ಮಧ್ಯಪ್ರದೇಶ | ಹಿಜಾಬ್ ವಿವಾದಕ್ಕೆ ಶಾಲೆಯೊಂದು ಬಲಿ; ಮೂವರು ಶಿಕ್ಷಕರ ಬಂಧನ

Date:

Advertisements

ಮುಸ್ಲಿಮೇತರ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಲು ಒತ್ತಾಯಿಸಲಾಗಿದೆ ಎಂಬ ಆರೋಪದ ಮೇಲೆ ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ಶಾಲೆಯೊಂದರ ಮಾನ್ಯತೆಯನ್ನು ರದ್ದುಪಡಿಸಲಾಗಿದೆ. ಅಲ್ಲದೆ, ಶಾಲೆಯ ಪ್ರಾಂಶುಪಾಲರು ಸೇರಿದಂತೆ ಮೂವರು ಶಿಕ್ಷಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಮೇ ತಿಂಗಳ ಕೊನೆಯಲ್ಲಿ ಗಂಗಾ ಜಮುನಾ ಹೈಯರ್ ಸೆಕೆಂಡರಿ ಶಾಲೆಯ ಬೋರ್ಡ್ ಪರೀಕ್ಷೆಯಲ್ಲಿ ಸಾಧನೆ ಮಾಡಿದ 18 ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದ ಪೋಸ್ಟರ್‌ವೊಂದು ವೈರಲ್ ಆಗಿತ್ತು. ಪೋಸ್ಟರ್‌ನಲ್ಲಿದ್ದ ಕೆಲವು ವಿದ್ಯಾರ್ಥಿನಿಯರು ಸ್ಕಾರ್ಫ್‌ ಧರಿಸಿದ್ದರು. ಅದನ್ನು ಮುಸ್ಲಿಮೇತರ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಆ ಬಳಿಕ, ವಿವಾದ ಮುನ್ನೆಲೆಗೆ ಬಂದಿತ್ತು.

ಹಿಂದುತ್ವವಾದಿ ಕೋಮು ಸಂಘಟನೆಗಳು ಧಾರ್ಮಿಕ ಮತಾಂತರದ ನಡೆಯುತ್ತಿದೆ ಎಂಬ ಆರೋಪಗಳನ್ನು ಮಾಡಿದ್ದವು. ಶಾಲೆಯ ನೋಂದಣಿಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದವು. ಆದರೆ, ಶಾಲೆಯಲ್ಲಿ ಸ್ಕಾರ್ಫ್‌ ಧರಿಸುವುದು ಸಮವಸ್ತ್ರದ ಭಾಗವಾಗಿದೆ. ಯಾವುದೇ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಲು ಒತ್ತಾಯಿಸಿಲ್ಲ ಎಂದು ಶಾಲೆಯ ಆಡಳಿತ ಮಂಡಳಿ ಹೇಳಿರುವುದಾಗಿ ‘ಟಿಐಇ‘ ವರದಿ ಮಾಡಿದೆ.

Advertisements

ಈ ಮಧ್ಯೆ, ಪ್ರಕರಣ ಸಂಬಂಧ ಶಾಲೆಯ ಪ್ರಾಂಶುಪಾಲೆ ಅಫ್ಶಾ ಶೇಖ್, ಗಣಿತ ಶಿಕ್ಷಕ ಅನಾಸ್ ಅತಾಹರ್ ಮತ್ತು ಭದ್ರತಾ ಸಿಬ್ಬಂದಿ ರುಸ್ತಮ್ ಅಲಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.

“ಮುಖ್ಯವಾಗಿ ಶಾಲಾ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬದ ಸದಸ್ಯರನ್ನು ಒಳಗೊಂಡ ಆರು-ಏಳು ಸಾಕ್ಷಿಗಳ ಹೇಳಿಕೆಗಳನ್ನು ಆಧರಿಸಿ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ” ಎಂದು ದಾಮೋಹ್ ಪೊಲೀಸ್ ವರಿಷ್ಠಾಧಿಕಾರಿ ರಾಕೇಶ್ ಸಿಂಗ್ ಹೇಳಿದ್ದಾರೆ. ಅವರೆಲ್ಲರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಶಾಲಾ ಆಡಳಿತ ಸಮಿತಿಯ 11 ಸದಸ್ಯರ ವಿರುದ್ಧ ಐಪಿಸಿ ಸೆಕ್ಷನ್ 295 (ಯಾವುದೇ ಸಮುದಾಯ ವ್ಯಕ್ತಿಗಳು ಪವಿತ್ರವೆಂದು ಪರಿಗಣಿಸುವ ಯಾವುದೇ ವಸ್ತುವನ್ನು ಹಾನಿಗೊಳಿಸುವುದು ಅಥವಾ ಅಪವಿತ್ರಗೊಳಿಸುವುದು) ಮತ್ತು 506 (ಅಪರಾಧ ಬೆದರಿಕೆ) ಹಾಗೂ ಮಧ್ಯಪ್ರದೇಶದ ಧಾರ್ಮಿಕ ಸ್ವಾತಂತ್ರ್ಯ ಕಾಯಿದೆ-2021ರ ನಿಬಂಧನೆಗಳ ಅಡಿಯಲ್ಲಿ ದಾಮೋಹ್ ಪೊಲೀಸರು ಜೂನ್ 7 ರಂದು ಪ್ರಕರಣ ದಾಖಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: 2002ರ ಗುಜರಾತ್ ಗಲಭೆ | ಬೆಸ್ಟ್ ಬೇಕರಿ ಪ್ರಕರಣದಲ್ಲಿ ಇಬ್ಬರು ಆರೋಪಿಗಳು ಖುಲಾಸೆ

ಜೂನ್ 2 ರಂದು, ರಾಜ್ಯ ಶಿಕ್ಷಣ ಇಲಾಖೆಯು ಶಾಲೆಯ ಮಾನ್ಯತೆಯನ್ನು ರದ್ದುಗೊಳಿಸಿದೆ. ವಿದ್ಯಾರ್ಥಿಗಳಿಗೆ ಮೀಸಲಾದ ಹಲವಾರು ಸೌಲಭ್ಯಗಳು ಅವರಿಗೆ ಲಭ್ಯವಿಲ್ಲ ಎಂದು ಆರೋಪಿಸಲಾಗಿದೆ. ಅಲ್ಲದೆ, ಶಾಲೆಯು ಅನಧಿತ ಕಟ್ಟಡವೆಂದು ಪರಿಗಣಿಸಿ ಕಟ್ಟದ ಭಾಗಗಳನ್ನು ಕಡವುವುದಾಗಿ ಸ್ಥಳೀಯ ಪುರಸಭೆ ಬೆದರಿಕೆ ಹಾಕಿದೆ ಎಂದು ತಿಳಿದುಬಂದಿದೆ.

ಈ ಶಾಲೆಯನ್ನು 2010ರಲ್ಲಿ ಗಂಗಾ ಜಮುನಾ ವೆಲ್ಫೇರ್ ಸೊಸೈಟಿ ಸ್ಥಾಪಿಸಿತ್ತು. ಸುಮಾರು 1,200 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಇವರಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಕಾರ್ಮಿಕ ಕುಟುಂಬಗಳ ಹಿನ್ನೆಲೆ ಹೊಂದಿದ್ದಾರೆ. ಅವರ ಪೋಷಕರು ಕೂಲಿಗಳು, ರೈತರು ಮತ್ತು ಬೀಡಿ ತಯಾರಕರಾಗಿ ಕೆಲಸ ಮಾಡುತ್ತಾರೆ ಎಂದು ವರದಿಯಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X