಾಳಿ

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದಲ್ಲಿ ಅರಣ್ಯ ಇಲಾಖೆ ACF ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ವಿಠಲ್ ನಗರದಲ್ಲಿರುವ ಹಿರಿಯೂರು ಉಪ ವಿಭಾಗದ ACF ಸುರೇಶ್ ಮನೆ ಸೇರಿ 4 ಕಡೆ ದಾಳಿ ನಡೆದಿದೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಚಳ್ಳಕೆರೆ ನಿವಾಸ, ಹೊಸ ಬ್ಯಾಡರಹಟ್ಟಿ ಮನೆ, ಬೆಂಗಳೂರು ನಿವಾಸ, ಹಿರಿಯೂರು ಕಚೇರಿ ಮೇಲೆ ದಾಳಿ ಮಾಡಿ ನಾಲ್ಕು ಕಡೆ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೆ.17ರಂದು ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದಿಂದ ದತ್ತಿ ಪ್ರಶಸ್ತಿ ಪ್ರದಾನ

ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದ ವತಿಯಿಂದ ವಾರ್ಷಿಕ ದತ್ತಿ...

ವಂದೇ ಮಾತರಂ ಚರಣಗಳ ಮೊಟಕು: ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ

ವಂದೇ ಮಾತರಂ ಗೀತೆಯ ಕೆಲವು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ...

ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಜಾಸ್ತಿ: ಸಿಎಂ ಡಿ.ಕೆ. ಶಿವಕುಮಾರ್ ಅಭಿಮತ

"ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಎದುರಾಗುತ್ತವೆ. ಏಳನೇ ತರಗತಿಯಿಂದ ಹಿಡಿದು ಶಾಸಕನಾಗುವವರೆಗೂ ಅನೇಕ...