ಮಧ್ಯಪ್ರದೇಶ | ಸತತ ಏಳು ಬಾರಿ ಒಂದೇ ಕ್ಷೇತ್ರದಲ್ಲಿ ಗೆದ್ದಿದ್ದ ವಿಪಕ್ಷ ನಾಯಕನಿಗೆ ಹಿನ್ನಡೆ!

Date:

Advertisements

ಮಧ್ಯಪ್ರದೇಶ ಕಾಂಗ್ರೆಸ್‌ನ ಕಾರ್ಯಾಧ್ಯಕ್ಷ ಜಿತು ಪಟ್ಟಾರಿ ಅವರು ರೌ ಕ್ಷೇತ್ರದಲ್ಲಿ ಹಿನ್ನಡೆ ಸಾಧಿಸಿದ್ದಾರೆ. ಬಿಜೆಪಿಯ ಮಧು ವರ್ಮಾ ಅವರು ಜಿತು ಪಟ್ಟಾರಿ ಅವರನ್ನು ಹಿಂದಿಕ್ಕಿ, ಮುನ್ನಡೆ ಸಾಧಿಸಿದ್ದಾರೆ.

ಪಟ್ವಾರಿ ಅವರು ಈ ಹಿಂದೆ ಕಮಲ್ ನಾಥ್ ಸರ್ಕಾರದಲ್ಲಿ ಉನ್ನತ ಶಿಕ್ಷಣ, ಯುವಜನ ಮತ್ತು ಕ್ರೀಡಾ ವ್ಯವಹಾರಗಳ ಸಚಿವರೂ ಆಗಿದ್ದರು.

ಇನ್ನು, ವಿರೋಧ ಪಕ್ಷದ ನಾಯಕರಾಗಿದ್ದ ಕಾಂಗ್ರೆಸ್‌ ನಾಯಕ ಡಾ. ಗೋವಿಂದ್‌ ಸಿಂಗ್‌ ಕೂಡ ಲಾಹಾರ್ ಕ್ಷೇತ್ರದಲ್ಲಿ ಹಿನ್ನಡೆಯಲ್ಲಿದ್ದಾರೆ. ಅಲ್ಲಿ, ಬಿಜೆಪಿಯ ಅಂಬ್ರಿಶ್ ಶರ್ಮಾ ಅವರು ಮುನ್ನಡೆ ಸಾಧಿಸಿದ್ದಾರೆ.

Advertisements

ಸಿಂಗ್ ಅವರು ಲಹಾರ್ ಕ್ಷೇತ್ರದಿಂದ ಹಾಲಿ ಶಾಸಕರಾಗಿದ್ದಾರೆ. ಅವರು 1990ರಿಂದ ಇಲ್ಲಿಯವರೆಗೆ ಸತತ ಏಳು ಬಾರಿ ಗೆಲುವು ಸಾಧಿಸಿದ್ದಾರೆ. ಆದರೆ, ಈಗ ಹಿನ್ನೆಡೆ ಅನುಭವಿಸಿದ್ದಾರೆ.

ಹಾಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಪ್ರಹ್ಲಾದ್ ಪಟೇಲ್ ಮತ್ತು ನರೇಂದ್ರ ಸಿಂಗ್ ತೋಮರ್ ಕ್ರಮವಾಗಿ ಬುಧ್ನಿ, ನರಸಿಂಗ್‌ಪುರ ಮತ್ತು ದಿಮಾನಿ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಅಲ್ಲದೆ, ರಾಜ್ಯದಲ್ಲಿ ಬಿಜೆಪಿ 149 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.

ಮತ್ತೊಂದೆಡೆ ಕಾಂಗ್ರೆಸ್ ಕೇವಲ 62 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಚಿಂದ್ವಾರಾ ಕ್ಷೇತ್ರದಲ್ಲಿ ಕಮಲನಾಥ್ ಮುನ್ನಡೆ ಸಾಧಿಸಿದ್ದಾರೆ.

“ಡಬಲ್ ಇಂಜಿನ್ ಸರ್ಕಾರವು ಕೇಂದ್ರ ಸರ್ಕಾರದ ಯೋಜನೆಗಳನ್ನು ಸರಿಯಾಗಿ ಜಾರಿಗೊಳಿಸಿದೆ. ಜೊತೆಗೆ, ರಾಜ್ಯ ಸರ್ಕಾರದ ಯೋಜನೆಗಳು ಜನರನ್ನು ತಲುಪಿವೆ. ಎಲ್ಲ ಕಡೆಯೂ ನಮ್ಮ ಮೇಲಿನ ಜನರ ಪ್ರೀತಿ ಕಾಣುತ್ತಿದೆ. ಬಿಜೆಪಿಗೆ ಆರಾಮವಾಗಿ ಬಹುಮತ ಪಡೆಯುತ್ತದೆ: ಎಂದು ಚೌಹಾಣ್ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X