ಬಿಜೆಪಿ ಸೇರಿದ ಮಾಜಿ ಸಂಸದ ನಾಗಮಂಗಲದ ಎಲ್ ಆರ್ ಶಿವರಾಮೇಗೌಡ

Date:

Advertisements
  • ಶಿವರಾಮೇಗೌಡ ಆಗಮನದಿಂದ ನಾಗಮಂಗಲ ಬಿಜೆಪಿಗೆ ಹೊಸ ಹುರುಪು
  • ಜೆಡಿಎಸ್ ಉಚ್ಛಾಟಿತ ನಾಯಕನ ಪಕ್ಷ ಸೇರ್ಪಡೆಗೆ ಸಾಕ್ಷಿಯಾದ ಸಿ ಟಿ ರವಿ

ನಾಗಮಂಗಲ ಒಕ್ಕಲಿಗ ಮುಖಂಡ, ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಹಾಗೂ ಪಕ್ಷಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ನೇತೃತ್ವದಲ್ಲಿ ಶಿವರಾಮೇಗೌಡ ಬಿಜೆಪಿಗೆ ಸೇರ್ಪಡೆಯಾದರು.

ಇದೇ ವೇಳೆ ಶಿವರಾಮೇಗೌಡ ಪುತ್ರ ಚೇತನ್ ಅವರನ್ನೂ ಒಳಗೊಂಡಂತೆ ನಾಗಮಂಗಲ ಕ್ಷೇತ್ರ ವಿವಿಧ ಪಕ್ಷಗಳ ಮುಖಂಡರು ಪಕ್ಷ ಸೇರ್ಪಡೆಯಾದರು.

Advertisements

ಈ ಬಾರಿ ಪಕ್ಷೇತರರಾಗಿ ಕಣಕ್ಕಿಳಿಯಲು ಶಿವರಾಮೇಗೌಡ ನಿರ್ಧರಿಸಿದ್ದರು. ಜೆಡಿಎಸ್‌ನಿಂದ ಉಚ್ಛಾಟನೆಯಾದ ಬಳಿಕ ಮರಳಿ ಪಕ್ಷ ಸೇರುವ ಪ್ರಯತ್ನ ನಡೆಸಿ ಹಿನ್ನಡೆ ಅನುಭವಿಸಿದ್ದರು. ಈ ನಡುವೆ ನಡೆದ ರಾಜಕೀಯ ಬೆಳವಣಿಗೆಗಳಿಂದ ಶಿವರಾಮೇಗೌಡರಿಗೆ ಬಿಜೆಪಿ ಅಭ್ಯರ್ಥಿಯಾಗುವ ಅವಕಾಶ ಕೂಡಿ ಬಂದಿತು.

ಮಂಡ್ಯದಲ್ಲಿ ಪಕ್ಷ ಬಲಪಡಿಸುವ ಸಲುವಾಗಿ ಗಟ್ಟಿ ಹೆಜ್ಜೆ ಇಡಲು ನಿರ್ಧರಿಸಿದ್ದ ಬಿಜೆಪಿ, ರಾಜಕೀಯ ಲಾಭ ಪಡೆಯಲು ಶಿವರಾಮೇಗೌಡರನ್ನು ಪಕ್ಷಕ್ಕೆ ಸೆಳೆದುಕೊಂಡಿದೆ.

ಲೆಕ್ಕಾಚಾರಗಳ ಪ್ರಕಾರ ಮೂರು ದಿನದ ಹಿಂದೆಯೇ ಶಿವರಾಮೇಗೌಡ ಬಿಜೆಪಿ ಸೇರಬೇಕಿತ್ತು. ಆದರೆ ಆ ಸಮಯದಲ್ಲಿ ಪಕ್ಷದ ಕೋರ್ ಕಮಿಟಿ ಸಭೆ ನಡೆಯುತ್ತಿದ್ದ ಕಾರಣ ಸೇರ್ಪಡೆ ಕಾರ್ಯ ಮುಂದಕ್ಕೆ ಹೋಗಿತ್ತು.

ಈ ಸುದ್ದಿ ಓದಿದ್ದೀರಾ?:ಚಿಕ್ಕಮಗಳೂರು | ಲಿಂಗಾಯತ ಸಮುದಾಯದ ವಿರುದ್ಧ ಸಿ.ಟಿ ರವಿ ಟೀಕಿಸಿದ್ದಾರೆಂದು ಪೋಸ್ಟ್; ಮೂವರ ಬಂಧನ

ಅಂತಿಮವಾಗಿ ನಾಗಮಂಗಲ ಕ್ಷೇತ್ರದ ಟಿಕೆಟ್‌ನ ಭರವಸೆ ಹಿನ್ನೆಲೆಯಲ್ಲಿ ಶಿವರಾಮೇಗೌಡ ಕಮಲ ಪಕ್ಷ ಸೇರ್ಪಡೆಯಾಗಿದ್ದಾರೆ. ಕುತೂಹಲಕರ ಸಂಗತಿ ಎಂದರೆ, 2019ರ ಲೋಕಸಭಾ ಚುನಾವಣೆಯಲ್ಲಿ ಇದೇ ಶಿವರಾಮೇಗೌಡ, ಸುಮಲತಾ ಅವರ ಬಗ್ಗೆ ತೀರಾ ಕೆಳಮಟ್ಟದ ಹೇಳಿಕೆ ನೀಡಿ, ಜೆಡಿಎಸ್ ಸೋಲಿಗೆ ಹಾಗೂ ಸುಮಲತಾರ ಕೆಂಗಣ್ಣಿಗೆ ಗುರಿಯಾಗಿದ್ದರು. ಬದಲಾದ ಸನ್ನಿವೇಶದಲ್ಲಿ ಈಗ ಸುಮಲತಾ ಮತ್ತು ಶಿವರಾಮೇಗೌಡ ಬಿಜೆಪಿ ಸೇರಿದ್ದಾರೆ.

bfe5ebf00de2b670976597f37a6d2b77?s=150&d=mp&r=g
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X