ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಮೈಕ್ರೋಫೋನ್‌ ಸ್ವಿಚ್ಡ್ ಆಫ್; ‘ಇಂಡಿಯಾ’ ನಾಯಕರಿಂದ ಸಭಾತ್ಯಾಗ

Date:

Advertisements

ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಮೈಕ್ರೋಫೋನ್‌ ಸ್ವಿಚ್ಡ್ ಆಫ್ ಮಾಡಿದ ಕಾರಣ ‘ಇಂಡಿಯಾ’ ಒಕ್ಕೂಟದ ಪಕ್ಷಗಳು ಸರ್ಕಾರದ ನಡೆಯನ್ನು ಖಂಡಿಸಿ ಸಭಾತ್ಯಾಗ ನಡೆಸಿದವು.

ಟಿಎಂಸಿ ರಾಜ್ಯಸಭಾ ಸದಸ್ಯ ಡೆರೆಕ್ ಓಬ್ರಿಯಾನ್ ಈ ಬಗ್ಗೆ ಟ್ವೀಟ್‌ ಮಾಡಿದ್ದು, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಮೈಕ್ರೋಫೋನ್‌ ಸ್ವಿಚ್ಡ್ ಆಫ್ ಮಾಡಲಾಗಿತ್ತು. ಈ ಘಟನೆಗೆ ಪ್ರತಿಭಟನೆ ವ್ಯಕ್ತಪಡಿಸಿ ‘ಇಂಡಿಯಾ’ ಒಕ್ಕೂಟದ ಸದಸ್ಯರು ಸಭಾತ್ಯಾಗ ಮಾಡಿದರು” ಎಂದು ತಿಳಿಸಿದ್ದಾರೆ.

ಮಣಿಪುರದ ಕುರಿತು ಸದನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯನ್ನು ಪಡೆಯಲು ‘ಇಂಡಿಯಾ’ ಒಕ್ಕೂಟ ಮಂಡಿಸಿದ ಬೇಡಿಕೆಯನ್ನು ತಡೆಯಲು ಬಿಜೆಪಿ ಸಂಸದರು ಖರ್ಗೆ ಅವರ ಮೈಕ್ರೋಫೋನ್‌ ಅನ್ನು ಸ್ವಿಚ್ಡ್ ಆಫ್ ಮಾಡಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಆರೋಪಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ‘ಮಿಸ್ಟರ್‌ ಮೋದಿ, ನಮ್ಮನ್ನು ಏನೆಂದು ಕರೆದರೂ ಮಣಿಪುರದಲ್ಲಿ ಶಾಂತಿ ಮರಳಿಸುತ್ತೇವೆ’: ಪ್ರಧಾನಿಗೆ ರಾಹುಲ್‌ ತಿರುಗೇಟು

ಬಿಜೆಪಿ ಸದಸ್ಯರ ಪ್ರಚೋದನೆಯಿಂದ ಸ್ವತಃ ಸಭಾನಾಯಕರೇ ಪದೇ ಪದೇ ಅಡ್ಡಿಪಡಿಸಿದರು. ಗದ್ದಲದಲ್ಲಿಯೇ ಮಸೂದೆಗಳನ್ನು ಮಂಡಿಸಲಾಯಿತು. ಸರ್ಕಾರದ ನಿರ್ಧಾರವನ್ನು ಖಂಡಿಸಿ ‘ಇಂಡಿಯಾ’ ಸದಸ್ಯರು ಸಭಾತ್ಯಾಗ ಮಾಡಿದರು ಎಂದು ಜೈರಾಮ್ ರಮೇಶ್ ತಿಳಿಸಿದ್ದಾರೆ.

ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷದ ನಾಯಕರು ಮಣಿಪುರ ಹಿಂಸಾಚಾರದ ಬಗ್ಗೆ ವಿವರವಾದ ಚರ್ಚೆಗೆ ಮತ್ತು ಈಶಾನ್ಯ ರಾಜ್ಯದ ಸಮಸ್ಯೆಯ ಬಗ್ಗೆ ಸದನದಲ್ಲಿ ಪ್ರಧಾನಿ ಹೇಳಿಕೆ ನೀಡುವಂತೆ ಒತ್ತಾಯಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X