ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಮೈಕ್ರೋಫೋನ್‌ ಸ್ವಿಚ್ಡ್ ಆಫ್; ‘ಇಂಡಿಯಾ’ ನಾಯಕರಿಂದ ಸಭಾತ್ಯಾಗ

Date:

Advertisements

ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಮೈಕ್ರೋಫೋನ್‌ ಸ್ವಿಚ್ಡ್ ಆಫ್ ಮಾಡಿದ ಕಾರಣ ‘ಇಂಡಿಯಾ’ ಒಕ್ಕೂಟದ ಪಕ್ಷಗಳು ಸರ್ಕಾರದ ನಡೆಯನ್ನು ಖಂಡಿಸಿ ಸಭಾತ್ಯಾಗ ನಡೆಸಿದವು.

ಟಿಎಂಸಿ ರಾಜ್ಯಸಭಾ ಸದಸ್ಯ ಡೆರೆಕ್ ಓಬ್ರಿಯಾನ್ ಈ ಬಗ್ಗೆ ಟ್ವೀಟ್‌ ಮಾಡಿದ್ದು, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಮೈಕ್ರೋಫೋನ್‌ ಸ್ವಿಚ್ಡ್ ಆಫ್ ಮಾಡಲಾಗಿತ್ತು. ಈ ಘಟನೆಗೆ ಪ್ರತಿಭಟನೆ ವ್ಯಕ್ತಪಡಿಸಿ ‘ಇಂಡಿಯಾ’ ಒಕ್ಕೂಟದ ಸದಸ್ಯರು ಸಭಾತ್ಯಾಗ ಮಾಡಿದರು” ಎಂದು ತಿಳಿಸಿದ್ದಾರೆ.

ಮಣಿಪುರದ ಕುರಿತು ಸದನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯನ್ನು ಪಡೆಯಲು ‘ಇಂಡಿಯಾ’ ಒಕ್ಕೂಟ ಮಂಡಿಸಿದ ಬೇಡಿಕೆಯನ್ನು ತಡೆಯಲು ಬಿಜೆಪಿ ಸಂಸದರು ಖರ್ಗೆ ಅವರ ಮೈಕ್ರೋಫೋನ್‌ ಅನ್ನು ಸ್ವಿಚ್ಡ್ ಆಫ್ ಮಾಡಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಆರೋಪಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ‘ಮಿಸ್ಟರ್‌ ಮೋದಿ, ನಮ್ಮನ್ನು ಏನೆಂದು ಕರೆದರೂ ಮಣಿಪುರದಲ್ಲಿ ಶಾಂತಿ ಮರಳಿಸುತ್ತೇವೆ’: ಪ್ರಧಾನಿಗೆ ರಾಹುಲ್‌ ತಿರುಗೇಟು

ಬಿಜೆಪಿ ಸದಸ್ಯರ ಪ್ರಚೋದನೆಯಿಂದ ಸ್ವತಃ ಸಭಾನಾಯಕರೇ ಪದೇ ಪದೇ ಅಡ್ಡಿಪಡಿಸಿದರು. ಗದ್ದಲದಲ್ಲಿಯೇ ಮಸೂದೆಗಳನ್ನು ಮಂಡಿಸಲಾಯಿತು. ಸರ್ಕಾರದ ನಿರ್ಧಾರವನ್ನು ಖಂಡಿಸಿ ‘ಇಂಡಿಯಾ’ ಸದಸ್ಯರು ಸಭಾತ್ಯಾಗ ಮಾಡಿದರು ಎಂದು ಜೈರಾಮ್ ರಮೇಶ್ ತಿಳಿಸಿದ್ದಾರೆ.

ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷದ ನಾಯಕರು ಮಣಿಪುರ ಹಿಂಸಾಚಾರದ ಬಗ್ಗೆ ವಿವರವಾದ ಚರ್ಚೆಗೆ ಮತ್ತು ಈಶಾನ್ಯ ರಾಜ್ಯದ ಸಮಸ್ಯೆಯ ಬಗ್ಗೆ ಸದನದಲ್ಲಿ ಪ್ರಧಾನಿ ಹೇಳಿಕೆ ನೀಡುವಂತೆ ಒತ್ತಾಯಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X