ಮಹಾರಾಷ್ಟ್ರ | ಸಂಪುಟ ಪುನಾರಚನೆ: ಅಜಿತ್‌ ಪವಾರ್‌ ಬಣಕ್ಕೆ ಹಣಕಾಸು ಸೇರಿ ಪ್ರಮುಖ ಖಾತೆ

Date:

Advertisements

ಎನ್‌ಸಿಪಿ ಬಂಡಾಯ ಶಾಸಕರು ಮಹಾರಾಷ್ಟ್ರ ರಾಜ್ಯದ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಬೆಂಬಲ ನೀಡಿದ ನಂತರ ಸಂಪುಟ ಪುನಾರಚನೆ ಮಾಡಲಾಗಿದೆ. ಡಿಸಿಎಂ ಅಜಿತ್‌ ಪವಾರ್‌ ಅವರಿಗೆ ಹಣಕಾಸು ಮತ್ತು ಯೋಜನೆ ಹಾಗೂ ಛಗನ್‌ ಭುಜಬುಲ್‌ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ನೀಡಲಾಗಿದೆ.

ಮಹಾರಾಷ್ಟ್ರ ಸಿಎಂ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಬಣದ ಶಾಸಕ ಭರತ್ ಗೊಗವಾಲೆ ಹಾಗೂ ಪ್ರಹಾರ್‌ ಪಕ್ಷದ ಶಾಸಕ ಬಚ್ಚು ಕಡು ಅವರ ತೀವ್ರ ವಿರೋಧದ ನಡುವೆಯೂ ಅಜಿತ್‌ ಅವರಿಗೆ ಹಣಕಾಸು ಖಾತೆ ನೀಡಲಾಗಿದೆ. ಹಿಂದಿನ ಮಹಾ ಅಘಾಡಿ ಸರ್ಕಾರದಲ್ಲಿ ಅಜಿತ್‌ ಹಣಕಾಸು ಸಚಿವರಾಗಿದ್ದಾಗ ಶಿವಸೇನೆ ಶಾಸಕರ ಕ್ಷೇತ್ರಗಳಿಗೆ ಹಣ ಬಿಡುಗಡೆಗೆ ನಿರ್ಬಂಧ ವಿಧಿಸಿದ್ದರು ಎಂದು ಆರೋಪಿಸಿ ಈ ಶಾಸಕರು ಆರೋಪಿಸಿದ್ದರು.

ಇಂದಿನ ಸಂಪುಟ ಪುನಾರಚನೆಯಲ್ಲಿ ಎನ್‌ಸಿಪಿಯ ಅಜಿತ್ ಪವಾರ್ ಬಣಕ್ಕೆ ಪ್ರಮುಖ ಖಾತೆಗಳನ್ನು ನೀಡಲಾಗಿದೆ. ದಿಲೀಪ್ ವಾಲ್ಸೆ ಪಾಟೀಲ್ ಅವರಿಗೆ ಸಹಕಾರ ಸಚಿವಾಲಯ, ಧನಂಜಯ್ ಮುಂಡೆಗೆ ಕೃಷಿ, ಅದಿತಿ ತತ್ಕರೆ ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಅನಿಲ್ ಪಾಟೀಲ್ ಅವರಿಗೆ ಪರಿಹಾರ ಮತ್ತು ಪುನರ್ವಸತಿ, ವಿಪತ್ತು ನಿರ್ವಹಣೆ ಖಾತೆ ನೀಡಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಭಾರತದ ಐತಿಹಾಸಿಕ ‘ಚಂದ್ರಯಾನ 3’ ಯಶಸ್ವಿ ಉಡಾವಣೆ; 20 ವರ್ಷದ ಹಿಂದೆ ಆರಂಭವಾದ ಯೋಜನೆ ಸಾಗಿದ್ದು ಹೇಗೆ?

ಈ ಮೊದಲು ಸಹಕಾರ ಇಲಾಖೆ ಬಿಜೆಪಿಯ ಅತುಲ್ ಸೇವ್ ಹಾಗೂ ಕೃಷಿ ಖಾತೆ ಶಿವಸೇನೆಯ ಅಬ್ದುಲ್ ಸತ್ತಾರ್ ಅವರ ಬಳಿ ಇತ್ತು.

ಸಂಪುಟ ಪುನಾರಚನೆಯ ನಂತರವೂ ಸರ್ಕಾರದಲ್ಲಿ ಅಸಮಾಧಾನ ಇನ್ನೂ ಮುಂದುವರಿದಿದೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ತಕ್ಷಣದ ವಿಸ್ತರಣೆ ಮಾಡಿದ್ದರೂ ಅಧಿಕಾರ ಹಂಚಿಕೆ ಮಾತ್ರ ಜುಲೈ 17 ರಂದು ಪ್ರಾರಂಭವಾಗುವ ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನದ ನಂತರ ನಡೆಯಬೇಕು ಎಂಬ ಅಭಿಪ್ರಾಯವನ್ನು ಬಿಜೆಪಿ ತೆಗೆದುಕೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X