ಕೆಎಸ್‌ಡಿಎಲ್ ಟೆಂಡರ್ ಲಂಚ ಪ್ರಕರಣ; ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಬಂಧನ

Date:

  • ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧಿಸಿದ ಲೋಕಾಯುಕ್ತ ಪೊಲೀಸರು.
  • ಕ್ಯಾತಸಂದ್ರ ಟೋಲ್‌ ಬಳಿ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ವಶಕ್ಕೆ

ಕೆಎಸ್ಐಡಿಎಲ್ ಲಂಚ ಪ್ರಕರಣದ ಪ್ರಮುಖ ಆರೋಪಿ ಮಾಡಳ್ ವಿರೂಪಾಕ್ಷಪ್ಪ ಬಂಧನವಾಗಿದೆ.

ನಿರೀಕ್ಷಣಾ ಜಾಮೀನು ವಜಾ ಆದ ಬಳಿಕ ನಾಪತ್ತೆಯಾಗಿದ್ದ ಮಾಡಾಳ್‌ ವಿರೂಪಾಕ್ಷಪ್ಪ ಅವರನ್ನು ತುಮಕೂರಿನ ಹೊರ ವಲಯದ ಕ್ಯಾತಸಂದ್ರ ಟೋಲ್‌ ಬಳಿ ಲೋಕಾಯಕ್ತ ಪೊಲೀಸರು ಬಂಧಿಸಿದ್ದಾರೆ.

ಇನ್ನೋವಾ ಕಾರಿನಲ್ಲಿ ಬೆಂಗಳೂರು ಕಡೆಗೆ ಬರುತ್ತಿದ್ದ ಅವರನ್ನು ಅಡ್ಡಗಟ್ಟಿದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಾಡಾಳ್ ವಿರೂಪಾಕ್ಷಪ್ಪ ಬಂಧನವೀಗ ಆಡಳಿತ ಪಕ್ಷಕ್ಕೆ ಭಾರೀ ಮುಜುಗರ ತರಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮಾಡಾಳ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್, ಅಕ್ರಮ ಟೆಂಡರ್ ಮಂಜೂರಿಗಾಗಿ ಗುತ್ತಿಗೆದಾರರಿಂದ ಲಂಚಪಡೆಯುತ್ತಿದ್ದ. ಈ ವೇಳೆ ದಾಳಿ ನಡೆಸಿದ್ದ ಲೋಕಾಯುಕ್ತ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.ಬಂಧನದ ವೇಳೆ 8ಕೋಟಿ ರೂಪಾಯಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು.

ಈ ಸುದ್ದಿ ಓದಿದ್ದೀರಾ? : ಜಾಮೀನು ರದ್ದಾಗುತ್ತಿದ್ದಂತೆ ಮಾಡಾಳ್‌ ನಾಪತ್ತೆ; ಬಂಧನಕ್ಕೆ ವಿಶೇಷ ತಂಡ ರಚಿಸಿದ ಲೋಕಾಯುಕ್ತ ಪೊಲೀಸರು

ಘಟನೆ ನಡೆದ ಒಂದು ವಾರದವರೆಗೆ ತಲೆಮರೆಸಿಕೊಂಡಿದ್ದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ, ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದರು. ಇಂದು ಅದೇ ಜಾಮೀನನ್ನು ಹೈಕೋರ್ಟ್ ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಮಾಡಾಳ್ ಬಂಧನವಾಗಿದೆ.

Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಈ ದಿನ’ ಸಮೀಕ್ಷೆ | ಬೆಲೆ ಏರಿಕೆಗೆ ಬಿಜೆಪಿಯೇ ಕಾರಣ ಅಂತಾರೆ ಮತದಾರರು!

2014ರಲ್ಲಿ ಚುನಾವಣಾ ಪ್ರಚಾರಕ್ಕೆ ನರೇಂದ್ರ ಮೋದಿ ಮತ್ತು ಬಿಜೆಪಿಗೆ ಪ್ರಮುಖ ವಿಚಾರವಾಗಿದ್ದು...

ಫ್ರಿ ಬಸ್ | ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ; ಬಿಜೆಪಿ ಪ್ರಚಾರಕಿ, ನಟಿ ಶೃತಿ ವಿವಾದಾತ್ಮಕ ಹೇಳಿಕೆ

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ...

ಮಲ್ಲಿಕಾರ್ಜುನ ಖರ್ಗೆ ಸೋಲು ರಾಜ್ಯಕ್ಕೆ ದೊಡ್ಡ ನಷ್ಟವಾಗಿದೆ, ಈ ಬಾರಿ ಹಾಗೇ ಆಗಬಾರದು: ಸಿದ್ದರಾಮಯ್ಯ

ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಮಲ್ಲಿಕಾರ್ಜುನ ಖರ್ಗೆಯವರು ಸೋತಿದ್ದರಿಂದ ಹೆಚ್ಚು...

ಹಾಸನ, ಮಂಡ್ಯದಲ್ಲಿ ಬಿಜೆಪಿ ನಾಯಕರ ಸಹಕಾರ ದೊರೆತಿಲ್ಲ: ಹೆಚ್‌ ಡಿ ದೇವೇಗೌಡ

ಹಾಸನದಲ್ಲಿ ಬಿಜೆಪಿಯ ಕೆಲವರು ವಿರೋಧ ಮಾಡುತ್ತಿದ್ದಾರೆ. ಮಂಡ್ಯದಲ್ಲಿ ಸುಮಲತಾ ಅಂಬರೀಶ್‌ ಅವರು...