ಕಾರಜೋಳ ಮೇಲೆ ಹಲ್ಲೆ ಯತ್ನದ ಹಿಂದೆ ಮಹದೇವಪ್ಪ, ಪ್ರಿಯಾಂಕ್ ಖರ್ಗೆ ಕೈವಾಡ: ಪಿ ರಾಜೀವ್ ಆರೋಪ

Date:

Advertisements

ರಾಜ್ಯದ ಮಾಜಿ ಉಪ ಮುಖ್ಯಮಂತ್ರಿಗಳು ಮತ್ತು ದಲಿತ ನಾಯಕ ಗೋವಿಂದ ಕಾರಜೋಳ ಅವರ ಮೇಲೆ ಚಿತ್ರದುರ್ಗದಲ್ಲಿ ಹಲ್ಲೆಗೆ ಪ್ರಯತ್ನ ಮಾಡಿದ್ದನ್ನು ತೀವ್ರವಾಗಿ ಖಂಡಿಸುವೆ. ಕಾರಜೋಳರವರ ಮೇಲೆ ಹಲ್ಲೆ ನಡೆಸಲು ದುಷ್ಪ್ರೇರಣೆ ಮಾಡಿ, ಒಳಸಂಚನ್ನು ಮಾಡಿರುವುದರಲ್ಲಿ ಡಾ.ಎಚ್.ಸಿ.ಮಹದೇವಪ್ಪ ಮತ್ತು ಪ್ರಿಯಾಂಕ್ ಖರ್ಗೆ ಅವರ ಕೈವಾಡವಿದೆ ಎಂದು ಬಿಜೆಪಿ ರಾಜ್ಯ ವಕ್ತಾರ ಮತ್ತು ಮಾಜಿ ಶಾಸಕ ಪಿ.ರಾಜೀವ್ ಆರೋಪಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ದಲಿತರಿಗೆ ಮೀಸಲಿಟ್ಟ ಹಣವನ್ನು ಈ ಸರಕಾರ ದುರ್ಬಳಕೆ ಮಾಡಿದೆ. ಇದು ದಲಿತ ಸಮುದಾಯಗಳಿಗೆ ಅರ್ಥ ಆದರೆ ರಾಜ್ಯದಲ್ಲಿ ದೊಡ್ಡ ಕ್ರಾಂತಿ ಆಗುವ ಭಯ ಸರಕಾರ, ಕಾಂಗ್ರೆಸ್ಸನ್ನು ಕಾಡುತ್ತಿದೆ” ಎಂದರು.

“ದಲಿತರಿಗೆ ಈ ವಿಚಾರ ಗೊತ್ತಾಗಬಾರದು; ಯಾರೂ ಇದನ್ನು ತಿಳಿಸಬಾರದೆಂಬ ದುರುದ್ದೇಶದೊಂದಿಗೆ ಕಾಂಗ್ರೆಸ್ ಪಕ್ಷವು ಕಾರಜೋಳರ ಮೇಲೆ ಹಲ್ಲೆಗೆ ಪ್ರೇರಣೆ ಕೊಟ್ಟಿದೆ. ತೆರೆಮರೆಯ ಕೆಲಸ ಮಾಡಿದೆ. ಗೃಹಜ್ಯೋತಿ ಯೋಜನೆಯಡಿ ಎಸ್‍ಇಪಿಟಿಎಸ್‍ಪಿಯಡಿ 2,400 ಕೋಟಿ ಇಟ್ಟಿದ್ದಾರೆ. ಅದೇರೀತಿ ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಯೋಜನೆಯಡಿ 2,800 ಕೋಟಿ ಇಟ್ಟಿದ್ದಾರೆ. ಈ 2,800 ಕೋಟಿ ಹಣದಲ್ಲಿ ಶೇ 90 ದಲಿತರಿಗೆ ಪ್ರಯೋಜನ ಸಿಗುತ್ತದೆ. ಹಾಗಿದ್ದರೆ 2400 ಕೋಟಿಯನ್ನು ಮತ್ತೆ ಇಟ್ಟಿದ್ಯಾಕೆ” ಎಂದು ಪ್ರಶ್ನಿಸಿದರು.‌

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜಕೀಯ ಸಂಸ್ಕೃತಿಯನ್ನು ಅಧೋಗತಿಗೆ ತಳ್ಳುತ್ತಿರುವ ಬಿಜೆಪಿ ಅಂತಃಕಲಹ

“ಇದೆಲ್ಲವೂ ದಲಿತ ಸಮುದಾಯ, ದಲಿತ ಮುಖಂಡರಿಗೆ ತಿಳಿದರೆ ಈ ಸರಕಾರವು ಸುಮಾರು 10 ಸಾವಿರ ಕೋಟಿ ಹಣವನ್ನು ದಲಿತ ಸಮುದಾಯಕ್ಕಾಗಿ ಮತ್ತೆ ಕೊಡಬೇಕಾಗುತ್ತದೆ. ಅದೇ ಭಯ ಸಿದ್ದರಾಮಯ್ಯರನ್ನೂ ಕಾಡುತ್ತಿದೆ. ದಲಿತರು ಜಾಗೃತ ಆಗಬಾರದು. ಈ ಸಂಬಂಧ ತಿಳಿವಳಿಕೆ ಕೊಡುವ ಕೆಲಸವನ್ನು ಮಾಡಬಾರದೆಂಬ ಉದ್ದೇಶದಿಂದ ಭಯ ಹುಟ್ಟಿಸಲು ಮಾಜಿ ಉಪ ಮುಖ್ಯಮಂತ್ರಿಗಳು ಮತ್ತು ದಲಿತ ಸಮುದಾಯದ ದೊಡ್ಡ ನಾಯಕ ಗೋವಿಂದ ಕಾರಜೋಳ ಅವರ ಮೇಲೆ ಹಲ್ಲೆ ಮಾಡಿ, ಆ ಮೂಲಕ ದಲಿತ ಜಾಗೃತ ಮನಸ್ಸುಗಳಿಗೆ ಸಂದೇಶ ಕೊಡಲು ಹೊರಟಿದ್ದರು” ಎಂದು ವಿಶ್ಲೇಷಿಸಿದರು.

“ಸದನದಲ್ಲಿ ಮಹದೇವಪ್ಪ ಅವರು ದಲಿತರ ದಾರಿತಪ್ಪಿಸುವ ಉತ್ತರ ಕೊಟ್ಟಿದ್ದಾರೆ. 11 ಸಾವಿರ ಕೋಟಿ ಹಣವನ್ನು ದಲಿತರಿಗಾಗಿ ಬಳಸುವಂತಾಗಲು ತೀವ್ರತರದ ಹೋರಾಟ ಮಾಡುತ್ತೇವೆ. ದಲಿತ ಮುಖಂಡರು, ದಲಿತ ಸಂಘಟನೆಗಳು, ದಲಿತ ಶಾಸಕರಿಗೆ ಮಾಹಿತಿ, ಅಂಕಿ ಸಂಖ್ಯೆ ಕೊಟ್ಟು ಸರಕಾರ ಮಾಡಿದ ಅನ್ಯಾಯದ ವಿವರ ನೀಡಿ ಆಂದೋಲನ ರೂಪಿಸಲಿದ್ದೇವೆ” ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X